<p><strong>ಬೆಂಗಳೂರು</strong>: ರಾಜ್ಯ ಸರ್ಕಾರಕ್ಕೆ ಲವಲೇಶವಾದರೂ ಮಾನವೀಯತೆ ಇದ್ದರೆ, ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಎರಡೂ ಕುಟುಂಬಕ್ಕೆ ಕನಿಷ್ಠ ₹1 ಕೋಟಿ ಪರಿಹಾರ ಕೊಡಬೇಕಿತ್ತು ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿಸೂರ್ಯ ಹೇಳಿದ್ದಾರೆ.</p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೊತ್ತವನ್ನು ಬ್ಯಾಂಕಿನಲ್ಲಿ ಠೇವಣಿ ಇಟ್ಟರೆ ಅದರ ಬಡ್ಡಿಯಿಂದ ಅವರ ಕುಟುಂಬದ ಮಕ್ಕಳ ಶಿಕ್ಷಣ ನಡೆಯುತ್ತದೆ ಎಂದು ತಿಳಿಸಿದ್ದಾರೆ.</p><p>‘ನೆರೆಯ ರಾಜ್ಯದಲ್ಲಿ ಆನೆ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟವರಿಗೆ ಸರ್ಕಾರ ₹15 ಲಕ್ಷ ಕೊಟ್ಟಿತ್ತು. ಉಗ್ರರ ದಾಳಿಯಲ್ಲಿ ನಮ್ಮ ರಾಜ್ಯದ ಇಬ್ಬರು ಮೃತಪಟ್ಟಿದ್ದು, ಅಷ್ಟು ಮೊತ್ತವಾದರೂ ಕೊಡಬೇಕಿತ್ತು. ಮುಸ್ಲಿಂ ವೋಟಿಗೆ ತಮ್ಮನ್ನು ತಾವು ಮಾರಿಕೊಂಡ ಕಾಂಗ್ರೆಸ್ ಪಕ್ಷದಿಂದ ಇದಕ್ಕಿಂತ ಜಾಸ್ತಿ ನಿರೀಕ್ಷೆ ಮಾಡಲು ಸಾಧ್ಯವೇ ಇಲ್ಲ. ಈ ಕುಟುಂಬಗಳಿಗೆ ಶಕ್ತಿಕೊಡುವ ಜವಾಬ್ದಾರಿ ಹಿಂದೂ ಸಮಾಜಕ್ಕೆ ಇದೆ’ ಎಂದರು.</p><p>‘ಬಿಜೆಪಿ ವತಿಯಿಂದ ನಾಳೆ ಭರತ್ ಭೂಷಣ್ ಮನೆಗೆ ಹೋಗಿ ₹10 ಲಕ್ಷ ಮತ್ತು ಒಂದೆರಡು ದಿನಗಳಲ್ಲಿ ಮಂಜುನಾಥ್ ಅವರ ಮನೆಗೆ ಹೋಗಿ ₹10 ಲಕ್ಷ ಕೊಡಲಿದ್ದೇವೆ’ ಎಂದರು.</p><p>‘ಭಯೋತ್ಪಾದಕರು ಹಿಂದೂಗಳನ್ನು ಧರ್ಮದ ಆಧಾರದಲ್ಲಿ ಕೊಂದಿದ್ದು ಸರಿಯಲ್ಲ ಎಂದು ಅಸಾದುದ್ದೀನ್ ಒವೈಸಿ ಒಪ್ಪಿಕೊಂಡಿದ್ದಾರೆ. ಆದರೆ, ಕಾಂಗ್ರೆಸ್ನವರು ಮಾತ್ರ ಒಪ್ಪಲು ತಯಾರಿಲ್ಲ. ಎಂತಹ ದರಿದ್ರ, ದೈನೇಸಿ ಸ್ಥಿತಿಗೆ ಕಾಂಗ್ರೆಸ್ ಪಕ್ಷ ಇಳಿದಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಿಲ್ಲ’ ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯ ಸರ್ಕಾರಕ್ಕೆ ಲವಲೇಶವಾದರೂ ಮಾನವೀಯತೆ ಇದ್ದರೆ, ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಎರಡೂ ಕುಟುಂಬಕ್ಕೆ ಕನಿಷ್ಠ ₹1 ಕೋಟಿ ಪರಿಹಾರ ಕೊಡಬೇಕಿತ್ತು ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿಸೂರ್ಯ ಹೇಳಿದ್ದಾರೆ.</p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೊತ್ತವನ್ನು ಬ್ಯಾಂಕಿನಲ್ಲಿ ಠೇವಣಿ ಇಟ್ಟರೆ ಅದರ ಬಡ್ಡಿಯಿಂದ ಅವರ ಕುಟುಂಬದ ಮಕ್ಕಳ ಶಿಕ್ಷಣ ನಡೆಯುತ್ತದೆ ಎಂದು ತಿಳಿಸಿದ್ದಾರೆ.</p><p>‘ನೆರೆಯ ರಾಜ್ಯದಲ್ಲಿ ಆನೆ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟವರಿಗೆ ಸರ್ಕಾರ ₹15 ಲಕ್ಷ ಕೊಟ್ಟಿತ್ತು. ಉಗ್ರರ ದಾಳಿಯಲ್ಲಿ ನಮ್ಮ ರಾಜ್ಯದ ಇಬ್ಬರು ಮೃತಪಟ್ಟಿದ್ದು, ಅಷ್ಟು ಮೊತ್ತವಾದರೂ ಕೊಡಬೇಕಿತ್ತು. ಮುಸ್ಲಿಂ ವೋಟಿಗೆ ತಮ್ಮನ್ನು ತಾವು ಮಾರಿಕೊಂಡ ಕಾಂಗ್ರೆಸ್ ಪಕ್ಷದಿಂದ ಇದಕ್ಕಿಂತ ಜಾಸ್ತಿ ನಿರೀಕ್ಷೆ ಮಾಡಲು ಸಾಧ್ಯವೇ ಇಲ್ಲ. ಈ ಕುಟುಂಬಗಳಿಗೆ ಶಕ್ತಿಕೊಡುವ ಜವಾಬ್ದಾರಿ ಹಿಂದೂ ಸಮಾಜಕ್ಕೆ ಇದೆ’ ಎಂದರು.</p><p>‘ಬಿಜೆಪಿ ವತಿಯಿಂದ ನಾಳೆ ಭರತ್ ಭೂಷಣ್ ಮನೆಗೆ ಹೋಗಿ ₹10 ಲಕ್ಷ ಮತ್ತು ಒಂದೆರಡು ದಿನಗಳಲ್ಲಿ ಮಂಜುನಾಥ್ ಅವರ ಮನೆಗೆ ಹೋಗಿ ₹10 ಲಕ್ಷ ಕೊಡಲಿದ್ದೇವೆ’ ಎಂದರು.</p><p>‘ಭಯೋತ್ಪಾದಕರು ಹಿಂದೂಗಳನ್ನು ಧರ್ಮದ ಆಧಾರದಲ್ಲಿ ಕೊಂದಿದ್ದು ಸರಿಯಲ್ಲ ಎಂದು ಅಸಾದುದ್ದೀನ್ ಒವೈಸಿ ಒಪ್ಪಿಕೊಂಡಿದ್ದಾರೆ. ಆದರೆ, ಕಾಂಗ್ರೆಸ್ನವರು ಮಾತ್ರ ಒಪ್ಪಲು ತಯಾರಿಲ್ಲ. ಎಂತಹ ದರಿದ್ರ, ದೈನೇಸಿ ಸ್ಥಿತಿಗೆ ಕಾಂಗ್ರೆಸ್ ಪಕ್ಷ ಇಳಿದಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಿಲ್ಲ’ ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>