<p><strong>ಬೆಂಗಳೂರು:</strong> ಮಾಜಿ ಕಾರ್ಪೊರೇಟರ್ ಮನೆಯಲ್ಲಿ 1.85 ಕೆ.ಜಿ ಚಿನ್ನಾಭರಣ ದೋಚಿದ್ದ ಮೂವರು ಆರೋಪಿಗಳನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ರಘುವನಹಳ್ಳಿಯ ರಘು ಅಲಿಯಾಸ್ ಪೆಪ್ಸಿ ರಘು (25), ತ್ಯಾಗರಾಜನಗರದ ಮಿಥುನ್ ಅಲಿಯಾಸ್ ಮಿಲ್ಕಿ (24), ನಾಯಂಡಳ್ಳಿಯ ಜೈದೀಪ್ (25) ಬಂಧಿತರು.</p>.<p>ಆರೋಪಿಗಳಿಂದ ₹78.50 ಲಕ್ಷ ಮೌಲ್ಯದ 1.85 ಕೆ.ಜಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.</p>.<p>ಜಯನಗರ ಐದನೇ ಬ್ಲಾಕ್ ನಿವಾಸಿ, ಬಿಬಿಎಂಪಿ ಮಾಜಿ ಸದಸ್ಯರಾದ ಟಿ.ಎಸ್.ವಸಂತ್ ಕುಮಾರ್ ಅವರ ಮನೆಯಲ್ಲಿ ಜುಲೈ 20ರಂದು ಕಳ್ಳತನ ನಡೆದಿತ್ತು. ಮನೆಯ ಮಾಲೀಕರು ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.</p>.<p>ಡೆಲಿವರಿ ಎಕ್ಸಿಕ್ಯುಟಿವ್ಗಳ ಸೋಗಿನಲ್ಲಿ ನಗರದ ಬೇರೆ ಬೇರೆ ಬಡಾವಣೆಗಳಲ್ಲಿ ಸುತ್ತಾಟ ನಡೆಸುತ್ತಿದ್ದ ಆರೋಪಿಗಳು, ಬೀಗ ಹಾಕಿದ್ದ ಮನೆಗಳನ್ನು ಗುರುತಿಸುತ್ತಿದ್ದರು. ರಾತ್ರಿ ವೇಳೆ ಆ ಮನೆಗೆ ಬಂದು ಬೀಗ ಮುರಿದು ಕಳ್ಳತನ ಮಾಡಿ ಪರಾರಿ ಆಗುತ್ತಿದ್ದರು ಎಂದು ಪೊಲೀಸರು ಹೇಳಿದರು.</p>.<p><strong>ರೋಲೆಕ್ಸ್ ವಾಚ್ ಕಳವು:</strong><br>ಜುಲೈ 20ರಂದು ಸಂಜೆ ವಿಮಾನ ನಿಲ್ದಾಣಕ್ಕೆ ಪುತ್ರನನ್ನು ಬಿಟ್ಟು ಬರಲು ವಸಂತ್ ಕುಮಾರ್ ತೆರಳಿದ್ದರು. ಅಂದೇ ರಾತ್ರಿ ವಾಪಸ್ ಬಂದು ನೋಡಿದಾಗ ಮನೆಯ ಬೀಗ ಒಡೆದು ₹1 ಕೋಟಿ ಮೌಲ್ಯದ ಚಿನ್ನಾಭರಣ, ರೋಲೆಕ್ಸ್ ವಾಚ್, ನಗದು ದೋಚಿರುವುದು ಕಂಡುಬಂದಿತ್ತು. ವಸಂತ್ಕುಮಾರ್ ಅವರು ನೀಡಿದ ದೂರು ಆಧರಿಸಿ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಯಿತು. ಆರೋಪಿಗಳು ಸ್ಕೂಟಿಯಲ್ಲಿ ಬಂದು ಮನೆಯ ಒಳಗೆ ಹೋಗುತ್ತಿದ್ದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.</p>.<p>ತುರಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಚಿನ್ನಾಭರಣ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾಜಿ ಕಾರ್ಪೊರೇಟರ್ ಮನೆಯಲ್ಲಿ 1.85 ಕೆ.ಜಿ ಚಿನ್ನಾಭರಣ ದೋಚಿದ್ದ ಮೂವರು ಆರೋಪಿಗಳನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ರಘುವನಹಳ್ಳಿಯ ರಘು ಅಲಿಯಾಸ್ ಪೆಪ್ಸಿ ರಘು (25), ತ್ಯಾಗರಾಜನಗರದ ಮಿಥುನ್ ಅಲಿಯಾಸ್ ಮಿಲ್ಕಿ (24), ನಾಯಂಡಳ್ಳಿಯ ಜೈದೀಪ್ (25) ಬಂಧಿತರು.</p>.<p>ಆರೋಪಿಗಳಿಂದ ₹78.50 ಲಕ್ಷ ಮೌಲ್ಯದ 1.85 ಕೆ.ಜಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.</p>.<p>ಜಯನಗರ ಐದನೇ ಬ್ಲಾಕ್ ನಿವಾಸಿ, ಬಿಬಿಎಂಪಿ ಮಾಜಿ ಸದಸ್ಯರಾದ ಟಿ.ಎಸ್.ವಸಂತ್ ಕುಮಾರ್ ಅವರ ಮನೆಯಲ್ಲಿ ಜುಲೈ 20ರಂದು ಕಳ್ಳತನ ನಡೆದಿತ್ತು. ಮನೆಯ ಮಾಲೀಕರು ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.</p>.<p>ಡೆಲಿವರಿ ಎಕ್ಸಿಕ್ಯುಟಿವ್ಗಳ ಸೋಗಿನಲ್ಲಿ ನಗರದ ಬೇರೆ ಬೇರೆ ಬಡಾವಣೆಗಳಲ್ಲಿ ಸುತ್ತಾಟ ನಡೆಸುತ್ತಿದ್ದ ಆರೋಪಿಗಳು, ಬೀಗ ಹಾಕಿದ್ದ ಮನೆಗಳನ್ನು ಗುರುತಿಸುತ್ತಿದ್ದರು. ರಾತ್ರಿ ವೇಳೆ ಆ ಮನೆಗೆ ಬಂದು ಬೀಗ ಮುರಿದು ಕಳ್ಳತನ ಮಾಡಿ ಪರಾರಿ ಆಗುತ್ತಿದ್ದರು ಎಂದು ಪೊಲೀಸರು ಹೇಳಿದರು.</p>.<p><strong>ರೋಲೆಕ್ಸ್ ವಾಚ್ ಕಳವು:</strong><br>ಜುಲೈ 20ರಂದು ಸಂಜೆ ವಿಮಾನ ನಿಲ್ದಾಣಕ್ಕೆ ಪುತ್ರನನ್ನು ಬಿಟ್ಟು ಬರಲು ವಸಂತ್ ಕುಮಾರ್ ತೆರಳಿದ್ದರು. ಅಂದೇ ರಾತ್ರಿ ವಾಪಸ್ ಬಂದು ನೋಡಿದಾಗ ಮನೆಯ ಬೀಗ ಒಡೆದು ₹1 ಕೋಟಿ ಮೌಲ್ಯದ ಚಿನ್ನಾಭರಣ, ರೋಲೆಕ್ಸ್ ವಾಚ್, ನಗದು ದೋಚಿರುವುದು ಕಂಡುಬಂದಿತ್ತು. ವಸಂತ್ಕುಮಾರ್ ಅವರು ನೀಡಿದ ದೂರು ಆಧರಿಸಿ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಯಿತು. ಆರೋಪಿಗಳು ಸ್ಕೂಟಿಯಲ್ಲಿ ಬಂದು ಮನೆಯ ಒಳಗೆ ಹೋಗುತ್ತಿದ್ದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.</p>.<p>ತುರಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಚಿನ್ನಾಭರಣ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>