ಸೋಮವಾರ, ಮಾರ್ಚ್ 27, 2023
32 °C

ಸ್ವಾತಂತ್ರ್ಯ ಹೋರಾಟಗಾರರ ಮನೆಯಲ್ಲೇ ಸನ್ಮಾನಿಸಲಿರುವ ರಾಜ್ಯಪಾಲ ಗೆಹಲೋತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ ಚಂದ್ ಗೆಹಲೋತ್ ಅವರು ನಗರದ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ಭೇಟಿ ನೀಡಿ ಅವರನ್ನು
ಸನ್ಮಾನಿಸಲಿದ್ದಾರೆ.

ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಸಂಸ್ಮರಣಾ ದಿನವಾದ ಆಗಸ್ಟ್‌ 9 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಮಲ್ಲೇಶ್ವರ ಬಡಾವಣೆಯಲ್ಲಿರುವ ವಿ.ನಾಗಭೂಷಣ ರಾವ್‌ ಅವರ ಮನೆಗೆ ತೆರಳಿ ಗೌರವಿಸಲಿದ್ದು, ಅದೇ ದಿನ ಬೆಳಿಗ್ಗೆ 11 ಗಂಟೆಗೆ ಹಲಸೂರು ಬಡಾವಣೆಯಲ್ಲಿರುವ ಆರ್‌.ನಾರಾಯಣಪ್ಪ ಅವರ ಮನೆಗೆ ತೆರಳಿ
ಸನ್ಮಾನಿಸಲಿದ್ದಾರೆ.

ಸ್ವಾತಂತ್ರ್ಯಕ್ಕೆ ಶ್ರಮಿಸಿದ ಇನ್ನುಳಿದ ಸ್ವಾತಂತ್ರ್ಯ ಹೋರಾಟಗಾರರನ್ನು ಅವರ ಮನೆಗಳಿಗೇ ತೆರಳಿ ಜಿಲ್ಲಾಡಳಿತದ ಮೂಲಕ ಅವರ ಮನೆಗಳಲ್ಲೇ ಸನ್ಮಾನಿಸಲು ಕ್ರಮ ವಹಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ರಾಜ್ಯಪಾಲರು ಸೂಚಿಸಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್‌.ಪ್ರಭುಶಂಕರ್‌ ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು