<p><strong>ಬೆಂಗಳೂರು:</strong> ಮರಾಠ ಸಮುದಾಯದವರ ಅಭಿವೃದ್ಧಿಗಾಗಿ ‘ಮರಾಠ ಅಭಿವೃದ್ಧಿ ಪ್ರಾಧಿಕಾರ’ ರಚಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ.</p>.<p>ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಈ ಕಾರಣಕ್ಕಾಗಿ ಪ್ರಾಧಿಕಾರ ರಚನೆಗೆ ಸರ್ಕಾರ ತೀರ್ಮಾನಿಸಿದೆ ಎಂದೂ ಹೇಳಲಾಗಿದೆ.</p>.<p>ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಟಿಪ್ಪಣಿ ಕಳುಹಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ‘ರಾಜ್ಯದಲ್ಲಿ ಮರಾಠ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಸಮುದಾಯದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಧಾರ್ಮಿಕ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸಲು ಕ್ರಮ ಕೈಗೊಳ್ಳಿ’ ಎಂದು ಸೂಚಿಸಿದ್ದಾರೆ.</p>.<p>ಸಮುದಾಯವರ ಅಭಿವೃದ್ಧಿಗಾಗಿ ₹50 ಕೋಟಿ ಅನುದಾನ ಮೀಸಲಿಡುವಂತೆ ನಿರ್ದೇಶನ ನೀಡಿದ್ದಾರೆ.</p>.<p><strong>ಚುನಾವಣೆ ಮೇಲೆ ಕಣ್ಣು:</strong> ಬೆಳಗಾವಿಯ ಸಂಸದರಾಗಿದ್ದ ಸುರೇಶ ಅಂಗಡಿ ಅಕಾಲಿಕ ನಿಧನದಿಂದಾಗಿ ಈ ಕ್ಷೇತ್ರಕ್ಕೆ ಚುನಾವಣೆ ನಡೆಯಬೇಕಿದೆ. ಸದ್ಯದಲ್ಲೇ ಉಪಚುನಾವಣೆ ಘೋಷಣೆಯಾಗಲಿದ್ದು, ಕ್ಷೇತ್ರದಲ್ಲಿ ಬಿಜೆಪಿ ಪಾಲಿಗೆ ನಿರ್ಣಾಯಕ ಮತಗಳಂತಿರುವ ಮರಾಠಿಗರ ಮತ ಸೆಳೆಯಲು ಪ್ರಾಧಿಕಾರ ರಚನೆಗೆ ಸರ್ಕಾರ ಮುಂದಾಗಿದೆ ಎಂದೂ ಹೇಳಲಾಗಿದೆ.</p>.<p>ಶಿರಾ ಕ್ಷೇತ್ರದ ಉಪಚುನಾವಣೆ ಹೊತ್ತಿನಲ್ಲಿ ಕಾಡುಗೊಲ್ಲರ ಅಭಿವೃದ್ಧಿ ಮಂಡಳಿ ರಚಿಸಲಾಗಿತ್ತು. ಇದರಿಂದಾಗಿ ಬಿಜೆಪಿಗೆ ದೊಡ್ಡ ಮಟ್ಟದ ಲಾಭವೂ ಆಗಿತ್ತು.</p>.<p>ಚುನಾವಣೆ ಘೋಷಣೆಯಾಗುವ ಮುನ್ನವೇ ಮರಾಠಿ ಪ್ರಾಧಿಕಾರ ರಚಿಸಿ, ಆ ಮತಗಳನ್ನು ಬುಟ್ಟಿಗೆ ಹಾಕಿಕೊಳ್ಳುವುದು ಇದರ ಹಿಂದಿನ ಲೆಕ್ಕಾಚಾರ ಎನ್ನಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮರಾಠ ಸಮುದಾಯದವರ ಅಭಿವೃದ್ಧಿಗಾಗಿ ‘ಮರಾಠ ಅಭಿವೃದ್ಧಿ ಪ್ರಾಧಿಕಾರ’ ರಚಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ.</p>.<p>ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಈ ಕಾರಣಕ್ಕಾಗಿ ಪ್ರಾಧಿಕಾರ ರಚನೆಗೆ ಸರ್ಕಾರ ತೀರ್ಮಾನಿಸಿದೆ ಎಂದೂ ಹೇಳಲಾಗಿದೆ.</p>.<p>ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಟಿಪ್ಪಣಿ ಕಳುಹಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ‘ರಾಜ್ಯದಲ್ಲಿ ಮರಾಠ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಸಮುದಾಯದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಧಾರ್ಮಿಕ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸಲು ಕ್ರಮ ಕೈಗೊಳ್ಳಿ’ ಎಂದು ಸೂಚಿಸಿದ್ದಾರೆ.</p>.<p>ಸಮುದಾಯವರ ಅಭಿವೃದ್ಧಿಗಾಗಿ ₹50 ಕೋಟಿ ಅನುದಾನ ಮೀಸಲಿಡುವಂತೆ ನಿರ್ದೇಶನ ನೀಡಿದ್ದಾರೆ.</p>.<p><strong>ಚುನಾವಣೆ ಮೇಲೆ ಕಣ್ಣು:</strong> ಬೆಳಗಾವಿಯ ಸಂಸದರಾಗಿದ್ದ ಸುರೇಶ ಅಂಗಡಿ ಅಕಾಲಿಕ ನಿಧನದಿಂದಾಗಿ ಈ ಕ್ಷೇತ್ರಕ್ಕೆ ಚುನಾವಣೆ ನಡೆಯಬೇಕಿದೆ. ಸದ್ಯದಲ್ಲೇ ಉಪಚುನಾವಣೆ ಘೋಷಣೆಯಾಗಲಿದ್ದು, ಕ್ಷೇತ್ರದಲ್ಲಿ ಬಿಜೆಪಿ ಪಾಲಿಗೆ ನಿರ್ಣಾಯಕ ಮತಗಳಂತಿರುವ ಮರಾಠಿಗರ ಮತ ಸೆಳೆಯಲು ಪ್ರಾಧಿಕಾರ ರಚನೆಗೆ ಸರ್ಕಾರ ಮುಂದಾಗಿದೆ ಎಂದೂ ಹೇಳಲಾಗಿದೆ.</p>.<p>ಶಿರಾ ಕ್ಷೇತ್ರದ ಉಪಚುನಾವಣೆ ಹೊತ್ತಿನಲ್ಲಿ ಕಾಡುಗೊಲ್ಲರ ಅಭಿವೃದ್ಧಿ ಮಂಡಳಿ ರಚಿಸಲಾಗಿತ್ತು. ಇದರಿಂದಾಗಿ ಬಿಜೆಪಿಗೆ ದೊಡ್ಡ ಮಟ್ಟದ ಲಾಭವೂ ಆಗಿತ್ತು.</p>.<p>ಚುನಾವಣೆ ಘೋಷಣೆಯಾಗುವ ಮುನ್ನವೇ ಮರಾಠಿ ಪ್ರಾಧಿಕಾರ ರಚಿಸಿ, ಆ ಮತಗಳನ್ನು ಬುಟ್ಟಿಗೆ ಹಾಕಿಕೊಳ್ಳುವುದು ಇದರ ಹಿಂದಿನ ಲೆಕ್ಕಾಚಾರ ಎನ್ನಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>