<p><strong>ಬೆಂಗಳೂರು:</strong> ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ವಿಧಾನಮಂಡಲ ಅಧಿವೇಶನದಲ್ಲಿ ಓದದೇ ನಿರ್ಗಮಿಸುವ ಮೂಲಕ ಸಂವಿಧಾನವನ್ನು ಉಲ್ಲಂಘಿಸಿದ್ದಾರೆ. ಜನಪ್ರತಿನಿಧಿಗಳ ಸಭೆಗೆ ಅವಮಾನ ಮಾಡಿದ್ದಾರೆ ಎಂದು ‘ಜಾಗೃತ ನಾಗರಿಕರು’ ಆರೋಪಿಸಿದ್ದಾರೆ.</p>.<p>‘ಜಾಗೃತ ನಾಗರಿಕರು’ ಪರವಾಗಿ ಜಿ. ರಾಮಕೃಷ್ಣ, ಕೆ. ಮರುಳಸಿದ್ದಪ್ಪ, ಎಸ್.ಜಿ. ಸಿದ್ದರಾಮಯ್ಯ, ವಿಜಯಾ, ಟಿ.ಸುರೇಂದ್ರ ರಾವ್, ಬಿ. ಶ್ರೀಪಾದ ಭಟ್, ಕೆ.ಎಸ್. ವಿಮಲಾ, ಮಾವಳ್ಳಿ ಶಂಕರ್, ಜಾಣಗೆರೆ ವೆಂಕಟರಾಮಯ್ಯ, ಬಂಜಗೆರೆ ಜಯಪ್ರಕಾಶ್, ರುದ್ರಪ್ಪ ಹನಗವಾಡಿ, ಎನ್. ಗಾಯತ್ರಿ, ವಸುಂಧರಾ ಭೂಪತಿ ಈ ಕುರಿತು ಹೇಳಿಕೆ ನೀಡಿದ್ದಾರೆ.</p>.<p>ಈ ಅಸಹಕಾರ ನಡೆಯ ಮೂಲಕ ಹುದ್ದೆಯ ಘನತೆಗೆ ರಾಜ್ಯಪಾಲರು ಕುಂದು ತಂದಿದ್ದಾರೆ. ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ನಿಯಮದಂತೆ ರಾಜ್ಯಪಾಲರ ಭಾಷಣದ ನಂತರ ನಡೆಯುವ ರಾಷ್ಟ್ರಗೀತೆಗೂ ಕಾಯದೇ ರಾಜ್ಯಪಾಲರು ಹೊರ ನಡೆದು ರಾಷ್ಟ್ರಗೀತೆಗೆ ಅಗೌರವ ಎಸಗಿದ್ದಾರೆ ಎಂದು ದೂರಿದ್ದಾರೆ.</p>.<p>ದೇಶಪ್ರೇಮದ ಬಗ್ಗೆ ಉಪದೇಶ ಮಾಡುವ ಬಿಜೆಪಿ ಶಾಸಕರು, ರಾಜ್ಯಪಾಲರ ಅಸಾಂವಿಧಾನಿಕ ನಡೆಗಳನ್ನು ಸಮರ್ಥನೆ ಮಾಡುತ್ತಿರುವುದು ರಾಜ್ಯಪಾಲರ ನಡೆಯ ಹಿಂದಿನ ದುರುದ್ದೇಶವನ್ನು ಸಮರ್ಥನೆ ಮಾಡುತ್ತದೆ ಎಂದು ಹೇಳಿದ್ದಾರೆ.</p>.<p>ಇದೇ ರೀತಿಯ ಘಟನೆಗಳು ಕೇರಳ ಮತ್ತು ತಮಿಳುನಾಡಿನಲ್ಲಿ ನಡೆದ ಬಗ್ಗೆ ವರದಿಯಾಗಿದ್ದು, ರಾಜ್ಯಪಾಲರ ಸಾಂವಿಧಾನಿಕ ಹುದ್ದೆಯನ್ನು ಬಿಜೆಪಿಯೇತರ ಸರ್ಕಾರಗಳ ವಿರುದ್ಧ ದುರುಪಯೋಗ ಪಡಿಸಿಕೊಳ್ಳುತ್ತಿರುವುದಕ್ಕೆ ಉದಾಹರಣೆ ಎಂದು ತಿಳಿಸಿದ್ದಾರೆ. </p>.<p>ವಿ.ಬಿ. ಗ್ರಾಮ್ ಜಿ ಯಂತಹ ಜನವಿರೋಧಿ ಕಾಯ್ದೆಯನ್ನು ವಾಪಸ್ ಮಾಡಲು ರಾಜ್ಯ ಸರ್ಕಾರ ನಿರ್ಣಯ ಅಂಗೀಕರಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ವಿಧಾನಮಂಡಲ ಅಧಿವೇಶನದಲ್ಲಿ ಓದದೇ ನಿರ್ಗಮಿಸುವ ಮೂಲಕ ಸಂವಿಧಾನವನ್ನು ಉಲ್ಲಂಘಿಸಿದ್ದಾರೆ. ಜನಪ್ರತಿನಿಧಿಗಳ ಸಭೆಗೆ ಅವಮಾನ ಮಾಡಿದ್ದಾರೆ ಎಂದು ‘ಜಾಗೃತ ನಾಗರಿಕರು’ ಆರೋಪಿಸಿದ್ದಾರೆ.</p>.<p>‘ಜಾಗೃತ ನಾಗರಿಕರು’ ಪರವಾಗಿ ಜಿ. ರಾಮಕೃಷ್ಣ, ಕೆ. ಮರುಳಸಿದ್ದಪ್ಪ, ಎಸ್.ಜಿ. ಸಿದ್ದರಾಮಯ್ಯ, ವಿಜಯಾ, ಟಿ.ಸುರೇಂದ್ರ ರಾವ್, ಬಿ. ಶ್ರೀಪಾದ ಭಟ್, ಕೆ.ಎಸ್. ವಿಮಲಾ, ಮಾವಳ್ಳಿ ಶಂಕರ್, ಜಾಣಗೆರೆ ವೆಂಕಟರಾಮಯ್ಯ, ಬಂಜಗೆರೆ ಜಯಪ್ರಕಾಶ್, ರುದ್ರಪ್ಪ ಹನಗವಾಡಿ, ಎನ್. ಗಾಯತ್ರಿ, ವಸುಂಧರಾ ಭೂಪತಿ ಈ ಕುರಿತು ಹೇಳಿಕೆ ನೀಡಿದ್ದಾರೆ.</p>.<p>ಈ ಅಸಹಕಾರ ನಡೆಯ ಮೂಲಕ ಹುದ್ದೆಯ ಘನತೆಗೆ ರಾಜ್ಯಪಾಲರು ಕುಂದು ತಂದಿದ್ದಾರೆ. ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ನಿಯಮದಂತೆ ರಾಜ್ಯಪಾಲರ ಭಾಷಣದ ನಂತರ ನಡೆಯುವ ರಾಷ್ಟ್ರಗೀತೆಗೂ ಕಾಯದೇ ರಾಜ್ಯಪಾಲರು ಹೊರ ನಡೆದು ರಾಷ್ಟ್ರಗೀತೆಗೆ ಅಗೌರವ ಎಸಗಿದ್ದಾರೆ ಎಂದು ದೂರಿದ್ದಾರೆ.</p>.<p>ದೇಶಪ್ರೇಮದ ಬಗ್ಗೆ ಉಪದೇಶ ಮಾಡುವ ಬಿಜೆಪಿ ಶಾಸಕರು, ರಾಜ್ಯಪಾಲರ ಅಸಾಂವಿಧಾನಿಕ ನಡೆಗಳನ್ನು ಸಮರ್ಥನೆ ಮಾಡುತ್ತಿರುವುದು ರಾಜ್ಯಪಾಲರ ನಡೆಯ ಹಿಂದಿನ ದುರುದ್ದೇಶವನ್ನು ಸಮರ್ಥನೆ ಮಾಡುತ್ತದೆ ಎಂದು ಹೇಳಿದ್ದಾರೆ.</p>.<p>ಇದೇ ರೀತಿಯ ಘಟನೆಗಳು ಕೇರಳ ಮತ್ತು ತಮಿಳುನಾಡಿನಲ್ಲಿ ನಡೆದ ಬಗ್ಗೆ ವರದಿಯಾಗಿದ್ದು, ರಾಜ್ಯಪಾಲರ ಸಾಂವಿಧಾನಿಕ ಹುದ್ದೆಯನ್ನು ಬಿಜೆಪಿಯೇತರ ಸರ್ಕಾರಗಳ ವಿರುದ್ಧ ದುರುಪಯೋಗ ಪಡಿಸಿಕೊಳ್ಳುತ್ತಿರುವುದಕ್ಕೆ ಉದಾಹರಣೆ ಎಂದು ತಿಳಿಸಿದ್ದಾರೆ. </p>.<p>ವಿ.ಬಿ. ಗ್ರಾಮ್ ಜಿ ಯಂತಹ ಜನವಿರೋಧಿ ಕಾಯ್ದೆಯನ್ನು ವಾಪಸ್ ಮಾಡಲು ರಾಜ್ಯ ಸರ್ಕಾರ ನಿರ್ಣಯ ಅಂಗೀಕರಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>