<p><strong>ಬೆಂಗಳೂರು:</strong> ನಗರದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಎಂಬಿಎ ವಿದ್ಯಾರ್ಥಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ.</p>.<p>ಚಿಕ್ಕಜಾಲ ಸಮೀಪದ ಗೋಪಾಲಪುರದಲ್ಲಿ ಬುಧವಾರ ರಾತ್ರಿ ಬೈಕ್ಗೆ ವಾಹನವೊಂದು ಗುದ್ದಿದ್ದರಿಂದ ಸವಾರ ಆಕಾಶ್ (24) ಎಂಬುವರು ಮೃತಪಟ್ಟಿದ್ದಾರೆ.</p>.<p>ಹುಬ್ಬಳ್ಳಿಯ ಆಕಾಶ್, ಬೈಲಹಳ್ಳಿಯ ಖಾಸಗಿ ಕಾಲೇಜೊಂದರಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನ ವಿದ್ಯಾರ್ಥಿನಿಲಯದಲ್ಲಿ ಉಳಿದುಕೊಂಡಿದ್ದರು. ರಾತ್ರಿ 9.20 ಗಂಟೆ ಸುಮಾರಿಗೆ ಬೈಕ್ನಲ್ಲಿ ಹೊರಟಿದ್ದಾಗ ಈ ದುರ್ಘಟನೆ ಸಂಭವಿಸಿದೆ.</p>.<p>‘ಅಪಘಾತದಿಂದ ಗಾಯಗೊಂಡಿದ್ದ ಆಕಾಶ್, ರಸ್ತೆಯಲ್ಲಿ ನರಳುತ್ತ ಬಿದ್ದಿದ್ದರು. ಸ್ಥಳೀಯರೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದರು’ ಎಂದು ಚಿಕ್ಕಜಾಲ ಸಂಚಾರ ಪೊಲೀಸರು ತಿಳಿಸಿದರು.</p>.<p>‘ಅಪಘಾತದ ಬಳಿಕ ವಾಹನ ನಿಲ್ಲಿಸದೆ, ಅದರ ಚಾಲಕ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ’ ಎಂದರು.</p>.<p><strong>ಆಟೊ ಚಾಲಕ ಸಾವು:</strong> ಓಕಳಿಪುರದ ಆರ್.ಆರ್. ಕಲ್ಯಾಣ ಮಂಟಪ ಬಳಿ ರಸ್ತೆ ವಿಭಜಕಕ್ಕೆ ಆಟೊ ಗುದ್ದಿದ್ದರಿಂದ, ಅದರ ಚಾಲಕ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ನೆಲಮಂಗಲದ ನಿವಾಸಿ ಮಂಜುನಾಥ್, ನಿತ್ಯವೂ ಮೆಜೆಸ್ಟಿಕ್ನಿಂದ ನೆಲಮಂಗಲಕ್ಕೆ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ಗುರುವಾರ ಬೆಳಿಗ್ಗೆ ಪತ್ರಿಕೆ ತೆಗೆದುಕೊಂಡು ಹೋಗುತ್ತಿರುವಾಗಲೇ ಈ ಘಟನೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಎಂಬಿಎ ವಿದ್ಯಾರ್ಥಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ.</p>.<p>ಚಿಕ್ಕಜಾಲ ಸಮೀಪದ ಗೋಪಾಲಪುರದಲ್ಲಿ ಬುಧವಾರ ರಾತ್ರಿ ಬೈಕ್ಗೆ ವಾಹನವೊಂದು ಗುದ್ದಿದ್ದರಿಂದ ಸವಾರ ಆಕಾಶ್ (24) ಎಂಬುವರು ಮೃತಪಟ್ಟಿದ್ದಾರೆ.</p>.<p>ಹುಬ್ಬಳ್ಳಿಯ ಆಕಾಶ್, ಬೈಲಹಳ್ಳಿಯ ಖಾಸಗಿ ಕಾಲೇಜೊಂದರಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನ ವಿದ್ಯಾರ್ಥಿನಿಲಯದಲ್ಲಿ ಉಳಿದುಕೊಂಡಿದ್ದರು. ರಾತ್ರಿ 9.20 ಗಂಟೆ ಸುಮಾರಿಗೆ ಬೈಕ್ನಲ್ಲಿ ಹೊರಟಿದ್ದಾಗ ಈ ದುರ್ಘಟನೆ ಸಂಭವಿಸಿದೆ.</p>.<p>‘ಅಪಘಾತದಿಂದ ಗಾಯಗೊಂಡಿದ್ದ ಆಕಾಶ್, ರಸ್ತೆಯಲ್ಲಿ ನರಳುತ್ತ ಬಿದ್ದಿದ್ದರು. ಸ್ಥಳೀಯರೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದರು’ ಎಂದು ಚಿಕ್ಕಜಾಲ ಸಂಚಾರ ಪೊಲೀಸರು ತಿಳಿಸಿದರು.</p>.<p>‘ಅಪಘಾತದ ಬಳಿಕ ವಾಹನ ನಿಲ್ಲಿಸದೆ, ಅದರ ಚಾಲಕ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ’ ಎಂದರು.</p>.<p><strong>ಆಟೊ ಚಾಲಕ ಸಾವು:</strong> ಓಕಳಿಪುರದ ಆರ್.ಆರ್. ಕಲ್ಯಾಣ ಮಂಟಪ ಬಳಿ ರಸ್ತೆ ವಿಭಜಕಕ್ಕೆ ಆಟೊ ಗುದ್ದಿದ್ದರಿಂದ, ಅದರ ಚಾಲಕ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ನೆಲಮಂಗಲದ ನಿವಾಸಿ ಮಂಜುನಾಥ್, ನಿತ್ಯವೂ ಮೆಜೆಸ್ಟಿಕ್ನಿಂದ ನೆಲಮಂಗಲಕ್ಕೆ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ಗುರುವಾರ ಬೆಳಿಗ್ಗೆ ಪತ್ರಿಕೆ ತೆಗೆದುಕೊಂಡು ಹೋಗುತ್ತಿರುವಾಗಲೇ ಈ ಘಟನೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>