‘ಎರಡು ವರ್ಷಗಳ ಹಿಂದೆ ಗಂಡನನ್ನು ಕಳೆದುಕೊಂಡಿದ್ದ ಮಹಿಳೆ, ಪರಿಚಿತ ವ್ಯಕ್ತಿಯೊಂದಿಗೆ ಇತ್ತೀಚೆಗೆ ವಿವಾಹವಾಗಿದ್ದಳು. ಆಗಸ್ಟ್ 19ರಂದು ಇಬ್ಬರೂ ಧರ್ಮಸ್ಥಳಕ್ಕೆ ಹೋಗಿ ದೇವರ ದರ್ಶನ ಪಡೆದಿದ್ದರು. ಮರುದಿನ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಿದ್ದರು. ಉಪಹಾರ ಸೇವಿಸಲು ಹೋಟೆಲ್ವೊಂದಕ್ಕೆ ತೆರಳಿದ್ದ ಈ ದಂಪತಿ, ಪಕ್ಕದ ಟೇಬಲ್ ಬಳಿ ಇಟ್ಟಿದ್ದ ನೀಲಿ ಬಣ್ಣದ ಬ್ಯಾಗ್ ಕದ್ದಿದ್ದರು. ಅದರಲ್ಲಿದ್ದ ಗಂಟಿನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳಿದ್ದವು. ಅಲ್ಲಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರೂ ಲಗ್ಗೆರೆಯ ಮಾರಮ್ಮ ದೇವಸ್ಥಾನದ ಸಮೀಪ ಕೊಠಡಿಯೊಂದನ್ನು ಬಾಡಿಗೆಗೆ ಪಡೆದು ವಾಸಿಸುತ್ತಿದ್ದರು’ ಎಂದು ಹೇಳಿದ್ದಾರೆ.