ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಪಾಲಪುರ ಕೆರೆಗೆ ಬಾಗಿನ ಅರ್ಪಿಸಿದ ವಿಶ್ವನಾಥ್

Last Updated 5 ಜನವರಿ 2021, 19:23 IST
ಅಕ್ಷರ ಗಾತ್ರ

ಹೆಸರಘಟ್ಟ: ದಾಸನಪುರ ಹೋಬಳಿಯ ಗೋಪಾಲಪುರ ಗ್ರಾಮದ ಕೆರೆಗೆ ಯಲಹಂಕ ಶಾಸಕ ಎಸ್.ಆರ್‌.ವಿಶ್ವನಾಥ್ ಮಂಗಳವಾರ ಬಾಗಿನ ಅರ್ಪಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಬಿ.ಸಿ.ಟ್ರಸ್ಟ್, ಗೋಪಾಲಪುರ ಕೆರೆ ಬಳಕೆದಾರರ ಸಂಘ ಹಾಗೂ ಕೆರೆ ಸಂರಕ್ಷಣೆ ಪ್ರಾಧಿಕಾರಗಳ ಸಹಭಾಗಿತ್ವದಲ್ಲಿ ಕೆರೆ ಸಂಜೀವಿನಿ ಯೋಜನೆಯಡಿ ₹60 ಲಕ್ಷ ವೆಚ್ಚದಲ್ಲಿ ಕೆರೆಯನ್ನು ಪುನಶ್ಚೇತನಗೊಳಿಸಲಾಗಿತ್ತು.

38 ಎಕರೆ ವಿಸ್ತೀರ್ಣದಕೆರೆಯ ಅಭಿವೃದ್ಧಿಗೆ ಕೆರೆಗೆ ಪ್ರಾಧಿಕಾರವು ₹20 ಲಕ್ಷ ಅನುದಾನ ಹಾಗೂ ದಾನಿಗಳು ₹29 ಲಕ್ಷ ನೀಡಿದ್ದರು.

‘ನೀರನ್ನು ಗಂಗೆ ಮಾತೆ ಎನ್ನುವ ಸಂಸ್ಕೃತಿ ನಮ್ಮದು. ನಾಡಪ್ರಭು ಕೆಂಪೇಗೌಡ ಅವರು 500 ಕೆರೆಗಳನ್ನು ನಿರ್ಮಾಣ ಮಾಡಿದ್ದರು. ಸಾಲುಮರಗಳನ್ನು ಬೆಳೆಸಿದ್ದರು. ನಮ್ಮ ಊರಿನ ಕೆರೆಗಳನ್ನು ನಾವು ಉಳಿಸಿಕೊಂಡು ಹೋಗಬೇಕು’ ಎಂದುಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.

‘ಎಲ್ಲ ರೀತಿಯ ಅನ್ಷೇಷಣೆಗಳನ್ನು ಮಾಡಿರುವ ವಿಜ್ಞಾನಿಗಳು ನೀರನ್ನು ಕಂಡುಹಿಡಿಯಲು ಸಾಧ್ಯವಿಲ್ಲ. ಪ್ರಕೃತಿ ನೀಡಿರುವ ಜಲಮೂಲಗಳನ್ನು ಉಳಿಸಬೇಕು. ಕೆರೆ ಒತ್ತುವರಿ ನಿಲ್ಲಿಸಬೇಕು. ಕೆರೆ ಸಂರಕ್ಷಣ ಪ್ರಾಧಿಕಾರದ ಅನುದಾನ ಬಳಸಿಕೊಂಡು, ದಾಸನಪುರ ಕ್ಷೇತ್ರದ ಎಲ್ಲ ಕೆರೆಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ‌ಎಲ್.ಎಚ್. ಮಂಜುನಾಥ್,‘ ಇದು ಸಂಸ್ಥೆಯಿಂದ ಅಭಿವೃದ್ಧಿಪಡಿಸಿರುವ 251ನೇ ಕೆರೆ. ಸಂಸ್ಥೆಯು ₹35 ಕೋಟಿ ವೆಚ್ಚದಲ್ಲಿ ರಾಜ್ಯದ ಹಲವು ಕೆರೆಗಳನ್ನು ಅಭಿವೃದ್ದಿಪಡಿಸಿದೆ. ಶುದ್ಧಗಂಗಾ ಯೋಜನೆಯಲ್ಲಿ ಕ್ಷೇತ್ರವು ಹತ್ತು ಪೈಸೆಗೆ ಒಂದು ಲೀಟರ್ ನೀರು ಕೊಟ್ಟಿದೆ. 300 ಘಟಕಗಳ ಮೂಲಕ70 ಸಾವಿರ ಕುಟುಂಬಗಳು ಇದರ ಅನುಕೂಲ ಪಡೆಯುತ್ತಿವೆ’ ಎಂದರು.

ಕಳಸ ನೀಡುವ ಮೂಲಕ ಗೋಪಾಲಪುರ ಗ್ರಾಮ ಪಂಚಾಯಿತಿಗೆಕೆರೆಯ ನಿರ್ವಹಣೆಯನ್ನು ಹಸ್ತಾಂತರಿಸಲಾಯಿತು. ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ರವಿಕುಮಾರ್ ನಿರ್ಗತಿಕರಿಗೆ ಮಾಸಾಶನ ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT