ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದಾರ್ಥ, ‘ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆದಿವಾಸಿಗಳ ಹಾಗೂ ದಲಿತ ಹಕ್ಕುಗಳ ಹೋರಾಟಗಾರರು, ಬುದ್ಧಿಜೀವಿಗಳು, ವಕೀಲರರನ್ನು ಬಂಧಿಸುವ ಮೂಲಕ ದಬ್ಬಾಳಿಕೆ ನಡೆಸುತ್ತಿದೆ. ಮೋದಿ ಬಳಿ ಜಾರಿ ನಿರ್ದೇಶನಾಲಯ, ಸಿಬಿಐನಂಥ ಸಂಸ್ಥೆಗಳಿರಬಹುದು. ಅಧಿಕಾರ ಇರಬಹುದು. ಆದರೆ ನಮ್ಮ ಬಳಿ ಲೇಖನಿ ಇದೆ. ಅದನ್ನೇ ಬಳಸಿ ನಾವು ಈ ದಬ್ಬಾಳಿಕೆ ವಿರುದ್ಧದ ಸಮರವನ್ನು ಗೆಲ್ಲುತ್ತೇವೆ’ ಎಂದರು.