‘ರಾಜ್ಯದ430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ14,447 ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರ ತಮ್ಮನ್ನು ಕಾಯಂಗೊಳಿಸಲಿದೆ ಎಂದು ಅನೇಕರು ಕನಸು ಕಂಡಿದ್ದರು. ಅವರಿಗೆಲ್ಲಾ ನಿರಾಸೆಯಾಗಿದೆ. ಕೋವಿಡ್ ಸಮಯದಲ್ಲಿ ಅತಿಥಿ ಉಪನ್ಯಾಸಕರಿಗೆ ಕೆಲಸವೇ ಇಲ್ಲದಾಗಿದೆ. ಹೀಗಾಗಿ ಜೀವನ ನಿರ್ವಹಣೆಗಾಗಿ ಹಲವರು ತರಕಾರಿ ಮಾರುತ್ತಿದ್ದಾರೆ. ಗಾರೆ ಕೆಲಸ, ಹೋಟೆಲ್ ಹಾಗೂ ಬಾರ್ಗಳಲ್ಲಿ ಮಾಣಿಗಳಾಗಿಯೂ ಕೆಲಸ ಮಾಡುತ್ತಿದ್ದಾರೆ. ಕೋವಿಡ್, ಹೃದಯಾಘಾತ ಹಾಗೂ ಮೂತ್ರಪಿಂಡದ ವೈಫಲ್ಯದಿಂದ 50ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಅಕಾಲಿಕ ಮರಣ ಹೊಂದಿದವರ ಕುಟುಂಬಕ್ಕೆ ಸರ್ಕಾರ ಯಾವುದೇ ಪರಿಹಾರ ಒದಗಿಸಿಲ್ಲ. ಸಾಂತ್ವನ ಹೇಳುವ ಗೋಜಿಗೂ ಹೋಗಿಲ್ಲ. ಉಪನ್ಯಾಸಕರನ್ನು ಕಾಯಂಗೊಳಿಸುವಂತೆ ಅನೇಕ ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ನಮ್ಮ ಬೇಡಿಕೆ ಈಡೇರಿಸಬೇಕು’ ಎಂದರು.