<p><strong>ಬೆಂಗಳೂರು: </strong>ಬೀದಿ ನಾಯಿಗಳ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ 11 ವರ್ಷದ ಬಾಲಕ ಪ್ರವೀಣ್, ಚಿಕಿತ್ಸೆಗೆ ಸ್ಪಂದಿಸದೇ ಮಣಿಪಾಲ್ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಮೃತಪಟ್ಟಿದ್ದಾನೆ.</p>.<p>‘ಮಧ್ಯಾಹ್ನ ಬಾಲಕನ ಆರೋಗ್ಯ ತಪಾಸಣೆ ನಡೆಸಿದ್ದ ವೈದ್ಯರು, ‘ಮಿದುಳು ನಿಷ್ಕ್ರಿಯಗೊಂಡಿದ್ದು, ಯಾವುದೇ ಅಂಗಾಂಗಗಳು ಕೆಲಸ ಮಾಡುತ್ತಿಲ್ಲ. ಆಮ್ಲಜನಕದ ನೆರವಿನಿಂದ ಆತ ಬದುಕಿದ್ದಾನೆ ಎಂದು ಹೇಳಿದ್ದರು. ಅದಾದ ನಂತರ, ರಾತ್ರಿ ವೇಳೆ ಆತ ಮೃತಪಟ್ಟಿರುವುದಾಗಿ ತಿಳಿಸಿದರು’ ಎಂದು ಬಾಲಕನ ದೊಡ್ಡಮ್ಮ ಹೇಳಿದರು.</p>.<p>‘ದಾಳಿಯಿಂದಾಗಿ ಬಾಲಕನಿಗೆ ತೀವ್ರ ಗಾಯಗಳಾಗಿದ್ದವು. ಬಹು ಅಂಗಾಂಗ ವೈಫಲ್ಯವೂ ಕಾಣಿಸಿಕೊಂಡಿತ್ತು. ನಾವು ಎಷ್ಟೇ ಚಿಕಿತ್ಸೆ ನೀಡಿದರೂ ಆತ ಉಳಿಯಲಿಲ್ಲ. ರಾತ್ರಿ 8.30 ಗಂಟೆ ಸುಮಾರಿಗೆ ತೀರಿಕೊಂಡ’ ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ. ಅನೂಪ್ ಅಮರನಾಥ್ ತಿಳಿಸಿದರು.</p>.<p>ಬುಧವಾರ ಎಚ್ಎಎಲ್ ಸಮೀಪದ ವಿಭೂತಿಪುರ ಬಳಿ ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕನ ಮೇಲೆ ಹತ್ತಕ್ಕೂ ಹೆಚ್ಚು ಬೀದಿನಾಯಿಗಳು ದಾಳಿ ಮಾಡಿದ್ದವು. ಆತನ ಗಂಟಲಿಗೇ ಬಾಯಿ ಹಾಕಿದ್ದ ನಾಯಿಗಳು ಗಂಭೀರವಾಗಿ ಗಾಯಗೊಳಿಸಿದ್ದವು. ಆ ಬಳಿಕ ಬಾಲಕನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.</p>.<p>‘ಮಗನ ಚಿಕಿತ್ಸೆಗೆ ನೆರವು ಸಿಕ್ಕಿತ್ತು. ಆದರೆ, ಆತ ಬದುಕಲಿಲ್ಲ. ಬೇರೆ ಮಕ್ಕಳಿಗೆ ಈ ಸ್ಥಿತಿ ಬರಬಾರದು. ಇದಕ್ಕಾಗಿ ಬೀದಿನಾಯಿಗಳಿಗೆ ಕಡಿವಾಣ ಹಾಕಬೇಕು’ ಎಂದು ಬಾಲಕನ ತಾಯಿ ಕಣ್ಣೀರಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೀದಿ ನಾಯಿಗಳ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ 11 ವರ್ಷದ ಬಾಲಕ ಪ್ರವೀಣ್, ಚಿಕಿತ್ಸೆಗೆ ಸ್ಪಂದಿಸದೇ ಮಣಿಪಾಲ್ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಮೃತಪಟ್ಟಿದ್ದಾನೆ.</p>.<p>‘ಮಧ್ಯಾಹ್ನ ಬಾಲಕನ ಆರೋಗ್ಯ ತಪಾಸಣೆ ನಡೆಸಿದ್ದ ವೈದ್ಯರು, ‘ಮಿದುಳು ನಿಷ್ಕ್ರಿಯಗೊಂಡಿದ್ದು, ಯಾವುದೇ ಅಂಗಾಂಗಗಳು ಕೆಲಸ ಮಾಡುತ್ತಿಲ್ಲ. ಆಮ್ಲಜನಕದ ನೆರವಿನಿಂದ ಆತ ಬದುಕಿದ್ದಾನೆ ಎಂದು ಹೇಳಿದ್ದರು. ಅದಾದ ನಂತರ, ರಾತ್ರಿ ವೇಳೆ ಆತ ಮೃತಪಟ್ಟಿರುವುದಾಗಿ ತಿಳಿಸಿದರು’ ಎಂದು ಬಾಲಕನ ದೊಡ್ಡಮ್ಮ ಹೇಳಿದರು.</p>.<p>‘ದಾಳಿಯಿಂದಾಗಿ ಬಾಲಕನಿಗೆ ತೀವ್ರ ಗಾಯಗಳಾಗಿದ್ದವು. ಬಹು ಅಂಗಾಂಗ ವೈಫಲ್ಯವೂ ಕಾಣಿಸಿಕೊಂಡಿತ್ತು. ನಾವು ಎಷ್ಟೇ ಚಿಕಿತ್ಸೆ ನೀಡಿದರೂ ಆತ ಉಳಿಯಲಿಲ್ಲ. ರಾತ್ರಿ 8.30 ಗಂಟೆ ಸುಮಾರಿಗೆ ತೀರಿಕೊಂಡ’ ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ. ಅನೂಪ್ ಅಮರನಾಥ್ ತಿಳಿಸಿದರು.</p>.<p>ಬುಧವಾರ ಎಚ್ಎಎಲ್ ಸಮೀಪದ ವಿಭೂತಿಪುರ ಬಳಿ ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕನ ಮೇಲೆ ಹತ್ತಕ್ಕೂ ಹೆಚ್ಚು ಬೀದಿನಾಯಿಗಳು ದಾಳಿ ಮಾಡಿದ್ದವು. ಆತನ ಗಂಟಲಿಗೇ ಬಾಯಿ ಹಾಕಿದ್ದ ನಾಯಿಗಳು ಗಂಭೀರವಾಗಿ ಗಾಯಗೊಳಿಸಿದ್ದವು. ಆ ಬಳಿಕ ಬಾಲಕನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.</p>.<p>‘ಮಗನ ಚಿಕಿತ್ಸೆಗೆ ನೆರವು ಸಿಕ್ಕಿತ್ತು. ಆದರೆ, ಆತ ಬದುಕಲಿಲ್ಲ. ಬೇರೆ ಮಕ್ಕಳಿಗೆ ಈ ಸ್ಥಿತಿ ಬರಬಾರದು. ಇದಕ್ಕಾಗಿ ಬೀದಿನಾಯಿಗಳಿಗೆ ಕಡಿವಾಣ ಹಾಕಬೇಕು’ ಎಂದು ಬಾಲಕನ ತಾಯಿ ಕಣ್ಣೀರಿಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>