‘ನಂಜನಗೂಡು ತಿರುಮಲಾಂಬ ಪ್ರಕಾಶನ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದ ಪತ್ರಕರ್ತೆ ಆರ್. ಪೂರ್ಣಿಮಾ, ‘ಬಾಲ್ಯವಿವಾಹಕ್ಕೆ ಒಳಗಾಗಿ ಚಿಕ್ಕ ವಯಸ್ಸಿನಲ್ಲಿಯೇ ವಿಧವೆಯಾದ ನಂಜನಗೂಡು ತಿರುಮಲಾಂಬ ಅವರು ನಂತರದಲ್ಲಿ ಶಿಕ್ಷಣ ಪಡೆದು, ಪತ್ರಿಕೆ ಹಾಗೂ ಪ್ರಕಾಶನ ರಂಗದಲ್ಲಿ ಅನನ್ಯ ಕೊಡುಗೆ ನೀಡಿದರು. ಅಂತಹವರ ಹೆಸರಿನಲ್ಲಿ ಪ್ರಶಸ್ತಿ ಪಡೆದುಕೊಂಡಿರುವುದು ಸಂತಸ ತಂದಿದೆ’ ಎಂದರು.