<p><strong>ಬೆಂಗಳೂರು: </strong>‘ಸತ್ಯ ಹೇಳುವುದೇ ಮಾಧ್ಯಮಗಳ ಮುಖ್ಯವಾದ ಉದ್ದೇಶ. ಸತ್ಯ ಹೇಳಲು ಹೊರಟವರಿಗೆ ದೇಶದ್ರೋಹದ ಪಟ್ಟ ಕಟ್ಟಲಾಗುತ್ತಿದೆ’ ಎಂದು ಏಷ್ಯನ್ ಕಾಲೇಜ್ ಆಫ್ ಜರ್ನಲಿಸಂ ಅಧ್ಯಕ್ಷ ಶಶಿಕುಮಾರ್ ಕಳವಳ ವ್ಯಕ್ತಪಡಿಸಿದರು.</p>.<p>ಗೌರಿ ಮೆಮೋರಿಯಲ್ ಟ್ರಸ್ಟ್ ಭಾನುವಾರ ಆಯೋಜಿಸಿದ್ದ ಗೌರಿ ಲಂಕೇಶ್ ಅವರ 61ನೇ ಜನ್ಮ ವಾರ್ಷಿಕೋತ್ಸವದಲ್ಲಿ ‘ಮೌನವಾದ ಧ್ವನಿಗಳು: ಹೊಸ ಭಾರತದಲ್ಲಿ ಪತ್ರಿಕೋದ್ಯಮಕ್ಕೆ ಇರುವ ಬೆದರಿಕೆಗಳು’ ಕುರಿತು ಉಪನ್ಯಾಸ ನೀಡಿದರು.</p>.<p>’ಸಂವಿಧಾನ ಮೂಲ ಸ್ವರೂಪಕ್ಕೆ ಧಕ್ಕೆ ಉಂಟು ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಮುಖ್ಯವಾಹಿನಿ ಮಾಧ್ಯಮಗಳು ತಮ್ಮ ಪಾತ್ರವನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ. ಸ್ವಾತಂತ್ರವಾಗಿ ಕಾರ್ಯ ನಿರ್ವಹಿಸಲು ಬೇಕಾದ ವಾತಾವರಣ ಇಲ್ಲದಿರುವುದು ಇದಕ್ಕೆ ಕಾರಣ’ ಎಂದರು.</p>.<p>‘ಆಡಳಿತವನ್ನು ಎದುರಿಸುವ ಶಕ್ತಿ ಮಾಧ್ಯಮಗಳಿಗೆ ಇಲ್ಲವಾಗಿದೆ. ಸುಳ್ಳು ಎಂಬುದು ಗೊತ್ತಿದ್ದರೂ ಅದನ್ನು ಹೇಳುವ ಸಾಮರ್ಥ್ಯವನ್ನು ಮಾಧ್ಯಮಗಳು ಕಳೆದುಕೊಂಡಿವೆ. ಸತ್ಯವನ್ನು ಮುಚ್ಚಿ ಸುಳ್ಳನ್ನೇ ವಿಜೃಂಭಿಸಲಾಗುತ್ತಿದೆ. ಸತ್ಯ ಹುಡುಕ ಹೊರಟವರು ಹಲವು ಸವಾಲುಗಳನ್ನು ಎದುರಿಸಬೇಕಾದ ಸ್ಥಿತಿಯೂ ಇದೆ. ಇದು ಅಪಾಯಕಾರಿ ಬೆಳವಣಿಗೆ’ ಎಂದು ಹೇಳಿದರು.</p>.<p>‘ಮಾಧ್ಯಮಗಳು ತಮ್ಮ ಪಾತ್ರವನ್ನು ಮರು ಅವಲೋಕನ ಮಾಡಿಕೊಳ್ಳಬೇಕಿದೆ. ನಮ್ಮನ್ನು ನಾವು ಪ್ರಶ್ನೆ ಮಾಡಿಕೊಂಡು ಪ್ರಜಾಪ್ರಭುತ್ವ ಉಳಿಸಬೇಕಿದೆ’ ಎಂದರು.</p>.<p>ಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೀತಲ್ವಾಡ್, ‘ದ್ವೇಷದ ಮಾತುಗಳು ಮನೆ ಮನೆ ತಲುಪುತ್ತಿದ್ದು, ಶಾಂತಿ–ಸಹಬಾಳ್ವೆ ಸಾರುವ ಮಾತುಗಳು ಜನರನ್ನು ತಲುಪುತ್ತಿಲ್ಲ. ಸಾಮಾಜಿಕ ಮಾಧ್ಯಮಗಳ ಮೂಲಕ ತಲುಪಿಸುವ ಪ್ರಯತ್ನ ನಡೆಯುತ್ತಿದೆ. ಅದು ಸಾಮಾನ್ಯ ಜನರಿಗೆ ತಲುಪುತ್ತಿಲ್ಲ’ ಎಂದರು.</p>.<p>‘ಸಾಮಾಜಿಕ ಮಾಧ್ಯಮದ ಜತೆಗೆ ಜನರ ಬಳಿಗೆ ತೆರಳಿ ಅವರಿಗೆ ಸತ್ಯ ಮತ್ತು ಶಾಂತಿ–ಸಹಬಾಳ್ವೆ ಬಗ್ಗೆ ಮನವರಿಕೆ ಮಾಡಿಕೊಡುವ ಅಗತ್ಯವಿದೆ. ಚುನಾವಣೆಗಳು ಎದುರಾಗುತ್ತಿರುವ ಸಂದರ್ಭದಲ್ಲಿ ಈ ಕಾರ್ಯವನ್ನು ಸಾಮಾಜಿಕ ಚಳವಳಿಗಳು ಹೆಚ್ಚು ಹೆಚ್ಚಾಗಿ ಮಾಡಬೇಕಿದೆ. ಹಳ್ಳಿ–ಹಳ್ಳಿಗಳಲ್ಲಿ ಜಾಗೃತಿ ಹೆಚ್ಚಾಗಬೇಕಿದೆ’ ಎಂದು ಹೇಳಿದರು.</p>.<p>ಕವಿತಾ ಲಂಕೇಶ್ ಅವರು ನಿರ್ಮಿಸಿರುವ ಗೌರಿ ಕಿರು ಚಿತ್ರವನ್ನು ಬಿಡುಗಡೆ ಮಾಡಿ ಪ್ರದರ್ಶಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಸತ್ಯ ಹೇಳುವುದೇ ಮಾಧ್ಯಮಗಳ ಮುಖ್ಯವಾದ ಉದ್ದೇಶ. ಸತ್ಯ ಹೇಳಲು ಹೊರಟವರಿಗೆ ದೇಶದ್ರೋಹದ ಪಟ್ಟ ಕಟ್ಟಲಾಗುತ್ತಿದೆ’ ಎಂದು ಏಷ್ಯನ್ ಕಾಲೇಜ್ ಆಫ್ ಜರ್ನಲಿಸಂ ಅಧ್ಯಕ್ಷ ಶಶಿಕುಮಾರ್ ಕಳವಳ ವ್ಯಕ್ತಪಡಿಸಿದರು.</p>.<p>ಗೌರಿ ಮೆಮೋರಿಯಲ್ ಟ್ರಸ್ಟ್ ಭಾನುವಾರ ಆಯೋಜಿಸಿದ್ದ ಗೌರಿ ಲಂಕೇಶ್ ಅವರ 61ನೇ ಜನ್ಮ ವಾರ್ಷಿಕೋತ್ಸವದಲ್ಲಿ ‘ಮೌನವಾದ ಧ್ವನಿಗಳು: ಹೊಸ ಭಾರತದಲ್ಲಿ ಪತ್ರಿಕೋದ್ಯಮಕ್ಕೆ ಇರುವ ಬೆದರಿಕೆಗಳು’ ಕುರಿತು ಉಪನ್ಯಾಸ ನೀಡಿದರು.</p>.<p>’ಸಂವಿಧಾನ ಮೂಲ ಸ್ವರೂಪಕ್ಕೆ ಧಕ್ಕೆ ಉಂಟು ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಮುಖ್ಯವಾಹಿನಿ ಮಾಧ್ಯಮಗಳು ತಮ್ಮ ಪಾತ್ರವನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ. ಸ್ವಾತಂತ್ರವಾಗಿ ಕಾರ್ಯ ನಿರ್ವಹಿಸಲು ಬೇಕಾದ ವಾತಾವರಣ ಇಲ್ಲದಿರುವುದು ಇದಕ್ಕೆ ಕಾರಣ’ ಎಂದರು.</p>.<p>‘ಆಡಳಿತವನ್ನು ಎದುರಿಸುವ ಶಕ್ತಿ ಮಾಧ್ಯಮಗಳಿಗೆ ಇಲ್ಲವಾಗಿದೆ. ಸುಳ್ಳು ಎಂಬುದು ಗೊತ್ತಿದ್ದರೂ ಅದನ್ನು ಹೇಳುವ ಸಾಮರ್ಥ್ಯವನ್ನು ಮಾಧ್ಯಮಗಳು ಕಳೆದುಕೊಂಡಿವೆ. ಸತ್ಯವನ್ನು ಮುಚ್ಚಿ ಸುಳ್ಳನ್ನೇ ವಿಜೃಂಭಿಸಲಾಗುತ್ತಿದೆ. ಸತ್ಯ ಹುಡುಕ ಹೊರಟವರು ಹಲವು ಸವಾಲುಗಳನ್ನು ಎದುರಿಸಬೇಕಾದ ಸ್ಥಿತಿಯೂ ಇದೆ. ಇದು ಅಪಾಯಕಾರಿ ಬೆಳವಣಿಗೆ’ ಎಂದು ಹೇಳಿದರು.</p>.<p>‘ಮಾಧ್ಯಮಗಳು ತಮ್ಮ ಪಾತ್ರವನ್ನು ಮರು ಅವಲೋಕನ ಮಾಡಿಕೊಳ್ಳಬೇಕಿದೆ. ನಮ್ಮನ್ನು ನಾವು ಪ್ರಶ್ನೆ ಮಾಡಿಕೊಂಡು ಪ್ರಜಾಪ್ರಭುತ್ವ ಉಳಿಸಬೇಕಿದೆ’ ಎಂದರು.</p>.<p>ಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೀತಲ್ವಾಡ್, ‘ದ್ವೇಷದ ಮಾತುಗಳು ಮನೆ ಮನೆ ತಲುಪುತ್ತಿದ್ದು, ಶಾಂತಿ–ಸಹಬಾಳ್ವೆ ಸಾರುವ ಮಾತುಗಳು ಜನರನ್ನು ತಲುಪುತ್ತಿಲ್ಲ. ಸಾಮಾಜಿಕ ಮಾಧ್ಯಮಗಳ ಮೂಲಕ ತಲುಪಿಸುವ ಪ್ರಯತ್ನ ನಡೆಯುತ್ತಿದೆ. ಅದು ಸಾಮಾನ್ಯ ಜನರಿಗೆ ತಲುಪುತ್ತಿಲ್ಲ’ ಎಂದರು.</p>.<p>‘ಸಾಮಾಜಿಕ ಮಾಧ್ಯಮದ ಜತೆಗೆ ಜನರ ಬಳಿಗೆ ತೆರಳಿ ಅವರಿಗೆ ಸತ್ಯ ಮತ್ತು ಶಾಂತಿ–ಸಹಬಾಳ್ವೆ ಬಗ್ಗೆ ಮನವರಿಕೆ ಮಾಡಿಕೊಡುವ ಅಗತ್ಯವಿದೆ. ಚುನಾವಣೆಗಳು ಎದುರಾಗುತ್ತಿರುವ ಸಂದರ್ಭದಲ್ಲಿ ಈ ಕಾರ್ಯವನ್ನು ಸಾಮಾಜಿಕ ಚಳವಳಿಗಳು ಹೆಚ್ಚು ಹೆಚ್ಚಾಗಿ ಮಾಡಬೇಕಿದೆ. ಹಳ್ಳಿ–ಹಳ್ಳಿಗಳಲ್ಲಿ ಜಾಗೃತಿ ಹೆಚ್ಚಾಗಬೇಕಿದೆ’ ಎಂದು ಹೇಳಿದರು.</p>.<p>ಕವಿತಾ ಲಂಕೇಶ್ ಅವರು ನಿರ್ಮಿಸಿರುವ ಗೌರಿ ಕಿರು ಚಿತ್ರವನ್ನು ಬಿಡುಗಡೆ ಮಾಡಿ ಪ್ರದರ್ಶಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>