ಕೇವಲ ಮೂರು ಜನ ವಿದ್ಯಾರ್ಥಿಗಳಿಗೆ ಒಬ್ಬರು ಶಿಕ್ಷಕರು, ಒಬ್ಬರು ಅಡುಗೆ ಸಿಬ್ಬಂದಿಯನ್ನು ಸರ್ಕಾರ ನೇಮಿಸಿದೆ. ವಿದ್ಯಾರ್ಥಿಗಳಿಗೆ ಆಟವಿಲ್ಲ. ಬರೀ ಪಾಠ. ಮೂರು ಜನ ವಿದ್ಯಾರ್ಥಿಗಳನ್ನು ಒಂದೇ ಕೊಠಡಿಯಲ್ಲಿ ಕೂರಿಸಿ ಪಾಠ ಮಾಡಲಾಗುತ್ತಿದೆ. ಎರಡನೇಯ ತರಗತಿಗೆ ಪಾಠ ಮಾಡುವಾಗ ನಾಲ್ಕನೇ ತರಗತಿ ವಿದ್ಯಾರ್ಥಿ ಸುಮ್ಮನೆ ಕೂರಬೇಕು. ಈ ವ್ಯವಸ್ಥೆಯಿಂದ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಪೂರೈಸಲು ಅಗುತ್ತಿಲ್ಲ ಎನ್ನುವುದು ಪೋಷಕರ ಅಳಲು.