‘ಬ್ಯಾಂಕ್ ಸಿಬ್ಬಂದಿಯ ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ. ಹಿಂದಿ ಹಾಗೂ ಇಂಗ್ಲಿಷ್ ಹೇರಿಕೆಯು ಕನ್ನಡಿಗರ ಉದ್ಯೋಗವನ್ನು ಕಿತ್ತುಕೊಳ್ಳುವ ಹುನ್ನಾರವಾಗಿದೆ. ಈ ವಾರ ಇನ್ನಷ್ಟು ಬ್ಯಾಂಕ್ಗಳ ಶಾಖೆಗಳಿಗೆ ಭೇಟಿ ನೀಡಿ, ಕನ್ನಡ ಅನುಷ್ಠಾನಕ್ಕೆ ಆಗ್ರಹಿಸಲಾಗುವುದು. ಬ್ಯಾಂಕ್ಗಳು ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು’ ಎಂದು ಸಮಿತಿಯ ನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆರೋಗ್ಯಸ್ವಾಮಿ ತಿಳಿಸಿದ್ದಾರೆ.