<p><strong>ಬೆಂಗಳೂರು: </strong>ಪರಿಚಯಸ್ಥರ ಮನೆಯಲ್ಲಿ ಚಿನ್ನಾಭರಣ, ನಗದು ಕದ್ದಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.ಬ್ಯಾಡರಹಳ್ಳಿಯ ಶೇಖರ್ ಬಂಧಿತ ಆರೋಪಿ.</p>.<p>ಈತ ತನಗೆ ಪರಿಚಯಸ್ಥರ ಮನೆಗೆ ಆಗಾಗ ಬರುತ್ತಿದ್ದ. ಜುಲೈ 15ರಂದು ಮನೆಯಲ್ಲಿದ್ದ ಚಿನ್ನಾಭರಣ, ನಗದು ಕಳವಾಗಿತ್ತು. ಮನೆಯವರು ಶೇಖರ್ ಮೇಲೆ ಶಂಕಿಸಿ, ಪೊಲೀಸರಿಗೆ ದೂರು ನೀಡಿದ್ದರು.</p>.<p>‘ಶೇಖರ್ನ ಬಗ್ಗೆ ವಿಚಾರಿಸಿದಾಗ ಆತ ತಲೆಮರೆಸಿಕೊಂಡಿರುವ ವಿಚಾರ ತಿಳಿಯಿತು. ಶೇಖರ್ನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಕಳ್ಳತನ ಬಗ್ಗೆ ಬಾಯ್ಬಿಟ್ಟಿದ್ದ. ಆರೋಪಿಯಿಂದ ₹4.50 ಲಕ್ಷ ಬೆಲೆಬಾಳುವ 110 ಗ್ರಾಂ.ನಷ್ಟು ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p class="Subhead">ಕಳ್ಳತನದಲ್ಲಿ ಮಹಿಳೆ ಭಾಗಿ: ಸಂಬಂಧಿಕರ ಮನೆಯಲ್ಲೇ ಚಿನ್ನಾಭರಣ, ನಗದು ಕದ್ದಿದ್ದ ಆರೋಪದಡಿ ಮಹಿಳೆ ಸೇರಿ ಇಬ್ಬರನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ.</p>.<p>ಜ್ಞಾನಭಾರತಿಯ ಶ್ವೇತಾ ಹಾಗೂ ನಾಗರಾಜು ಬಂಧಿತ ಆರೋಪಿಗಳು.</p>.<p>‘ಕಳೆದ ಮಾರ್ಚ್ನಲ್ಲಿಜ್ಞಾನಭಾರತಿ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಚಿನ್ನಾಭರಣ ಕಳವಾಗಿತ್ತು. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಮನೆಯವರಿಗೆ ಪರಿಚಯಸ್ಥರೇ ಆಗಿದ್ದರು. ಮನೆಗೆ ನುಗ್ಗಿ ಬೀರುವಿನಲ್ಲಿ ಇಟ್ಟಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು‘ ಎಂದು ಪೊಲೀಸರು ತಿಳಿಸಿದರು.</p>.<p>‘ಬಂಧಿತರಿಂದ ₹3.30 ಲಕ್ಷ ಬೆಲೆಬಾಳುವ 65 ಗ್ರಾಂ ತೂಕದ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪರಿಚಯಸ್ಥರ ಮನೆಯಲ್ಲಿ ಚಿನ್ನಾಭರಣ, ನಗದು ಕದ್ದಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.ಬ್ಯಾಡರಹಳ್ಳಿಯ ಶೇಖರ್ ಬಂಧಿತ ಆರೋಪಿ.</p>.<p>ಈತ ತನಗೆ ಪರಿಚಯಸ್ಥರ ಮನೆಗೆ ಆಗಾಗ ಬರುತ್ತಿದ್ದ. ಜುಲೈ 15ರಂದು ಮನೆಯಲ್ಲಿದ್ದ ಚಿನ್ನಾಭರಣ, ನಗದು ಕಳವಾಗಿತ್ತು. ಮನೆಯವರು ಶೇಖರ್ ಮೇಲೆ ಶಂಕಿಸಿ, ಪೊಲೀಸರಿಗೆ ದೂರು ನೀಡಿದ್ದರು.</p>.<p>‘ಶೇಖರ್ನ ಬಗ್ಗೆ ವಿಚಾರಿಸಿದಾಗ ಆತ ತಲೆಮರೆಸಿಕೊಂಡಿರುವ ವಿಚಾರ ತಿಳಿಯಿತು. ಶೇಖರ್ನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಕಳ್ಳತನ ಬಗ್ಗೆ ಬಾಯ್ಬಿಟ್ಟಿದ್ದ. ಆರೋಪಿಯಿಂದ ₹4.50 ಲಕ್ಷ ಬೆಲೆಬಾಳುವ 110 ಗ್ರಾಂ.ನಷ್ಟು ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p class="Subhead">ಕಳ್ಳತನದಲ್ಲಿ ಮಹಿಳೆ ಭಾಗಿ: ಸಂಬಂಧಿಕರ ಮನೆಯಲ್ಲೇ ಚಿನ್ನಾಭರಣ, ನಗದು ಕದ್ದಿದ್ದ ಆರೋಪದಡಿ ಮಹಿಳೆ ಸೇರಿ ಇಬ್ಬರನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ.</p>.<p>ಜ್ಞಾನಭಾರತಿಯ ಶ್ವೇತಾ ಹಾಗೂ ನಾಗರಾಜು ಬಂಧಿತ ಆರೋಪಿಗಳು.</p>.<p>‘ಕಳೆದ ಮಾರ್ಚ್ನಲ್ಲಿಜ್ಞಾನಭಾರತಿ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಚಿನ್ನಾಭರಣ ಕಳವಾಗಿತ್ತು. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಮನೆಯವರಿಗೆ ಪರಿಚಯಸ್ಥರೇ ಆಗಿದ್ದರು. ಮನೆಗೆ ನುಗ್ಗಿ ಬೀರುವಿನಲ್ಲಿ ಇಟ್ಟಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು‘ ಎಂದು ಪೊಲೀಸರು ತಿಳಿಸಿದರು.</p>.<p>‘ಬಂಧಿತರಿಂದ ₹3.30 ಲಕ್ಷ ಬೆಲೆಬಾಳುವ 65 ಗ್ರಾಂ ತೂಕದ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>