<p><strong>ಬೆಂಗಳೂರು</strong>: ಬ್ಯಾಟರಿ ಪುನರ್ಬಳಕೆಗೆ ಸಂಬಂಧಿಸಿದ ಜಾಗತಿಕ ಸಮಾವೇಶ ನಗರದ ಹೋಟೆಲ್ ಲಲಿತ್ ಅಶೋಕ್ನಲ್ಲಿ ಬುಧವಾರ ಆರಂಭವಾಯಿತು.</p>.<p>ಕೇಂದ್ರ ಪರಿಸರ, ಅರಣ್ಯ ಮತ್ತು ಹವಾವಾನ ಬದಲಾವಣೆ ಸಚಿವಾಲಯ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಯೋಜಿಸಿರುವ ಈ ಸಮಾವೇಶ ಗುರುವಾರವೂ ನಡೆಯಲಿದೆ.</p>.<p>ಪರಿಸರ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಕುಮಾರ್ ಸಮಾವೇಶವನ್ನು ಉದ್ಘಾಟಿಸಿದರು. ಪರಿಸರ ಸಂರಕ್ಷಣೆ ಮತ್ತು ಆರ್ಥಿಕ ಮಿತವ್ಯಯದ ದೃಷ್ಟಿಯಿಂದ ಬ್ಯಾಟರಿಗಳ ಪುನರ್ಬಳಕೆಗೆ ಆದ್ಯತೆ ನೀಡಬೇಕು ಎಂದು ಅವರು ಸಲಹೆ ನೀಡಿದರು.</p>.<p>ನಗರದ ಊರ್ಧ್ವ ಮ್ಯಾನೇಜ್ಮೆಂಟ್ ಸಂಸ್ಥೆಯ ‘ರಿಕಾಮರ್ಸ್’ ವಿಭಾಗದ ನೇತೃತ್ವದಲ್ಲಿ ನಡೆದ ಈ ಸಮಾವೇಶದಲ್ಲಿ ಬ್ಯಾಟರಿಗಳ ಪುನರ್ಬಳಕೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಪರಿಸರ ಸ್ನೇಹಿ ಕ್ರಮಗಳು, ಅವುಗಳ ನಿರ್ವಹಣೆ, ಸಂಗ್ರಹದ ವ್ಯವಸ್ಥೆ ಮತ್ತು ಪುನರ್ಬಳಕೆ ಕ್ರಮಗಳ ಅನುಷ್ಠಾನದ ಕುರಿತು ಚರ್ಚೆ ನಡೆಯಿತು.</p>.<p>ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ವಿಜಯ್ಕುಮಾರ್ ಗೋಗಿ, ಮಂಡಳಿಯ ಸದಸ್ಯ ಕಾರ್ಯದರ್ಶಿ ಶ್ರೀನಿವಾಸಲು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬ್ಯಾಟರಿ ಪುನರ್ಬಳಕೆಗೆ ಸಂಬಂಧಿಸಿದ ಜಾಗತಿಕ ಸಮಾವೇಶ ನಗರದ ಹೋಟೆಲ್ ಲಲಿತ್ ಅಶೋಕ್ನಲ್ಲಿ ಬುಧವಾರ ಆರಂಭವಾಯಿತು.</p>.<p>ಕೇಂದ್ರ ಪರಿಸರ, ಅರಣ್ಯ ಮತ್ತು ಹವಾವಾನ ಬದಲಾವಣೆ ಸಚಿವಾಲಯ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಯೋಜಿಸಿರುವ ಈ ಸಮಾವೇಶ ಗುರುವಾರವೂ ನಡೆಯಲಿದೆ.</p>.<p>ಪರಿಸರ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಕುಮಾರ್ ಸಮಾವೇಶವನ್ನು ಉದ್ಘಾಟಿಸಿದರು. ಪರಿಸರ ಸಂರಕ್ಷಣೆ ಮತ್ತು ಆರ್ಥಿಕ ಮಿತವ್ಯಯದ ದೃಷ್ಟಿಯಿಂದ ಬ್ಯಾಟರಿಗಳ ಪುನರ್ಬಳಕೆಗೆ ಆದ್ಯತೆ ನೀಡಬೇಕು ಎಂದು ಅವರು ಸಲಹೆ ನೀಡಿದರು.</p>.<p>ನಗರದ ಊರ್ಧ್ವ ಮ್ಯಾನೇಜ್ಮೆಂಟ್ ಸಂಸ್ಥೆಯ ‘ರಿಕಾಮರ್ಸ್’ ವಿಭಾಗದ ನೇತೃತ್ವದಲ್ಲಿ ನಡೆದ ಈ ಸಮಾವೇಶದಲ್ಲಿ ಬ್ಯಾಟರಿಗಳ ಪುನರ್ಬಳಕೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಪರಿಸರ ಸ್ನೇಹಿ ಕ್ರಮಗಳು, ಅವುಗಳ ನಿರ್ವಹಣೆ, ಸಂಗ್ರಹದ ವ್ಯವಸ್ಥೆ ಮತ್ತು ಪುನರ್ಬಳಕೆ ಕ್ರಮಗಳ ಅನುಷ್ಠಾನದ ಕುರಿತು ಚರ್ಚೆ ನಡೆಯಿತು.</p>.<p>ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ವಿಜಯ್ಕುಮಾರ್ ಗೋಗಿ, ಮಂಡಳಿಯ ಸದಸ್ಯ ಕಾರ್ಯದರ್ಶಿ ಶ್ರೀನಿವಾಸಲು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>