<p><strong>ಬೆಂಗಳೂರು:</strong> ‘ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 4,62,027ಕ್ಕೆ ಏರಿಕೆಯಾಗಿದೆ. ಮತದಾನಕ್ಕೆ ಬರುವ ಎಲ್ಲರಿಗೂ ಕೈಗವಸುಗಳನ್ನು ನೀಡಲಾಗುವುದು’ ಎಂದು ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್ ತಿಳಿಸಿದರು.</p>.<p>ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ತೆರೆಯಲಾಗುತ್ತಿರುವ ಮತ ಎಣಿಕಾ ಕೇಂದ್ರಕ್ಕೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರೊಂದಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ‘ಮತದಾರರ ಪಟ್ಟಿಗೆ ಹೊಸದಾಗಿ 1,616 ಮಂದಿ ಸೇರ್ಪಡೆಯಾಗಿದ್ದಾರೆ. ಸದ್ಯ ಪಟ್ಟಿ ಅಂತಿಮಗೊಂಡಿದೆ’ ಎಂದು ಹೇಳಿದರು.</p>.<p>‘ಕ್ಷೇತ್ರದಲ್ಲಿ 678 ಮತಗಟ್ಟೆಗಳನ್ನು ತೆರೆಯಲಾಗುತ್ತಿದ್ದು, ಮತದಾನಕ್ಕೆ ಬರುವವರನ್ನು ಥರ್ಮಲ್ ಸ್ಕ್ಯಾನರ್ ಮೂಲಕ ತಪಾಸಣೆ ನಡೆಸಲಾಗುವುದು. ಹ್ಯಾಂಡ್ ಸ್ಯಾನಿಟೈಸರ್ ನೀಡಲಾಗುವುದು. ಒಂದು ಕೈಗೆ ಮಾತ್ರ ಕೈಗವಸು ನೀಡಲಾಗುವುದು. ಅದನ್ನು ಹಾಕಿಕೊಂಡೇ ಸಹಿ ಮಾಡಬೇಕು ಮತ್ತು ಮತದಾನ ಮಾಡಬೇಕು’ ಎಂದರು.</p>.<p>ನವೆಂಬರ್ 10ರಂದು ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನ 12.30ರ ವೇಳೆಗೆ ಫಲಿತಾಂಶ ಲಭ್ಯವಾಗಲಿದೆ. ಈ ಹಿಂದೆ 14 ಟೇಬಲ್ಗಳನ್ನು ಎಣಿಕೆಗೆ ಅಳವಡಿಸಲಾಗುತ್ತಿತ್ತು. ಕೋವಿಡ್ ಇರುವ ಕಾರಣ ಈ ಸಂಖ್ಯೆಯನ್ನು 28ಕ್ಕೆ ಹೆಚ್ಚಿಸಲಾಗಿದೆ. ಪ್ರತಿ ಕೊಠಡಿಯಲ್ಲಿ 7 ಟೇಬಲ್ಗಳು ಇರಲಿವೆ. 24 ಸುತ್ತಿನಲ್ಲಿ ಎಣಿಕೆ ನಡೆಯಲಿದೆ ಎಂದು ವಿವರಿಸಿದರು.</p>.<p>ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಪೂರ್ಣಗೊಂಡಿದ್ದು, ಒಟ್ಟು 27 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಎನ್. ಮಂಜುನಾಥ ಪ್ರಸಾದ್ ತಿಳಿಸಿದರು.</p>.<p>‘ಮತದಾನದ ದಿನ ಮತ್ತು ಎಣಿಕೆ ದಿನ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಅಗತ್ಯ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗುವುದು’ ಎಂದು ಕಮಲ್ ಪಂತ್ ಹೇಳಿದರು.</p>.<p>ಬಿಬಿಎಂಪಿ ವಿಶೇಷ ಆಯುಕ್ತ ಜೆ.ಮಂಜುನಾಥ, ಜಂಟಿ ಆಯುಕ್ತ ನಾಗರಾಜ್, ಹೆಚ್ಚುವರಿ ಪೊಲೀಸ್ ಕಮಿಷನರ್ ಸೌಮೇಂದು ಮುಖರ್ಜಿ ಇದ್ದರು.</p>.<p><strong>ಚುನಾವಣಾ ಸಮೀಕ್ಷೆಗಳ ಮೇಲೆ ನಿರ್ಬಂಧ</strong></p>.<p>ನವಂಬರ್ 3 ರಂದು ನಡೆಯುವ ಶಿರಾ ಮತ್ತು ಆರ್.ಆರ್.ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಥವಾ ಮತಗಟ್ಟೆ ಸಮೀಕ್ಷೆಗಳನ್ನು ನ.3 ರ ಬೆಳಿಗ್ಗೆ 6 ರಿಂದ ನ.7 ರ ಸಂಜೆ 6ರವರೆಗೆ ಮಾಧ್ಯಮಗಳಲ್ಲಿ ಪ್ರಕಟಿಸುವಂತಿಲ್ಲ ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿದೆ.</p>.<p>ವಿಧಾನಪರಿಷತ್ತಿನ ಚುನಾವಣೆಗೂ ಇದು ಅನ್ವಯವಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಬಿಹಾರ ರಾಜ್ಯದ ವಿಧಾನಸಭಾ ಚುನಾವಣೆ ಮತ್ತು ಇತರ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುವ ಕಾರಣ ಈ ಆದೇಶ ಹೊರಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 4,62,027ಕ್ಕೆ ಏರಿಕೆಯಾಗಿದೆ. ಮತದಾನಕ್ಕೆ ಬರುವ ಎಲ್ಲರಿಗೂ ಕೈಗವಸುಗಳನ್ನು ನೀಡಲಾಗುವುದು’ ಎಂದು ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್ ತಿಳಿಸಿದರು.</p>.<p>ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ತೆರೆಯಲಾಗುತ್ತಿರುವ ಮತ ಎಣಿಕಾ ಕೇಂದ್ರಕ್ಕೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರೊಂದಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ‘ಮತದಾರರ ಪಟ್ಟಿಗೆ ಹೊಸದಾಗಿ 1,616 ಮಂದಿ ಸೇರ್ಪಡೆಯಾಗಿದ್ದಾರೆ. ಸದ್ಯ ಪಟ್ಟಿ ಅಂತಿಮಗೊಂಡಿದೆ’ ಎಂದು ಹೇಳಿದರು.</p>.<p>‘ಕ್ಷೇತ್ರದಲ್ಲಿ 678 ಮತಗಟ್ಟೆಗಳನ್ನು ತೆರೆಯಲಾಗುತ್ತಿದ್ದು, ಮತದಾನಕ್ಕೆ ಬರುವವರನ್ನು ಥರ್ಮಲ್ ಸ್ಕ್ಯಾನರ್ ಮೂಲಕ ತಪಾಸಣೆ ನಡೆಸಲಾಗುವುದು. ಹ್ಯಾಂಡ್ ಸ್ಯಾನಿಟೈಸರ್ ನೀಡಲಾಗುವುದು. ಒಂದು ಕೈಗೆ ಮಾತ್ರ ಕೈಗವಸು ನೀಡಲಾಗುವುದು. ಅದನ್ನು ಹಾಕಿಕೊಂಡೇ ಸಹಿ ಮಾಡಬೇಕು ಮತ್ತು ಮತದಾನ ಮಾಡಬೇಕು’ ಎಂದರು.</p>.<p>ನವೆಂಬರ್ 10ರಂದು ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನ 12.30ರ ವೇಳೆಗೆ ಫಲಿತಾಂಶ ಲಭ್ಯವಾಗಲಿದೆ. ಈ ಹಿಂದೆ 14 ಟೇಬಲ್ಗಳನ್ನು ಎಣಿಕೆಗೆ ಅಳವಡಿಸಲಾಗುತ್ತಿತ್ತು. ಕೋವಿಡ್ ಇರುವ ಕಾರಣ ಈ ಸಂಖ್ಯೆಯನ್ನು 28ಕ್ಕೆ ಹೆಚ್ಚಿಸಲಾಗಿದೆ. ಪ್ರತಿ ಕೊಠಡಿಯಲ್ಲಿ 7 ಟೇಬಲ್ಗಳು ಇರಲಿವೆ. 24 ಸುತ್ತಿನಲ್ಲಿ ಎಣಿಕೆ ನಡೆಯಲಿದೆ ಎಂದು ವಿವರಿಸಿದರು.</p>.<p>ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುಕ್ರವಾರ ಪೂರ್ಣಗೊಂಡಿದ್ದು, ಒಟ್ಟು 27 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಎನ್. ಮಂಜುನಾಥ ಪ್ರಸಾದ್ ತಿಳಿಸಿದರು.</p>.<p>‘ಮತದಾನದ ದಿನ ಮತ್ತು ಎಣಿಕೆ ದಿನ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಅಗತ್ಯ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗುವುದು’ ಎಂದು ಕಮಲ್ ಪಂತ್ ಹೇಳಿದರು.</p>.<p>ಬಿಬಿಎಂಪಿ ವಿಶೇಷ ಆಯುಕ್ತ ಜೆ.ಮಂಜುನಾಥ, ಜಂಟಿ ಆಯುಕ್ತ ನಾಗರಾಜ್, ಹೆಚ್ಚುವರಿ ಪೊಲೀಸ್ ಕಮಿಷನರ್ ಸೌಮೇಂದು ಮುಖರ್ಜಿ ಇದ್ದರು.</p>.<p><strong>ಚುನಾವಣಾ ಸಮೀಕ್ಷೆಗಳ ಮೇಲೆ ನಿರ್ಬಂಧ</strong></p>.<p>ನವಂಬರ್ 3 ರಂದು ನಡೆಯುವ ಶಿರಾ ಮತ್ತು ಆರ್.ಆರ್.ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಥವಾ ಮತಗಟ್ಟೆ ಸಮೀಕ್ಷೆಗಳನ್ನು ನ.3 ರ ಬೆಳಿಗ್ಗೆ 6 ರಿಂದ ನ.7 ರ ಸಂಜೆ 6ರವರೆಗೆ ಮಾಧ್ಯಮಗಳಲ್ಲಿ ಪ್ರಕಟಿಸುವಂತಿಲ್ಲ ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿದೆ.</p>.<p>ವಿಧಾನಪರಿಷತ್ತಿನ ಚುನಾವಣೆಗೂ ಇದು ಅನ್ವಯವಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಬಿಹಾರ ರಾಜ್ಯದ ವಿಧಾನಸಭಾ ಚುನಾವಣೆ ಮತ್ತು ಇತರ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುವ ಕಾರಣ ಈ ಆದೇಶ ಹೊರಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>