<p><strong>ಬೆಂಗಳೂರು</strong>: ‘ಬಿಬಿಎಂಪಿ 2020–21ನೇ ಸಾಲಿನ ಬಜೆಟ್ನಲ್ಲಿ ನಿರ್ದಿಷ್ಟ ಕಾಮಗಾರಿಗೆ ಕಾಯ್ದಿರಿಸಿದ ಅನುದಾನವನ್ನು ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆಗೆ ಬಳಸಲು ಸರ್ಕಾರದಿಂದ ಮತ್ತೆ ಅನುಮೋದನೆ ಪಡೆಯಬೇಕಾಗುತ್ತದೆ’ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ತಿಳಿಸಿದರು.</p>.<p>ಶಾಲಾ ಕಾಲೇಜುಗಳಲ್ಲಿ ಆನ್ಲೈನ್ ತರಗತಿ ನಡೆಯುತ್ತಿರುವುದರಿಂದ ಬಡ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡುವ ಬಗ್ಗೆ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಇತ್ತೀಚೆಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಅದಕ್ಕೆ ಅನುದಾನ ಬಿಡುಗಡೆ ಆಗಿರಲಿಲ್ಲ.</p>.<p>‘ಪ್ರತಿ ವಾರ್ಡ್ನ 15 ಮಂದಿಗೆ ಲ್ಯಾಪ್ಟಾಪ್ ನೀಡಲು ಪಾಲಿಕೆ ಬಜೆಟ್ನಲ್ಲಿ ₹ 15 ಕೋಟಿ ಅನುದಾನ ಕಾಯ್ದಿರಿಸಲಾಗಿದೆ. ಈ ಅನುದಾನದಲ್ಲಿ ಲ್ಯಾಪ್ಟಾಪ್ ನೀಡಲು ಅಡ್ಡಿ ಇಲ್ಲ. ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಈ ಉದ್ದೇಶಕ್ಕೆ ಬಳಸುವಂತೆ ಶಿಕ್ಷಣ ಸ್ಥಾಯಿ ಸಮಿತಿಯು ನಿರ್ಣಯ ಕೈಗೊಂಡಿದೆ. ಈ ನಿರ್ಣಯ ಜಾರಿಗೊಳಿಸುವುದೆಂದರೆ ಸರ್ಕಾರ ಅನುಮೋದನೆ ನೀಡಿದ್ದ ಬಜೆಟ್ನಲ್ಲಿ ಮಾರ್ಪಾಡು ಮಾಡಿದಂತೆ. ಸರ್ಕಾರದ ಅನುಮತಿ ಇಲ್ಲದೇ ಇಂತಹ ಬದಲಾವಣೆ ಮಾಡಲು ಸಾಧ್ಯವಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬಿಬಿಎಂಪಿ 2020–21ನೇ ಸಾಲಿನ ಬಜೆಟ್ನಲ್ಲಿ ನಿರ್ದಿಷ್ಟ ಕಾಮಗಾರಿಗೆ ಕಾಯ್ದಿರಿಸಿದ ಅನುದಾನವನ್ನು ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆಗೆ ಬಳಸಲು ಸರ್ಕಾರದಿಂದ ಮತ್ತೆ ಅನುಮೋದನೆ ಪಡೆಯಬೇಕಾಗುತ್ತದೆ’ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ತಿಳಿಸಿದರು.</p>.<p>ಶಾಲಾ ಕಾಲೇಜುಗಳಲ್ಲಿ ಆನ್ಲೈನ್ ತರಗತಿ ನಡೆಯುತ್ತಿರುವುದರಿಂದ ಬಡ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡುವ ಬಗ್ಗೆ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಇತ್ತೀಚೆಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಅದಕ್ಕೆ ಅನುದಾನ ಬಿಡುಗಡೆ ಆಗಿರಲಿಲ್ಲ.</p>.<p>‘ಪ್ರತಿ ವಾರ್ಡ್ನ 15 ಮಂದಿಗೆ ಲ್ಯಾಪ್ಟಾಪ್ ನೀಡಲು ಪಾಲಿಕೆ ಬಜೆಟ್ನಲ್ಲಿ ₹ 15 ಕೋಟಿ ಅನುದಾನ ಕಾಯ್ದಿರಿಸಲಾಗಿದೆ. ಈ ಅನುದಾನದಲ್ಲಿ ಲ್ಯಾಪ್ಟಾಪ್ ನೀಡಲು ಅಡ್ಡಿ ಇಲ್ಲ. ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಈ ಉದ್ದೇಶಕ್ಕೆ ಬಳಸುವಂತೆ ಶಿಕ್ಷಣ ಸ್ಥಾಯಿ ಸಮಿತಿಯು ನಿರ್ಣಯ ಕೈಗೊಂಡಿದೆ. ಈ ನಿರ್ಣಯ ಜಾರಿಗೊಳಿಸುವುದೆಂದರೆ ಸರ್ಕಾರ ಅನುಮೋದನೆ ನೀಡಿದ್ದ ಬಜೆಟ್ನಲ್ಲಿ ಮಾರ್ಪಾಡು ಮಾಡಿದಂತೆ. ಸರ್ಕಾರದ ಅನುಮತಿ ಇಲ್ಲದೇ ಇಂತಹ ಬದಲಾವಣೆ ಮಾಡಲು ಸಾಧ್ಯವಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>