‘ಅಲೆಮಾರಿ ಸಮುದಾಯವು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ತುಂಬಾ ಹಿಂದುಳಿದಿದೆ. ಈ ಸಮಾಜದ ಅಭಿವೃದ್ಧಿಗಾಗಿ ಸರ್ಕಾರವು2020–2021ನೇ ಸಾಲಿನಲ್ಲಿ ಅಭಿವೃದ್ಧಿ ನಿಗಮ ಸ್ಥಾಪಿಸಿ₹25 ಕೋಟಿ ಅನುದಾನ ಘೋಷಿಸಿತ್ತು. ಆದರೆ ಈ ವರ್ಷದ ಬಜೆಟ್ನಲ್ಲಿ ಕೇವಲ₹29 ಲಕ್ಷ ನೀಡಿರುವುದು ಬೇಸರ ತರಿಸಿದೆ. ಈ ಸಮುದಾಯಕ್ಕೆ ಸೇರಿದ ಅನೇಕ ಕುಟುಂಬಗಳು ಕೋವಿಡ್ನಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿವೆ. ಸೋಂಕು ತಗುಲಿದರೆ ಚಿಕಿತ್ಸೆ ಪಡೆಯಲು ಹಣವಿಲ್ಲದೇ ಪರಿತಪಿಸುತ್ತಿವೆ’ ಎಂದು ಮುಖ್ಯಮಂತ್ರಿಯವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.