<p><strong>ಬೆಂಗಳೂರು:</strong> ಮನೆ ಮತ್ತು ಕಚೇರಿಗಳ ಬೀಗ ಒಡೆದು ಚಿನ್ನಾಭರಣ ಹಾಗೂ ಲ್ಯಾಪ್ಟಾಪ್ಗಳನ್ನು ಕಳವು ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಹಲಸೂರು ನಿವಾಸಿಗಳಾದ ಅಜಯ್ (24), ಅರುಣ್ (23), ಪ್ರತಾಪ್ (25), ಸಾಯಿ ಅಲಿಯಾಸ್ ಅಪ್ಪು (25) ಬಂಧಿತರು. ಇವರಿಂದ 24 ಗ್ರಾಂ ತೂಕದ ಚಿನ್ನಾಭರಣ, ₹ 4 ಲಕ್ಷ ಮೌಲ್ಯದ 11 ಲ್ಯಾಪ್ಟಾಪ್ಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಜೂನ್ 30ರಂದು ಕಂಪನಿಯೊಂದರ ಬಾಗಿಲು ಮುರಿದು 20 ಲ್ಯಾಪ್ಟಾಪ್, ಯುಪಿಎಸ್ ಇನ್ವರ್ಟರ್ ಬ್ಯಾಟರಿಗಳು, ವಾಷ್ ರೂಂ ಟ್ಯಾಪ್ಗಳು ಹಾಗೂ ಇತರೆ ವಸ್ತುಗಳನ್ನು ಕಳವು ಮಾಡಿದ್ದರು.</p>.<p>ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಹಲಸೂರಿನ ಲಕ್ಷ್ಮೀಪುರ ಹರಿಶ್ಚಂದ್ರ ಸ್ಮಶಾನದ ಬಳಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೃತ್ಯದಲ್ಲಿ ಮತ್ತಿಬ್ಬರು ಭಾಗಿಯಾಗಿರುವುದು ಗೊತ್ತಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮನೆ ಮತ್ತು ಕಚೇರಿಗಳ ಬೀಗ ಒಡೆದು ಚಿನ್ನಾಭರಣ ಹಾಗೂ ಲ್ಯಾಪ್ಟಾಪ್ಗಳನ್ನು ಕಳವು ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಹಲಸೂರು ನಿವಾಸಿಗಳಾದ ಅಜಯ್ (24), ಅರುಣ್ (23), ಪ್ರತಾಪ್ (25), ಸಾಯಿ ಅಲಿಯಾಸ್ ಅಪ್ಪು (25) ಬಂಧಿತರು. ಇವರಿಂದ 24 ಗ್ರಾಂ ತೂಕದ ಚಿನ್ನಾಭರಣ, ₹ 4 ಲಕ್ಷ ಮೌಲ್ಯದ 11 ಲ್ಯಾಪ್ಟಾಪ್ಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಜೂನ್ 30ರಂದು ಕಂಪನಿಯೊಂದರ ಬಾಗಿಲು ಮುರಿದು 20 ಲ್ಯಾಪ್ಟಾಪ್, ಯುಪಿಎಸ್ ಇನ್ವರ್ಟರ್ ಬ್ಯಾಟರಿಗಳು, ವಾಷ್ ರೂಂ ಟ್ಯಾಪ್ಗಳು ಹಾಗೂ ಇತರೆ ವಸ್ತುಗಳನ್ನು ಕಳವು ಮಾಡಿದ್ದರು.</p>.<p>ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಹಲಸೂರಿನ ಲಕ್ಷ್ಮೀಪುರ ಹರಿಶ್ಚಂದ್ರ ಸ್ಮಶಾನದ ಬಳಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೃತ್ಯದಲ್ಲಿ ಮತ್ತಿಬ್ಬರು ಭಾಗಿಯಾಗಿರುವುದು ಗೊತ್ತಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>