<p><strong>ಹೆಸರಘಟ್ಟ: </strong>ದಾಸನಪುರ ಹೋಬಳಿಯ ಗೋಪಾಲಪುರ ಗ್ರಾಮದ ಕೆರೆಗೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮಂಗಳವಾರ ಬಾಗಿನ ಅರ್ಪಿಸಿದರು.</p>.<p>ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಬಿ.ಸಿ.ಟ್ರಸ್ಟ್, ಗೋಪಾಲಪುರ ಕೆರೆ ಬಳಕೆದಾರರ ಸಂಘ ಹಾಗೂ ಕೆರೆ ಸಂರಕ್ಷಣೆ ಪ್ರಾಧಿಕಾರಗಳ ಸಹಭಾಗಿತ್ವದಲ್ಲಿ ಕೆರೆ ಸಂಜೀವಿನಿ ಯೋಜನೆಯಡಿ ₹60 ಲಕ್ಷ ವೆಚ್ಚದಲ್ಲಿ ಕೆರೆಯನ್ನು ಪುನಶ್ಚೇತನಗೊಳಿಸಲಾಗಿತ್ತು.</p>.<p>38 ಎಕರೆ ವಿಸ್ತೀರ್ಣದಕೆರೆಯ ಅಭಿವೃದ್ಧಿಗೆ ಕೆರೆಗೆ ಪ್ರಾಧಿಕಾರವು ₹20 ಲಕ್ಷ ಅನುದಾನ ಹಾಗೂ ದಾನಿಗಳು ₹29 ಲಕ್ಷ ನೀಡಿದ್ದರು.</p>.<p>‘ನೀರನ್ನು ಗಂಗೆ ಮಾತೆ ಎನ್ನುವ ಸಂಸ್ಕೃತಿ ನಮ್ಮದು. ನಾಡಪ್ರಭು ಕೆಂಪೇಗೌಡ ಅವರು 500 ಕೆರೆಗಳನ್ನು ನಿರ್ಮಾಣ ಮಾಡಿದ್ದರು. ಸಾಲುಮರಗಳನ್ನು ಬೆಳೆಸಿದ್ದರು. ನಮ್ಮ ಊರಿನ ಕೆರೆಗಳನ್ನು ನಾವು ಉಳಿಸಿಕೊಂಡು ಹೋಗಬೇಕು’ ಎಂದುಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.</p>.<p>‘ಎಲ್ಲ ರೀತಿಯ ಅನ್ಷೇಷಣೆಗಳನ್ನು ಮಾಡಿರುವ ವಿಜ್ಞಾನಿಗಳು ನೀರನ್ನು ಕಂಡುಹಿಡಿಯಲು ಸಾಧ್ಯವಿಲ್ಲ. ಪ್ರಕೃತಿ ನೀಡಿರುವ ಜಲಮೂಲಗಳನ್ನು ಉಳಿಸಬೇಕು. ಕೆರೆ ಒತ್ತುವರಿ ನಿಲ್ಲಿಸಬೇಕು. ಕೆರೆ ಸಂರಕ್ಷಣ ಪ್ರಾಧಿಕಾರದ ಅನುದಾನ ಬಳಸಿಕೊಂಡು, ದಾಸನಪುರ ಕ್ಷೇತ್ರದ ಎಲ್ಲ ಕೆರೆಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದರು.</p>.<p>ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್.ಎಚ್. ಮಂಜುನಾಥ್,‘ ಇದು ಸಂಸ್ಥೆಯಿಂದ ಅಭಿವೃದ್ಧಿಪಡಿಸಿರುವ 251ನೇ ಕೆರೆ. ಸಂಸ್ಥೆಯು ₹35 ಕೋಟಿ ವೆಚ್ಚದಲ್ಲಿ ರಾಜ್ಯದ ಹಲವು ಕೆರೆಗಳನ್ನು ಅಭಿವೃದ್ದಿಪಡಿಸಿದೆ. ಶುದ್ಧಗಂಗಾ ಯೋಜನೆಯಲ್ಲಿ ಕ್ಷೇತ್ರವು ಹತ್ತು ಪೈಸೆಗೆ ಒಂದು ಲೀಟರ್ ನೀರು ಕೊಟ್ಟಿದೆ. 300 ಘಟಕಗಳ ಮೂಲಕ70 ಸಾವಿರ ಕುಟುಂಬಗಳು ಇದರ ಅನುಕೂಲ ಪಡೆಯುತ್ತಿವೆ’ ಎಂದರು.</p>.<p>ಕಳಸ ನೀಡುವ ಮೂಲಕ ಗೋಪಾಲಪುರ ಗ್ರಾಮ ಪಂಚಾಯಿತಿಗೆಕೆರೆಯ ನಿರ್ವಹಣೆಯನ್ನು ಹಸ್ತಾಂತರಿಸಲಾಯಿತು. ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ರವಿಕುಮಾರ್ ನಿರ್ಗತಿಕರಿಗೆ ಮಾಸಾಶನ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಸರಘಟ್ಟ: </strong>ದಾಸನಪುರ ಹೋಬಳಿಯ ಗೋಪಾಲಪುರ ಗ್ರಾಮದ ಕೆರೆಗೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮಂಗಳವಾರ ಬಾಗಿನ ಅರ್ಪಿಸಿದರು.</p>.<p>ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಬಿ.ಸಿ.ಟ್ರಸ್ಟ್, ಗೋಪಾಲಪುರ ಕೆರೆ ಬಳಕೆದಾರರ ಸಂಘ ಹಾಗೂ ಕೆರೆ ಸಂರಕ್ಷಣೆ ಪ್ರಾಧಿಕಾರಗಳ ಸಹಭಾಗಿತ್ವದಲ್ಲಿ ಕೆರೆ ಸಂಜೀವಿನಿ ಯೋಜನೆಯಡಿ ₹60 ಲಕ್ಷ ವೆಚ್ಚದಲ್ಲಿ ಕೆರೆಯನ್ನು ಪುನಶ್ಚೇತನಗೊಳಿಸಲಾಗಿತ್ತು.</p>.<p>38 ಎಕರೆ ವಿಸ್ತೀರ್ಣದಕೆರೆಯ ಅಭಿವೃದ್ಧಿಗೆ ಕೆರೆಗೆ ಪ್ರಾಧಿಕಾರವು ₹20 ಲಕ್ಷ ಅನುದಾನ ಹಾಗೂ ದಾನಿಗಳು ₹29 ಲಕ್ಷ ನೀಡಿದ್ದರು.</p>.<p>‘ನೀರನ್ನು ಗಂಗೆ ಮಾತೆ ಎನ್ನುವ ಸಂಸ್ಕೃತಿ ನಮ್ಮದು. ನಾಡಪ್ರಭು ಕೆಂಪೇಗೌಡ ಅವರು 500 ಕೆರೆಗಳನ್ನು ನಿರ್ಮಾಣ ಮಾಡಿದ್ದರು. ಸಾಲುಮರಗಳನ್ನು ಬೆಳೆಸಿದ್ದರು. ನಮ್ಮ ಊರಿನ ಕೆರೆಗಳನ್ನು ನಾವು ಉಳಿಸಿಕೊಂಡು ಹೋಗಬೇಕು’ ಎಂದುಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.</p>.<p>‘ಎಲ್ಲ ರೀತಿಯ ಅನ್ಷೇಷಣೆಗಳನ್ನು ಮಾಡಿರುವ ವಿಜ್ಞಾನಿಗಳು ನೀರನ್ನು ಕಂಡುಹಿಡಿಯಲು ಸಾಧ್ಯವಿಲ್ಲ. ಪ್ರಕೃತಿ ನೀಡಿರುವ ಜಲಮೂಲಗಳನ್ನು ಉಳಿಸಬೇಕು. ಕೆರೆ ಒತ್ತುವರಿ ನಿಲ್ಲಿಸಬೇಕು. ಕೆರೆ ಸಂರಕ್ಷಣ ಪ್ರಾಧಿಕಾರದ ಅನುದಾನ ಬಳಸಿಕೊಂಡು, ದಾಸನಪುರ ಕ್ಷೇತ್ರದ ಎಲ್ಲ ಕೆರೆಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದರು.</p>.<p>ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್.ಎಚ್. ಮಂಜುನಾಥ್,‘ ಇದು ಸಂಸ್ಥೆಯಿಂದ ಅಭಿವೃದ್ಧಿಪಡಿಸಿರುವ 251ನೇ ಕೆರೆ. ಸಂಸ್ಥೆಯು ₹35 ಕೋಟಿ ವೆಚ್ಚದಲ್ಲಿ ರಾಜ್ಯದ ಹಲವು ಕೆರೆಗಳನ್ನು ಅಭಿವೃದ್ದಿಪಡಿಸಿದೆ. ಶುದ್ಧಗಂಗಾ ಯೋಜನೆಯಲ್ಲಿ ಕ್ಷೇತ್ರವು ಹತ್ತು ಪೈಸೆಗೆ ಒಂದು ಲೀಟರ್ ನೀರು ಕೊಟ್ಟಿದೆ. 300 ಘಟಕಗಳ ಮೂಲಕ70 ಸಾವಿರ ಕುಟುಂಬಗಳು ಇದರ ಅನುಕೂಲ ಪಡೆಯುತ್ತಿವೆ’ ಎಂದರು.</p>.<p>ಕಳಸ ನೀಡುವ ಮೂಲಕ ಗೋಪಾಲಪುರ ಗ್ರಾಮ ಪಂಚಾಯಿತಿಗೆಕೆರೆಯ ನಿರ್ವಹಣೆಯನ್ನು ಹಸ್ತಾಂತರಿಸಲಾಯಿತು. ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ರವಿಕುಮಾರ್ ನಿರ್ಗತಿಕರಿಗೆ ಮಾಸಾಶನ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>