ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ಮಾಧ್ಯಮ ಸಂಚಾಲಕ ಜಗದೀಶ್ ವಿ,' ಮಾಜಿ ಮೇಯರ್ ಆಗಿರುವ ಸಂಪತ್ರಾಜ್ ಅವರೇ ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಪ್ರಕರಣದ ರೂವಾರಿ ಎಂದು ಸಿಸಿಬಿ ಚಾರ್ಜ್ಶೀಟ್ ಸಲ್ಲಿಸಿದರೂ, ಅವರನ್ನು ಬಂಧಿಸದಂತೆ ಒತ್ತಡ ಹೇರಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ ಈ ಘಟನೆಯ ಹೊಣೆ ಹೊರಬೇಕು. ರಾಜಕೀಯ ಒತ್ತಡದಿಂದ ಸಮಾಜ ಘಾತುಕ ವ್ಯಕ್ತಿಯನ್ನು ರಕ್ಷಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಸ್ಪಷ್ಟನೆ ನೀಡಬೇಕು' ಎಂದು ಆಗ್ರಹಿಸಿದರು.
'ಪ್ರಕರಣದಲ್ಲಿ ಈಗಾಗಲೇ ಹಲವರನ್ನು ಬಂಧಿಸಲಾಗಿದ್ದು, ಕೋಮು ದ್ವೇಷದಿಂದ ಜನರನ್ನು ಎತ್ತಿಕಟ್ಟಿದ ವ್ಯಕ್ತಿಯನ್ನು ಬಂಧಿಸದಿರಲು ಡಿ.ಕೆ.ಶಿವಕುಮಾರ್ ಹಾಗೂ ಯಡಿಯೂರಪ್ಪ ನಡುವಿನ ಸ್ನೇಹವೇ ಕಾರಣ' ಎಂದರು.