ಖಲೀದ್ ಷರೀಫ್ ಅವರು ಸಾಕಿದ ಕುದುರೆಯಲ್ಲಿ ಈ ರೋಗ ಪತ್ತೆಯಾದ ಹಿನ್ನೆಲೆಯಲ್ಲಿ ನಂಬರ್ 72, ಮೋದಿ ರಸ್ತೆ, ಡಿ.ಜೆ.ಹಳ್ಳಿ ಕೇಂದ್ರ ಸ್ಥಾನದಿಂದ ಸುತ್ತಲಿನ 5 ಕಿ.ಮೀ ವ್ಯಾಪ್ತಿ ಪ್ರದೇಶವನ್ನು ‘ರೋಗಪೀಡಿತ ವಲಯ’ ಹಾಗೂ 5 ರಿಂದ 25 ಕಿ.ಮೀ ಪ್ರದೇಶವನ್ನು ‘ಜಾಗೃತ ವಲಯ’ ಎಂದು ಪಶುಸಂಗೋಪನೆ ಹಾಗೂ ಹೈನುಗಾರಿಕೆ ಇಲಾಖೆ ಘೋಷಿಸಿದೆ.