<p><strong>ಬೆಂಗಳೂರು:</strong> ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಪ್ರಯಾಣಿಕರ ಬ್ಯಾಗ್ಗಳಲ್ಲಿ ಚಿನ್ನಾಭರಣ ಕದಿಯುತ್ತಿದ್ದ ಆರೋಪಿಯನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.</p>.<p>ಲಗ್ಗೆರೆಯ ಕಾವೇರಿ ನಗರದ ನಿವಾಸಿ ಸಿದ್ದಿಕ್ (30) ಬಂಧಿತ ಆರೋಪಿ.</p>.<p>ಮಾ.10ರ ರಾತ್ರಿ ಬಸ್ ನಿಲ್ದಾಣಕ್ಕೆ ಬಂದಿದ್ದ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ 25 ಗ್ರಾಂ ಚಿನ್ನವನ್ನು ಆರೋಪಿ ಕದ್ದಿದ್ದ. ಈ ಸಂಬಂಧ ಮಹಿಳೆಬ್ಯಾಟರಾಯನಪುರ ಪೊಲೀಸರಿಗೆ ದೂರು ನೀಡಿದ್ದರು.</p>.<p>‘ಈತ ಹೆಚ್ಚು ಸಮಯವನ್ನು ಬಸ್ ನಿಲ್ದಾಣದಲ್ಲೇ ಕಳೆಯುತ್ತಿದ್ದ. ಅಲ್ಲಿಗೆ ಬರುತ್ತಿದ್ದ ಪ್ರಯಾಣಿಕರ ಚಲನವಲನಗಳನ್ನು ಗಮನಿಸಿ, ಚಿನ್ನಾಭರಣ ಇರುತ್ತಿದ್ದ ಬ್ಯಾಗ್ಗಳನ್ನು ಪತ್ತೆ ಮಾಡುತ್ತಿದ್ದ. ಬಳಿಕ ಸಾರ್ವಜನಿಕರಿಗೆ ತಿಳಿಯದಂತೆ ಬ್ಯಾಗ್ನಿಂದ ಚಿನ್ನಾಭರಣ ಕದಿಯುತ್ತಿದ್ದ’ ಎಂದು ಪೊಲೀಸರು ತಿಳಿಸಿದರು.</p>.<p>‘ಆರೋಪಿಯನ್ನು ವಿಚಾರಣೆ ನಡೆಸಿದಾಗ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ನಾಲ್ಕು ಕಳವು ಪ್ರಕರಣಗಳು ಪತ್ತೆಯಾಗಿವೆ. ಇದಕ್ಕೆ ಸಂಬಂಧಿಸಿದ ₹12 ಲಕ್ಷ ಬೆಲೆ ಬಾಳುವ 275 ಗ್ರಾಂ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಪ್ರಯಾಣಿಕರ ಬ್ಯಾಗ್ಗಳಲ್ಲಿ ಚಿನ್ನಾಭರಣ ಕದಿಯುತ್ತಿದ್ದ ಆರೋಪಿಯನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.</p>.<p>ಲಗ್ಗೆರೆಯ ಕಾವೇರಿ ನಗರದ ನಿವಾಸಿ ಸಿದ್ದಿಕ್ (30) ಬಂಧಿತ ಆರೋಪಿ.</p>.<p>ಮಾ.10ರ ರಾತ್ರಿ ಬಸ್ ನಿಲ್ದಾಣಕ್ಕೆ ಬಂದಿದ್ದ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ 25 ಗ್ರಾಂ ಚಿನ್ನವನ್ನು ಆರೋಪಿ ಕದ್ದಿದ್ದ. ಈ ಸಂಬಂಧ ಮಹಿಳೆಬ್ಯಾಟರಾಯನಪುರ ಪೊಲೀಸರಿಗೆ ದೂರು ನೀಡಿದ್ದರು.</p>.<p>‘ಈತ ಹೆಚ್ಚು ಸಮಯವನ್ನು ಬಸ್ ನಿಲ್ದಾಣದಲ್ಲೇ ಕಳೆಯುತ್ತಿದ್ದ. ಅಲ್ಲಿಗೆ ಬರುತ್ತಿದ್ದ ಪ್ರಯಾಣಿಕರ ಚಲನವಲನಗಳನ್ನು ಗಮನಿಸಿ, ಚಿನ್ನಾಭರಣ ಇರುತ್ತಿದ್ದ ಬ್ಯಾಗ್ಗಳನ್ನು ಪತ್ತೆ ಮಾಡುತ್ತಿದ್ದ. ಬಳಿಕ ಸಾರ್ವಜನಿಕರಿಗೆ ತಿಳಿಯದಂತೆ ಬ್ಯಾಗ್ನಿಂದ ಚಿನ್ನಾಭರಣ ಕದಿಯುತ್ತಿದ್ದ’ ಎಂದು ಪೊಲೀಸರು ತಿಳಿಸಿದರು.</p>.<p>‘ಆರೋಪಿಯನ್ನು ವಿಚಾರಣೆ ನಡೆಸಿದಾಗ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ನಾಲ್ಕು ಕಳವು ಪ್ರಕರಣಗಳು ಪತ್ತೆಯಾಗಿವೆ. ಇದಕ್ಕೆ ಸಂಬಂಧಿಸಿದ ₹12 ಲಕ್ಷ ಬೆಲೆ ಬಾಳುವ 275 ಗ್ರಾಂ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>