<p><strong>ಬೆಂಗಳೂರು</strong>: ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಕಳ್ಳತನ ಮಾಡುತ್ತಿದ್ದ ಫುಡ್ ಡೆಲಿವರಿ ಬಾಯ್ ಸೇರಿ ಮೂವರು ಆರೋಪಿಗಳನ್ನು ಬೆಳ್ಳಂದೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಕೊಡತಿ ಗೇಟ್ನ ದೀಕ್ಷಿತ್, ಕ್ಲೆಂಟನ್ ಹಾಗೂ ಆಭರಣ ಅಂಗಡಿ ಮಾಲೀಕ ಮೋತಿಲಾಲ್ ಬಂಧಿತರು.</p>.<p>ಬಂಧಿತರಿಂದ 70 ಗ್ರಾಂ. ಚಿನ್ನ, ಕೃತ್ಯಕ್ಕೆ ಬಳಸಿದ್ದ ಎರಡು ದ್ವಿಚಕ್ರ ವಾಹನ ವಶಕ್ಕೆ ಪಡೆದುಕೊಳ್ಳಲಾಗಿದೆ. ಬೆಳ್ಳಂದೂರಿನ ನಿವಾಸಿ ಸುಧಾಕರ್ ಅವರು ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.</p>.<p>ಮೂವರು ಆರೋಪಿಗಳನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>‘ಡೆಲಿವರಿ ಬಾಯ್ ಆಗಿ ದೀಕ್ಷಿತ್ ಕೆಲಸ ಮಾಡುತ್ತಿದ್ದ. ಹೆಚ್ಚಿನ ಹಣ ಸಂಪಾದನೆಗಾಗಿ ಕಳ್ಳತನ ಮಾಡಲು ಮುಂದಾಗಿದ್ದ. ಮಾರ್ಚ್ 2ರಂದು ಬೆಳ್ಳಂದೂರಿನ ಶುಭಾ ಎನ್ಕ್ಲೇವ್ ಲೇಔಟ್ ಬಳಿ ಫುಡ್ ಡೆಲಿವರಿ ಮಾಡಲು ಬಂದಿದ್ದ. ಈ ವೇಳೆ ದೂರುದಾರರ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ, ತನ್ನ ಸ್ನೇಹಿತ ಕ್ಲೆಂಟನ್ನನ್ನು ಸ್ಥಳಕ್ಕೆ ಕರೆಸಿಕೊಂಡಿದ್ದ. ಇಬ್ಬರೂ ಸೇರಿಕೊಂಡು ಮನೆಯಲ್ಲಿದ್ದ 210 ಗ್ರಾಂ. ಚಿನ್ನ ಹಾಗೂ ₹50 ಸಾವಿರ ನಗದು ಕಳ್ಳತನ ಮಾಡಿ ಪರಾರಿ ಆಗಿದ್ದರು. ಕದ್ದ ಚಿನ್ನವನ್ನು ಚಿನ್ನದ ವ್ಯಾಪಾರಿ ಮೋತಿಲಾಲ್ ಬಳಿ ಅಡಮಾನ ಇಟ್ಟಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಆರೋಪಿಗಳು ಚಿನ್ನವನ್ನು ಮಾರಾಟ ಮಾಡಿ ಅದರಿಂದ ಬಂದ ಹಣದಿಂದ ಟೀ ಅಂಗಡಿ ತೆರೆಯಲು ನಿರ್ಧರಿಸಿದ್ದರು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಕಳ್ಳತನ ಮಾಡುತ್ತಿದ್ದ ಫುಡ್ ಡೆಲಿವರಿ ಬಾಯ್ ಸೇರಿ ಮೂವರು ಆರೋಪಿಗಳನ್ನು ಬೆಳ್ಳಂದೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಕೊಡತಿ ಗೇಟ್ನ ದೀಕ್ಷಿತ್, ಕ್ಲೆಂಟನ್ ಹಾಗೂ ಆಭರಣ ಅಂಗಡಿ ಮಾಲೀಕ ಮೋತಿಲಾಲ್ ಬಂಧಿತರು.</p>.<p>ಬಂಧಿತರಿಂದ 70 ಗ್ರಾಂ. ಚಿನ್ನ, ಕೃತ್ಯಕ್ಕೆ ಬಳಸಿದ್ದ ಎರಡು ದ್ವಿಚಕ್ರ ವಾಹನ ವಶಕ್ಕೆ ಪಡೆದುಕೊಳ್ಳಲಾಗಿದೆ. ಬೆಳ್ಳಂದೂರಿನ ನಿವಾಸಿ ಸುಧಾಕರ್ ಅವರು ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.</p>.<p>ಮೂವರು ಆರೋಪಿಗಳನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>‘ಡೆಲಿವರಿ ಬಾಯ್ ಆಗಿ ದೀಕ್ಷಿತ್ ಕೆಲಸ ಮಾಡುತ್ತಿದ್ದ. ಹೆಚ್ಚಿನ ಹಣ ಸಂಪಾದನೆಗಾಗಿ ಕಳ್ಳತನ ಮಾಡಲು ಮುಂದಾಗಿದ್ದ. ಮಾರ್ಚ್ 2ರಂದು ಬೆಳ್ಳಂದೂರಿನ ಶುಭಾ ಎನ್ಕ್ಲೇವ್ ಲೇಔಟ್ ಬಳಿ ಫುಡ್ ಡೆಲಿವರಿ ಮಾಡಲು ಬಂದಿದ್ದ. ಈ ವೇಳೆ ದೂರುದಾರರ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ, ತನ್ನ ಸ್ನೇಹಿತ ಕ್ಲೆಂಟನ್ನನ್ನು ಸ್ಥಳಕ್ಕೆ ಕರೆಸಿಕೊಂಡಿದ್ದ. ಇಬ್ಬರೂ ಸೇರಿಕೊಂಡು ಮನೆಯಲ್ಲಿದ್ದ 210 ಗ್ರಾಂ. ಚಿನ್ನ ಹಾಗೂ ₹50 ಸಾವಿರ ನಗದು ಕಳ್ಳತನ ಮಾಡಿ ಪರಾರಿ ಆಗಿದ್ದರು. ಕದ್ದ ಚಿನ್ನವನ್ನು ಚಿನ್ನದ ವ್ಯಾಪಾರಿ ಮೋತಿಲಾಲ್ ಬಳಿ ಅಡಮಾನ ಇಟ್ಟಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಆರೋಪಿಗಳು ಚಿನ್ನವನ್ನು ಮಾರಾಟ ಮಾಡಿ ಅದರಿಂದ ಬಂದ ಹಣದಿಂದ ಟೀ ಅಂಗಡಿ ತೆರೆಯಲು ನಿರ್ಧರಿಸಿದ್ದರು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>