<p><strong>ಬೆಂಗಳೂರು:</strong> ಕಳವು ಮಾಡಿದ್ದ ದ್ವಿಚಕ್ರ ವಾಹನಗಳಲ್ಲಿ ಮಹಿಳೆಯರನ್ನುಹಿಂಬಾಲಿಸಿ, ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ ಮೂವರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಮುನಿಯಪ್ಪ (27), ಚಂದು (21) ಹಾಗೂ ಜೈಕುಮಾರ್ (28) ಬಂಧಿತರು.</p>.<p>‘ಆರೋಪಿಗಳಿಂದ ₹12.7 ಲಕ್ಷ ಬೆಲೆ ಬಾಳುವ ಆರು ಚಿನ್ನದ ಸರಗಳು, ಚಿನ್ನದ ಬಳೆ ಹಾಗೂ ಕಳವು ಮಾಡಿ ಕೃತ್ಯಕ್ಕೆ ಬಳಸಿಕೊಂಡಿದ್ದ ಮೂರು ಬೈಕ್ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಆರೋಪಿಗಳು ಒಂಟಿ ಮಹಿಳೆಯರನ್ನು ಹಿಂಬಾಲಿಸಿ, ಅವರು ಧರಿಸುತ್ತಿದ್ದ ಚಿನ್ನಾಭರಣ ಕದಿಯುತ್ತಿದ್ದರು. ಬಂಧಿತರ ಪೈಕಿ ಮುನಿಯಪ್ಪ 12 ಪ್ರಕರಣಗಳಲ್ಲಿ ಭಾಗಿಯಾಗಿ, ಆರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ್ದ.ಚಂದು ಪೋಕ್ಸೊ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಎರಡು ವರ್ಷ ಜೈಲಿನಲ್ಲಿದ್ದ’.</p>.<p>‘ಆರೋಪಿಗಳ ಬಂಧನದಿಂದ ಕೋರಮಂಗಲ, ಎಚ್ಎಎಲ್, ಅನ್ನಪೂರ್ಣೇಶ್ವರಿ ನಗರ, ವೈಟ್ಫೀಲ್ಡ್ ಹಾಗೂ ಚನ್ನಮ್ಮನ ಅಚ್ಚುಕಟ್ಟು ಹಾಗೂ ಮಾಲೂರು ಠಾಣೆಗಳಲ್ಲಿ ಸರಗಳ್ಳತನ ಹಾಗೂ ಬೈಕ್ ಕಳವು ಪ್ರಕರಣಗಳು ಪತ್ತೆಯಾಗಿವೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಳವು ಮಾಡಿದ್ದ ದ್ವಿಚಕ್ರ ವಾಹನಗಳಲ್ಲಿ ಮಹಿಳೆಯರನ್ನುಹಿಂಬಾಲಿಸಿ, ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ ಮೂವರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಮುನಿಯಪ್ಪ (27), ಚಂದು (21) ಹಾಗೂ ಜೈಕುಮಾರ್ (28) ಬಂಧಿತರು.</p>.<p>‘ಆರೋಪಿಗಳಿಂದ ₹12.7 ಲಕ್ಷ ಬೆಲೆ ಬಾಳುವ ಆರು ಚಿನ್ನದ ಸರಗಳು, ಚಿನ್ನದ ಬಳೆ ಹಾಗೂ ಕಳವು ಮಾಡಿ ಕೃತ್ಯಕ್ಕೆ ಬಳಸಿಕೊಂಡಿದ್ದ ಮೂರು ಬೈಕ್ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಆರೋಪಿಗಳು ಒಂಟಿ ಮಹಿಳೆಯರನ್ನು ಹಿಂಬಾಲಿಸಿ, ಅವರು ಧರಿಸುತ್ತಿದ್ದ ಚಿನ್ನಾಭರಣ ಕದಿಯುತ್ತಿದ್ದರು. ಬಂಧಿತರ ಪೈಕಿ ಮುನಿಯಪ್ಪ 12 ಪ್ರಕರಣಗಳಲ್ಲಿ ಭಾಗಿಯಾಗಿ, ಆರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ್ದ.ಚಂದು ಪೋಕ್ಸೊ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಎರಡು ವರ್ಷ ಜೈಲಿನಲ್ಲಿದ್ದ’.</p>.<p>‘ಆರೋಪಿಗಳ ಬಂಧನದಿಂದ ಕೋರಮಂಗಲ, ಎಚ್ಎಎಲ್, ಅನ್ನಪೂರ್ಣೇಶ್ವರಿ ನಗರ, ವೈಟ್ಫೀಲ್ಡ್ ಹಾಗೂ ಚನ್ನಮ್ಮನ ಅಚ್ಚುಕಟ್ಟು ಹಾಗೂ ಮಾಲೂರು ಠಾಣೆಗಳಲ್ಲಿ ಸರಗಳ್ಳತನ ಹಾಗೂ ಬೈಕ್ ಕಳವು ಪ್ರಕರಣಗಳು ಪತ್ತೆಯಾಗಿವೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>