ದೀಪಾವಳಿ ದಿನ ಮನೆಯನ್ನು ಸ್ವಚ್ಛ ಮಾಡಲು ಕುಶಾಲ್ ಸಿಂಗ್ಗೆ ಸೂಚಿಸಿದ್ದ ಮೆಹಕ್, ಪತ್ನಿ ಜೊತೆ ಚಿಕ್ಕಪೇಟೆಯಲ್ಲಿರುವ ಅಂಗಡಿ ಪೂಜೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಮನೆಯ ಲಾಕರ್ನಲ್ಲಿದ್ದ ಚಿನ್ನದ ಒಡವೆಗಳನ್ನು ಚೀಲದಲ್ಲಿ ತುಂಬಿಕೊಂಡ ಆರೋಪಿ, ಜೋಧಪುರ ಎಕ್ಸ್ಪ್ರೆಸ್ ರೈಲಿನಲ್ಲಿ ರಾಜಸ್ಥಾನಕ್ಕೆ ಪರಾರಿಯಾಗಿದ್ದ. ಸಂಜೆ ಐದು ಗಂಟೆ ಸುಮಾರಿಗೆ ಮನೆಗೆ ಬಂದ ಮೆಹಕ್ ದಂಪತಿಗೆ ಮನೆಯಲ್ಲಿ ಕಳವು ನಡೆದಿರುವುದು ಗೊತ್ತಾಗಿದೆ.