<p><strong>ಬೆಂಗಳೂರು:</strong> ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಹ ಪ್ರಾಧ್ಯಾಪಕ ಡಾ.ಎಚ್.ಎಸ್. ನಟರಾಜ್ ಶೆಟ್ಟಿ ಅವರ ‘ಎಚ್ಐವಿ ಪೀಡಿತರಲ್ಲಿ ಹೃದಯದ ಸಮಸ್ಯೆ’ ಸಂಶೋಧನಾ ಪ್ರಬಂಧವು ‘ಜರ್ನಲ್ ಆಫ್ ದಿ ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿ’ಯಲ್ಲಿ ಪ್ರಕಟವಾಗಿದೆ. </p><p>ಈ ಮೂಲಕ ಅವರು ಜಾಗತಿಕ ಮನ್ನಣೆ ಪಡೆದಿದ್ದಾರೆ. ಅಮೆರಿಕದ ಸ್ಯಾನ್ಫ್ರಾನ್ಸಿಸ್ಕೊದಲ್ಲಿ ಇತ್ತೀಚೆಗೆ ನಡೆದ<br>‘ಟ್ರಾನ್ಸ್ಕ್ಯಾಥೆಟರ್ ಕಾರ್ಡಿಯೋವಾಸ್ಕುಲರ್ ಥೆರಪ್ಯೂಟಿಕ್ಸ್’ (ಟಿಸಿಟಿ) ಸಮ್ಮೇಳನದಲ್ಲಿ ಅವರು ಈ ಪ್ರಬಂಧ ಮಂಡಿಸಿದರು. </p><p>‘ಎಚ್ಐವಿ ಪೀಡಿತರಲ್ಲಿ ಹೃದಯ ರಕ್ತನಾಳದ ಅಪಾಯದ ಬಗ್ಗೆ ಈ ಸಂಶೋಧನಾ ಪ್ರಬಂಧ ತಿಳಿಸಲಿದೆ. ಆರಂಭಿಕ ಹಂತದಲ್ಲಿ ಅಪಾಯ ಗುರುತಿಸುವಿಕೆ, ತಡೆಗಟ್ಟುವಿಕೆ ಹಾಗೂ ಸಮಗ್ರ ನಿರ್ವಹಣಾ ತಂತ್ರಗಳನ್ನು ಕೇಂದ್ರೀಕೃತವಾಗಿಸಿಕೊಂಡಿದೆ’ ಎಂದು ಡಾ. ನಟರಾಜ್ ಶೆಟ್ಟಿ ಹೇಳಿದ್ದಾರೆ.</p><p>‘ಡಾ. ನಟರಾಜ್ ಶೆಟ್ಟಿ ಅವರು ಕಳೆದ ಹತ್ತು ವರ್ಷಗಳಲ್ಲಿ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆದ ಎಚ್ಐವಿ ಸೋಂಕಿತ 910 ರೋಗಿಗಳನ್ನು ಸಂಶೋಧನೆಗೆ ಒಳಪಡಿಸಿ, ಸಂಶೋಧನಾ ಪ್ರಬಂಧ ರಚಿಸಿದ್ದರು. ಈ ಪ್ರಬಂಧ ಅಂತರರಾಷ್ಟ್ರೀಯ ಮಟ್ಟದ ಸಮ್ಮೇಳನದಲ್ಲಿ ಚರ್ಚೆ ಆಗಿರುವುದು ಸಂಸ್ಥೆಯ ಗರಿಮೆ ಹೆಚ್ಚಿಸಿದೆ’ ಎಂದು ಸಂಸ್ಥೆಯ ನಿರ್ದೇಶಕ ಡಾ.ಬಿ. ದಿನೇಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಹ ಪ್ರಾಧ್ಯಾಪಕ ಡಾ.ಎಚ್.ಎಸ್. ನಟರಾಜ್ ಶೆಟ್ಟಿ ಅವರ ‘ಎಚ್ಐವಿ ಪೀಡಿತರಲ್ಲಿ ಹೃದಯದ ಸಮಸ್ಯೆ’ ಸಂಶೋಧನಾ ಪ್ರಬಂಧವು ‘ಜರ್ನಲ್ ಆಫ್ ದಿ ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿ’ಯಲ್ಲಿ ಪ್ರಕಟವಾಗಿದೆ. </p><p>ಈ ಮೂಲಕ ಅವರು ಜಾಗತಿಕ ಮನ್ನಣೆ ಪಡೆದಿದ್ದಾರೆ. ಅಮೆರಿಕದ ಸ್ಯಾನ್ಫ್ರಾನ್ಸಿಸ್ಕೊದಲ್ಲಿ ಇತ್ತೀಚೆಗೆ ನಡೆದ<br>‘ಟ್ರಾನ್ಸ್ಕ್ಯಾಥೆಟರ್ ಕಾರ್ಡಿಯೋವಾಸ್ಕುಲರ್ ಥೆರಪ್ಯೂಟಿಕ್ಸ್’ (ಟಿಸಿಟಿ) ಸಮ್ಮೇಳನದಲ್ಲಿ ಅವರು ಈ ಪ್ರಬಂಧ ಮಂಡಿಸಿದರು. </p><p>‘ಎಚ್ಐವಿ ಪೀಡಿತರಲ್ಲಿ ಹೃದಯ ರಕ್ತನಾಳದ ಅಪಾಯದ ಬಗ್ಗೆ ಈ ಸಂಶೋಧನಾ ಪ್ರಬಂಧ ತಿಳಿಸಲಿದೆ. ಆರಂಭಿಕ ಹಂತದಲ್ಲಿ ಅಪಾಯ ಗುರುತಿಸುವಿಕೆ, ತಡೆಗಟ್ಟುವಿಕೆ ಹಾಗೂ ಸಮಗ್ರ ನಿರ್ವಹಣಾ ತಂತ್ರಗಳನ್ನು ಕೇಂದ್ರೀಕೃತವಾಗಿಸಿಕೊಂಡಿದೆ’ ಎಂದು ಡಾ. ನಟರಾಜ್ ಶೆಟ್ಟಿ ಹೇಳಿದ್ದಾರೆ.</p><p>‘ಡಾ. ನಟರಾಜ್ ಶೆಟ್ಟಿ ಅವರು ಕಳೆದ ಹತ್ತು ವರ್ಷಗಳಲ್ಲಿ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆದ ಎಚ್ಐವಿ ಸೋಂಕಿತ 910 ರೋಗಿಗಳನ್ನು ಸಂಶೋಧನೆಗೆ ಒಳಪಡಿಸಿ, ಸಂಶೋಧನಾ ಪ್ರಬಂಧ ರಚಿಸಿದ್ದರು. ಈ ಪ್ರಬಂಧ ಅಂತರರಾಷ್ಟ್ರೀಯ ಮಟ್ಟದ ಸಮ್ಮೇಳನದಲ್ಲಿ ಚರ್ಚೆ ಆಗಿರುವುದು ಸಂಸ್ಥೆಯ ಗರಿಮೆ ಹೆಚ್ಚಿಸಿದೆ’ ಎಂದು ಸಂಸ್ಥೆಯ ನಿರ್ದೇಶಕ ಡಾ.ಬಿ. ದಿನೇಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>