ಮನೆಯ ಕಾವಲುಗಾರ ನಾಪತ್ತೆಯಾಗಿದ್ದು, ಆತ ಕೆಲವರೊಂದಿಗೆ ಸೇರಿಕೊಂಡು ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದೆ. ಮಹಾಲಕ್ಷ್ಮಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
‘ಆರೋಪಿಗಳ ಪತ್ತೆಗೆ ನಾಲ್ಕು ತಂಡಗಳು ವಿವಿಧ ರಾಜ್ಯಗಳಿಗೆ ತೆರಳಿವೆ. ನೇಪಾಳದ ವ್ಯಕ್ತಿಯನ್ನು ಕಾವಲುಗಾರ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಸುಳಿವು ಸಿಕ್ಕಿದೆ. ಸದ್ಯದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು’ ಎಂದು ಪೊಲೀಸರು ಹೇಳಿದರು.