ಯಲಹಂಕ: ರಾಜ್ಯ ಸರ್ಕಾರದ ಅನುಮತಿ ದೊರೆತರೆ ₹1.20 ಕೋಟಿ ವೆಚ್ಚದಲ್ಲಿ ಬ್ಯಾಟರಾಯನಪುರ ಸರ್ಕಾರಿ ಶಾಲೆಯ ನೂತನ ಕಟ್ಟಡ ನಿರ್ಮಿಸಿಕೊಡಲಾಗುವುದು ಎಂದು ಉದ್ಯಮಿಪಿ. ದಯಾನಂದ ಪೈ ಹೇಳಿದರು.
ಬ್ಯಾಟರಾಯನಪುರದ ಸ.ಹಿ.ಪ್ರಾ. ಶಾಲೆಯಲ್ಲಿ ಆಯೋಜಿಸಿದ್ದ ‘ವಿದ್ಯಾಶಿಲ್ಪ ಕಮ್ಯುನಿಟಿ ಟ್ರಸ್ಟ್ನಿಂದ 21 ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದದರು.
‘ಹಲವು ವರ್ಷಗಳ ಹಿಂದೆಯೇ ನೂತನ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಆದರೆ ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಯೋಜನೆ ನನೆಗುದಿಗೆ ಬಿದ್ದಿತ್ತು. ಈಗಲೂ ಅನುಮತಿ ನೀಡಿದರೆ ಕಟ್ಟಡ ನಿರ್ಮಿಸಿ, ಮೂಲಸೌಕರ್ಯ ಒದಗಿಸಲಾಗುವುದು’ ಎಂದರು.
ಟ್ರಸ್ಟ್ ಸಂಸ್ಥಾಪಕ ಕಿರಣ್ ಪೈ, ‘ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಮೂಲ ಸೌಕರ್ಯ ಒದಗಿಸಬೇಕೆಂಬ ಉದ್ದೇಶದಿಂದ ಟ್ರಸ್ಟ್ ದತ್ತು ಪಡೆದಿದ್ದು, ಅವುಗಳ ಅಭಿವೃದ್ಧಿಗೆ ಶ್ರಮಿಸಲಿದೆ’ ಎಂದರು.