‘ರಾಜೀನಾಮೆಯನ್ನು ಸ್ವೀಕರಿಸಲು ಸಭಾಧ್ಯಕ್ಷರು ವಿಳಂಬ ಧೋರಣೆ ಅನುಸರಿಸುವ ಮೂಲಕ ಅಲ್ಪಮತಕ್ಕೆ ಕುಸಿದ ಸರ್ಕಾರವನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ ಎಂಬ ಸಂಶಯ ಮೂಡಿದೆ. ವಿಶ್ವಾಸಮತ ಯಾಚನೆಯ ನಿರ್ಣಯದ ದಿನ ಅದನ್ನು ಮತಕ್ಕೆ ಹಾಕದೇ ಅನಗತ್ಯವಾಗಿ ಮುಂದೂಡಲಾಗುತ್ತಿದೆ. ಎರಡು ಬಾರಿ ಗಡುವು ವಿಧಿಸಿದ ಬಳಿಕವೂ ಮುಖ್ಯಮಂತ್ರಿ ಅದನ್ನು ಉಲ್ಲಂಘಿಸಿ, ಸಾಂವಿಧಾನಿಕವಾದ ತನ್ನ ಪರಮಾಧಿಕಾರವನ್ನು ಕಡೆಗಣಿಸಿದ್ದಾರೆ. ಸಾಂವಿಧಾನಿಕ ಬಿಕ್ಕಟ್ಟಿನತ್ತ ಕರ್ನಾಟಕ ಸಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮವನ್ನು ಕೈಗೊಳ್ಳುವ ಕಾಲ ಇದಾಗಿದೆ’ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ.