<p><strong>ಬೆಂಗಳೂರು:</strong> ‘ಬಾನು ಮುಷ್ತಾಕ್, ದೀಪಾ ಭಾಸ್ತಿ ಅವರಿಂದಾಗಿ ಕನ್ನಡ ಸಾಹಿತ್ಯ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಕನ್ನಡದ ಮೇರು ಕೃತಿಗಳು ವಿಶ್ವಮಟ್ಟದಲ್ಲಿ ಪರಿಚಯವಾಗಬೇಕಾದರೆ ಇಂಗ್ಲಿಷ್ ಭಾಷಾಂತರ ಅಗತ್ಯ’ ಎಂದು ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಹೇಳಿದರು. </p>.<p>ಸಪ್ನ ಬುಕ್ ಹೌಸ್ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 15 ಪುಸ್ತಕಗಳ ಜನಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>‘ಕುವೆಂಪು ಅವರ ಮಲೆಗಳಲ್ಲಿ ಮದುಮಗಳು, ಶಿವರಾಮ ಕಾರಂತರ ಚೋಮನದುಡಿ ಸೇರಿದಂತೆ ಕನ್ನಡದ ಹಲವು ಮಹತ್ವದ ಕೃತಿಗಳು ಜಾಗತಿಕ ಮಟ್ಟದ ಪ್ರಶಸ್ತಿಗಳಿಗೆ ಅರ್ಹವಾಗಿವೆ. ಆದರೆ 600ರಿಂದ 700 ಪುಟದ ಈ ಕೃತಿಗಳು ಭಾಷಾಂತರಗೊಂಡಾಗ 150 ಪುಟಗಳಿಗೆ ಇಳಿಸಲಾಗಿದೆ. ಕನ್ನಡ ಸಾಹಿತ್ಯದ ಮೌಲ್ಯ ಜಾಗತಿಕ ಮಟ್ಟದಲ್ಲಿ ಸಿಗಬೇಕಾದರೆ ಸಮರ್ಪಕವಾಗಿ ಭಾಷಾಂತರ ಮಾಡಬೇಕು’ ಎಂದರು. </p>.<p>‘ಇತ್ತೀಚೆಗೆ ಸೃಜನಶೀಲ ಸಾಹಿತ್ಯಕ್ಕೆ ಸಿಗುತ್ತಿರುವ ಮಹತ್ವ ವೈಚಾರಿಕ ಸಾಹಿತ್ಯ, ವಿಮರ್ಶೆಗೂ ಸಿಗುತ್ತಿದೆ. ಪುಸ್ತಕಗಳನ್ನು ಓದುವವರ ಸಂಖ್ಯೆ ಕಡಿಮೆ ಆಗುತ್ತಿದೆ ಎನ್ನುವುದರ ನಡುವೆ ಒಂದೇ ವೇದಿಕೆಯಲ್ಲಿ 15 ಪುಸ್ತಕಗಳು ಜನಾರ್ಪಣೆ ಆಗುತ್ತಿರುವುದು ಪುಸ್ತಕ ಓದುವವರ ಸಂಖ್ಯೆಯು ಹೆಚ್ಚುತ್ತಿದೆ ಎಂಬುದಕ್ಕೆ ಸಾಕ್ಷಿ’ ಎಂದು ಹೇಳಿದರು. </p>.<p>‘ಕನ್ನಡಪ್ರಭ’ ಪುರವಣಿ ಸಂಪಾದಕ ಗಿರೀಶ್ರಾವ್ ಹತ್ವಾರ್ (ಜೋಗಿ), ಲೇಖಕ ಡಿ.ವಿ.ಗುರುಪ್ರಸಾದ್, ಜಯಪ್ರಕಾಶ್ ನಾಗತಿಹಳ್ಳಿ, ಸಪ್ನ ಬುಕ್ ಹೌಸ್ನ ವ್ಯವಸ್ಥಾಪಕ ನಿರ್ದೇಶಕ ನಿತಿನ್ ಷಾ, ಆರ್. ದೊಡ್ಡೇಗೌಡ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬಾನು ಮುಷ್ತಾಕ್, ದೀಪಾ ಭಾಸ್ತಿ ಅವರಿಂದಾಗಿ ಕನ್ನಡ ಸಾಹಿತ್ಯ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಕನ್ನಡದ ಮೇರು ಕೃತಿಗಳು ವಿಶ್ವಮಟ್ಟದಲ್ಲಿ ಪರಿಚಯವಾಗಬೇಕಾದರೆ ಇಂಗ್ಲಿಷ್ ಭಾಷಾಂತರ ಅಗತ್ಯ’ ಎಂದು ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಹೇಳಿದರು. </p>.<p>ಸಪ್ನ ಬುಕ್ ಹೌಸ್ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 15 ಪುಸ್ತಕಗಳ ಜನಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>‘ಕುವೆಂಪು ಅವರ ಮಲೆಗಳಲ್ಲಿ ಮದುಮಗಳು, ಶಿವರಾಮ ಕಾರಂತರ ಚೋಮನದುಡಿ ಸೇರಿದಂತೆ ಕನ್ನಡದ ಹಲವು ಮಹತ್ವದ ಕೃತಿಗಳು ಜಾಗತಿಕ ಮಟ್ಟದ ಪ್ರಶಸ್ತಿಗಳಿಗೆ ಅರ್ಹವಾಗಿವೆ. ಆದರೆ 600ರಿಂದ 700 ಪುಟದ ಈ ಕೃತಿಗಳು ಭಾಷಾಂತರಗೊಂಡಾಗ 150 ಪುಟಗಳಿಗೆ ಇಳಿಸಲಾಗಿದೆ. ಕನ್ನಡ ಸಾಹಿತ್ಯದ ಮೌಲ್ಯ ಜಾಗತಿಕ ಮಟ್ಟದಲ್ಲಿ ಸಿಗಬೇಕಾದರೆ ಸಮರ್ಪಕವಾಗಿ ಭಾಷಾಂತರ ಮಾಡಬೇಕು’ ಎಂದರು. </p>.<p>‘ಇತ್ತೀಚೆಗೆ ಸೃಜನಶೀಲ ಸಾಹಿತ್ಯಕ್ಕೆ ಸಿಗುತ್ತಿರುವ ಮಹತ್ವ ವೈಚಾರಿಕ ಸಾಹಿತ್ಯ, ವಿಮರ್ಶೆಗೂ ಸಿಗುತ್ತಿದೆ. ಪುಸ್ತಕಗಳನ್ನು ಓದುವವರ ಸಂಖ್ಯೆ ಕಡಿಮೆ ಆಗುತ್ತಿದೆ ಎನ್ನುವುದರ ನಡುವೆ ಒಂದೇ ವೇದಿಕೆಯಲ್ಲಿ 15 ಪುಸ್ತಕಗಳು ಜನಾರ್ಪಣೆ ಆಗುತ್ತಿರುವುದು ಪುಸ್ತಕ ಓದುವವರ ಸಂಖ್ಯೆಯು ಹೆಚ್ಚುತ್ತಿದೆ ಎಂಬುದಕ್ಕೆ ಸಾಕ್ಷಿ’ ಎಂದು ಹೇಳಿದರು. </p>.<p>‘ಕನ್ನಡಪ್ರಭ’ ಪುರವಣಿ ಸಂಪಾದಕ ಗಿರೀಶ್ರಾವ್ ಹತ್ವಾರ್ (ಜೋಗಿ), ಲೇಖಕ ಡಿ.ವಿ.ಗುರುಪ್ರಸಾದ್, ಜಯಪ್ರಕಾಶ್ ನಾಗತಿಹಳ್ಳಿ, ಸಪ್ನ ಬುಕ್ ಹೌಸ್ನ ವ್ಯವಸ್ಥಾಪಕ ನಿರ್ದೇಶಕ ನಿತಿನ್ ಷಾ, ಆರ್. ದೊಡ್ಡೇಗೌಡ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>