‘ಸರ್ವೇ ನಂಬರ್ 80ರ ಜಮೀನು, ಸರ್ಕಾರಿ ಕರಾಬು ಜಮೀನು. ಈ ಸಂಬಂಧ ಲಭ್ಯವಿರುವ ಸರ್ಕಾರಿ ಕಡತಗಳನ್ನು ಸಂಗ್ರಹಿಸಿ ಅಳತೆ ಮಾಡಿ ವರದಿ ನೀಡಬೇಕಿತ್ತು. ದಾಖಲೆಗಳು ಕಾಣೆಯಾಗಿದ್ದರಿಂದ, ಪುನರ್ ಸೃಷ್ಟಿಸಿ ಅಳತೆ ಮಾಡಬೇಕಿತ್ತು. ಕರ್ತವ್ಯಲೋಪ ಎಸಗಿದ್ದ ಆರೋಪಿ ರಂಗಸ್ವಾಮಿ, ಅರ್ಜಿದಾರರು ನೀಡಿದ್ದ ದಾಖಲೆಗಳನ್ನೇ ಅಂತಿಮವೆಂದು ಪರಿಗಣಿಸಿ ಅಳತೆ ಮಾಡಿ ವರದಿ ಸಲ್ಲಿಸಿದ್ದರು. ಇದರಿಂದಾಗಿ ಸರ್ಕಾರಿ ಜಮೀನು, ಖಾಸಗಿ ವ್ಯಕ್ತಿಗಳ ಪಾಲಾಗಿತ್ತು. ಈ ಅಂಶ ದೂರಿನಲ್ಲಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.