<p><strong>ಬೆಂಗಳೂರು:</strong> ರಾಷ್ಟ್ರೀಕೃತ ಬ್ಯಾಂಕ್ಗಳು ಹಾಗೂ ಖಾಸಗಿ ಬ್ಯಾಂಕ್ಗಳು ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಆಗ್ರಹಿಸಿದೆ.</p>.<p>ಈ ಸಂಬಂಧ ವಿವಿಧ ರಾಷ್ಟ್ರೀಕೃತ ಬ್ಯಾಂಕ್ಗಳ ರಾಜ್ಯ ವಲಯದ ಪ್ರಧಾನ ವ್ಯವಸ್ಥಾಪಕರಿಗೆ ಸಮಿತಿಯ ಬೆಂಗಳೂರು ಜಿಲ್ಲಾ ಘಟಕವು ಮನವಿ ಸಲ್ಲಿಸಿ, ಕನ್ನಡದ ಬಳಕೆಯನ್ನು ಕಡ್ಡಾಯವಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದೆ.</p>.<p>‘ಬ್ಯಾಂಕ್ ಸಿಬ್ಬಂದಿಯ ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ. ಹಿಂದಿ ಹಾಗೂ ಇಂಗ್ಲಿಷ್ ಹೇರಿಕೆಯು ಕನ್ನಡಿಗರ ಉದ್ಯೋಗವನ್ನು ಕಿತ್ತುಕೊಳ್ಳುವ ಹುನ್ನಾರವಾಗಿದೆ. ಈ ವಾರ ಇನ್ನಷ್ಟು ಬ್ಯಾಂಕ್ಗಳ ಶಾಖೆಗಳಿಗೆ ಭೇಟಿ ನೀಡಿ, ಕನ್ನಡ ಅನುಷ್ಠಾನಕ್ಕೆ ಆಗ್ರಹಿಸಲಾಗುವುದು. ಬ್ಯಾಂಕ್ಗಳು ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು’ ಎಂದು ಸಮಿತಿಯ ನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆರೋಗ್ಯಸ್ವಾಮಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಷ್ಟ್ರೀಕೃತ ಬ್ಯಾಂಕ್ಗಳು ಹಾಗೂ ಖಾಸಗಿ ಬ್ಯಾಂಕ್ಗಳು ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಆಗ್ರಹಿಸಿದೆ.</p>.<p>ಈ ಸಂಬಂಧ ವಿವಿಧ ರಾಷ್ಟ್ರೀಕೃತ ಬ್ಯಾಂಕ್ಗಳ ರಾಜ್ಯ ವಲಯದ ಪ್ರಧಾನ ವ್ಯವಸ್ಥಾಪಕರಿಗೆ ಸಮಿತಿಯ ಬೆಂಗಳೂರು ಜಿಲ್ಲಾ ಘಟಕವು ಮನವಿ ಸಲ್ಲಿಸಿ, ಕನ್ನಡದ ಬಳಕೆಯನ್ನು ಕಡ್ಡಾಯವಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದೆ.</p>.<p>‘ಬ್ಯಾಂಕ್ ಸಿಬ್ಬಂದಿಯ ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ. ಹಿಂದಿ ಹಾಗೂ ಇಂಗ್ಲಿಷ್ ಹೇರಿಕೆಯು ಕನ್ನಡಿಗರ ಉದ್ಯೋಗವನ್ನು ಕಿತ್ತುಕೊಳ್ಳುವ ಹುನ್ನಾರವಾಗಿದೆ. ಈ ವಾರ ಇನ್ನಷ್ಟು ಬ್ಯಾಂಕ್ಗಳ ಶಾಖೆಗಳಿಗೆ ಭೇಟಿ ನೀಡಿ, ಕನ್ನಡ ಅನುಷ್ಠಾನಕ್ಕೆ ಆಗ್ರಹಿಸಲಾಗುವುದು. ಬ್ಯಾಂಕ್ಗಳು ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು’ ಎಂದು ಸಮಿತಿಯ ನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆರೋಗ್ಯಸ್ವಾಮಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>