ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ, ‘ಅಧಿಕಾರದಲ್ಲಿರುವವರ ಸ್ವಾರ್ಥ ಮತ್ತು ದುರಾಸೆಯು ಭ್ರಷ್ಟಾಚಾರವನ್ನು ಪೋಷಿಸುತ್ತಿದೆ. ಜೀಪ್ ಹಗರಣದಲ್ಲಿ ₹ 52 ಲಕ್ಷ, ಬೊಫೋರ್ಸ್ ಹಗರಣದಲ್ಲಿ ₹ 64 ಕೋಟಿ, ಕಾಮನ್ವೆಲ್ತ್ ಹಗರಣದಲ್ಲಿ ₹70 ಸಾವಿರ ಕೋಟಿ, 2ಜಿ ಹಗರಣದಲ್ಲಿ ₹1.76 ಸಾವಿರ ಕೋಟಿ, ಕಲ್ಲಿದ್ದಲು ಹಗರಣದಲ್ಲಿ ₹ 1.86 ಸಾವಿರ ಕೋಟಿ ಲೂಟಿ ಹೊಡೆಯಲಾಗಿದೆ. ಆಡಳಿತದಲ್ಲಿರುವವರ ಸ್ವಾರ್ಥ-ದುರಾಸೆ ಇವುಗಳಿಗೆಲ್ಲಾ ಕಾರಣ. ಜೀವನದಲ್ಲಿ ತೃಪ್ತಿಯನ್ನು ಹೊಂದುವ ಜತೆಗೆ ಮಾನವೀಯ ಮೌಲ್ಯವನ್ನು ಅಳವಡಿಸಿಕೊಳ್ಳಬೇಕು’ ಎಂದು ತಿಳಿಸಿದರು.