‘ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ), ಕಾಶ್ಮೀರದ ವಿಚಾರವಾಗಿ 370ನೇ ವಿಧಿ ರದ್ದತಿ ಸೇರಿದಂತೆ ವಿವಿಧ ವಿಷಯಗಳಲ್ಲಿ ಕೇಂದ್ರದಲ್ಲಿರುವ ಎನ್ಡಿಎ ಸರ್ಕಾರ ಸಂವಿಧಾನದ ಚೌಕಟ್ಟಿನಲ್ಲಿಯೇ ಕಾರ್ಯನಿರ್ವಹಿಸಿದೆ. ಎನ್ಡಿಎ ಸರ್ಕಾರಸುಪ್ರೀಂ ಕೋರ್ಟ್ ಹಾಗೂ ಮಾಧ್ಯಮಗಳನ್ನು ಪೂರ್ಣ ಪ್ರಮಾಣದಲ್ಲಿ ಹಿಡಿತಕ್ಕೆ ಪಡೆದುಕೊಂಡಿದೆ ಎನ್ನುವುದೂ ಸತ್ಯಕ್ಕೆ ದೂರವಾದುದು. ಆದರೆ, ಆಕ್ರಮಣಕಾರಿ ನೀತಿಯನ್ನು ಅನುಸರಿಸುತ್ತಿರುವುದು ನಿಜ’ ಎಂದು ಹೇಳಿದರು.