ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಘಟಕದ ಅಧ್ಯಕ್ಷ ಅಥಾವುಲ್ಲ ಪೂಂಜಾಲಕಟ್ಟೆ, ‘ಗೋಡ್ಸೆ ಪಸರಿಸಿದ ಸಿದ್ಧಾಂತವನ್ನೇ ರಾಷ್ಟ್ರೀಯತೆ ಎಂದು ಬಿಂಬಿಸುವ ಮೂಲಕ ಗಾಂಧಿ, ದಾಭೋಲ್ಕರ್, ಪನ್ಸಾರೆ ಹೀಗೆ ಹಲವು ಪ್ರಗತಿಪರ ಚಿಂತಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಇಂತಹ ಉಗ್ರ ಹಿಂದುತ್ವ ಸಿದ್ಧಾಂತವನ್ನು ಸೋಲಿಸುವುದು ಜಾತ್ಯತೀತ ಆಶಯದಲ್ಲಿ ನಂಬಿಕೆ ಇಟ್ಟ ಪ್ರತಿಯೊಬ್ಬ ಭಾರತೀಯ ನಾಗರಿಕನ ಜವಾಬ್ದಾರಿ’ ಎಂದು ಹೇಳಿದರು.