<p><strong>ಬೆಂಗಳೂರು:</strong> ಚಳಿಯಲ್ಲಿ ನಡುಗುತ್ತಾ ಫುಟ್ಪಾತ್ ಮೇಲೆ ಮಲಗಿರುವವರಿಗೆ ‘ದಿ ಗುಡ್ ಕ್ವೆಸ್ಟ್’ ಸಂಘಟನೆ ಕಂಬಳಿ ವಿತರಿಸುವ ಕಾರ್ಯಕ್ಕೆ ಮುಂದಾಗಿದೆ.</p>.<p>ಮಾಹಿತಿ ತಂತ್ರಜ್ಞಾನ, ಶಿಕ್ಷಣ, ಉದ್ಯಮ ಸೇರಿದಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಈ ಸಂಘಟನೆಯ ಸದಸ್ಯರು ವಾರಾಂತ್ಯದಲ್ಲಿ ಸಮುದಾಯ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಅದರ ಭಾಗವಾಗಿ ಈ ಬಾರಿ ಕಂಬಳಿ ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಂಡದ ಸದಸ್ಯ, ಜೈನ್ ವಿಶ್ವವಿದ್ಯಾಲಯದ<br />ಪ್ರಾಧ್ಯಾಪಕರೊಬ್ಬರು ಮಾಹಿತಿ ನೀಡಿದರು.</p>.<p>‘ಸುಮಾರು 600ರಷ್ಟು ಕಂಬಳಿ ವಿತರಿಸುವ ಗುರಿ ಹೊಂದಿದ್ದೇವೆ. ಟ್ಯಾನರಿ ರಸ್ತೆ, ಶಿವಾಜಿನಗರ, ವಿಕ್ಟೋರಿಯಾ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆ ಮುಂಭಾಗ, ಕೆ.ಆರ್. ಮಾರುಕಟ್ಟೆ ಸಮೀಪದ ಬಿಲಾಲ್ ಮಸೀದಿ, ರೈಲು ನಿಲ್ದಾಣಗಳ ಪ್ಲಾಟ್ ಫಾರಂಗಳಲ್ಲಿ ಕಂಬಳಿ ವಿತರಿಸಿದ್ದೇವೆ’ ಎಂದು ಅವರು ಮಾಹಿತಿ ನೀಡಿದರು.</p>.<p>ಕಳೆದ ವಾರ ಇದೇ ತಂಡದವರು ಫುಟ್ಪಾತ್ ವಾಸಿಗಳಿಗೆ ಬಿಸಿ ಸೂಪ್ ವಿತರಿಸಿದ್ದರು.</p>.<p>‘ವಾಟ್ಸ್ ಆ್ಯಪ್ ಮೂಲಕ ಪರಸ್ಪರ ಸಂವಹನ ನಡೆಸಿ ಕಾರ್ಯಕ್ರಮದ ಯೋಜನೆ ರೂಪಿಸಲಾಗುತ್ತದೆ. ಪ್ರತಿ ವಾರಾಂತ್ಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ’ ಎಂದು ಹೆಸರು ಹೇಳಬಯಸದ ಸದಸ್ಯರೊಬ್ಬರು ಹೇಳಿದರು.</p>.<p>ಅಶೋಕ್, ಕೀರ್ತಿ, ಸಂತೋಷ್ ಈ ಕಾರ್ಯಕ್ರಮದ ನೇತೃತ್ವ ವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಳಿಯಲ್ಲಿ ನಡುಗುತ್ತಾ ಫುಟ್ಪಾತ್ ಮೇಲೆ ಮಲಗಿರುವವರಿಗೆ ‘ದಿ ಗುಡ್ ಕ್ವೆಸ್ಟ್’ ಸಂಘಟನೆ ಕಂಬಳಿ ವಿತರಿಸುವ ಕಾರ್ಯಕ್ಕೆ ಮುಂದಾಗಿದೆ.</p>.<p>ಮಾಹಿತಿ ತಂತ್ರಜ್ಞಾನ, ಶಿಕ್ಷಣ, ಉದ್ಯಮ ಸೇರಿದಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಈ ಸಂಘಟನೆಯ ಸದಸ್ಯರು ವಾರಾಂತ್ಯದಲ್ಲಿ ಸಮುದಾಯ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಅದರ ಭಾಗವಾಗಿ ಈ ಬಾರಿ ಕಂಬಳಿ ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಂಡದ ಸದಸ್ಯ, ಜೈನ್ ವಿಶ್ವವಿದ್ಯಾಲಯದ<br />ಪ್ರಾಧ್ಯಾಪಕರೊಬ್ಬರು ಮಾಹಿತಿ ನೀಡಿದರು.</p>.<p>‘ಸುಮಾರು 600ರಷ್ಟು ಕಂಬಳಿ ವಿತರಿಸುವ ಗುರಿ ಹೊಂದಿದ್ದೇವೆ. ಟ್ಯಾನರಿ ರಸ್ತೆ, ಶಿವಾಜಿನಗರ, ವಿಕ್ಟೋರಿಯಾ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆ ಮುಂಭಾಗ, ಕೆ.ಆರ್. ಮಾರುಕಟ್ಟೆ ಸಮೀಪದ ಬಿಲಾಲ್ ಮಸೀದಿ, ರೈಲು ನಿಲ್ದಾಣಗಳ ಪ್ಲಾಟ್ ಫಾರಂಗಳಲ್ಲಿ ಕಂಬಳಿ ವಿತರಿಸಿದ್ದೇವೆ’ ಎಂದು ಅವರು ಮಾಹಿತಿ ನೀಡಿದರು.</p>.<p>ಕಳೆದ ವಾರ ಇದೇ ತಂಡದವರು ಫುಟ್ಪಾತ್ ವಾಸಿಗಳಿಗೆ ಬಿಸಿ ಸೂಪ್ ವಿತರಿಸಿದ್ದರು.</p>.<p>‘ವಾಟ್ಸ್ ಆ್ಯಪ್ ಮೂಲಕ ಪರಸ್ಪರ ಸಂವಹನ ನಡೆಸಿ ಕಾರ್ಯಕ್ರಮದ ಯೋಜನೆ ರೂಪಿಸಲಾಗುತ್ತದೆ. ಪ್ರತಿ ವಾರಾಂತ್ಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ’ ಎಂದು ಹೆಸರು ಹೇಳಬಯಸದ ಸದಸ್ಯರೊಬ್ಬರು ಹೇಳಿದರು.</p>.<p>ಅಶೋಕ್, ಕೀರ್ತಿ, ಸಂತೋಷ್ ಈ ಕಾರ್ಯಕ್ರಮದ ನೇತೃತ್ವ ವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>