‘ಬೆಂಗಳೂರಿನ ಗಾಂಧಿ ಭವನದ ಆವರಣದಲ್ಲಿ ಮೌನ ಪ್ರತಿಭಟನೆ ಮಾಡುವ ಬಗ್ಗೆ ಆಲೋಚಿಸಿದ್ದೆವು. ಆದರೆ, ರಾಜ್ಯದಲ್ಲಿ ನಡೆಯುತ್ತಿರುವ ಮತೀಯ ಸಂಘರ್ಷದ ಸಂದರ್ಭದಲ್ಲಿ ಈ ವಿಷಯವನ್ನು ಮತ್ತೆ ಮುನ್ನೆಲೆಗೆ ತಂದು ಸೌಹಾರ್ದ ವಾತಾವರಣವನ್ನು ಹದಗೆಡುವಂತೆ ಮಾಡುವುದು ಸರಿಯಲ್ಲ ಎಂದು ತೀರ್ಮಾನಿಸಿ ಪ್ರತಿಭಟನೆ ವಿಷಯ ಕೈಬಿಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದ್ದಾರೆ.