<p><strong>ಬೆಂಗಳೂರು:</strong> ನಗರದ ಕೇಂದ್ರ ಕಾರಾಗೃಹದಲ್ಲಿ ಅತಿ ಭದ್ರತಾ ವಾರ್ಡ್ (ಹೈ ಸೆಕ್ಯುರಿಟಿ ವಾರ್ಡ್) ನಿರ್ಮಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.</p>.<p>ಈ ಉದ್ದೇಶಕ್ಕಾಗಿ ₹100 ಕೋಟಿ ಮತ್ತು ವಿಜಯಪುರ ಕಾರಾಗೃಹದಲ್ಲಿ ಹೊಸ ಬ್ಲಾಕ್ ನಿರ್ಮಿಸಲು ₹99.98 ಕೋಟಿ ನೀಡಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.</p>.<p>ಅತಿ ಭದ್ರತಾ ವಾರ್ಡ್ನಲ್ಲಿ ಕುಖ್ಯಾತ ಗೂಂಡಾಗಳು, ಭಯೋತ್ಪಾದಕರು ಮತ್ತು ನಕ್ಸಲೀಯರನ್ನು ಇರಿಸ<br />ಲಾಗುವುದು. ಕೋರ್ಟ್ ಆದೇಶದ ಮೇರೆಗೆ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ಅವರು ವಿವರಿಸಿದರು.</p>.<p>ಬೋಪಯ್ಯ ಅಧ್ಯಕ್ಷ: ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿಯನ್ನು ಪುನರ್ ರಚಿಸಿರುವ ರಾಜ್ಯ ಸರ್ಕಾರ, ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ.</p>.<p>ಹಿಂದೆ ಶಾಸಕ ಎ.ಟಿ.ರಾಮಸ್ವಾಮಿ ಅಧ್ಯಕ್ಷತೆಯ ಸಮಿತಿ ರಚಿಸಲಾಗಿತ್ತು. ಅದನ್ನು ಈಗ ಪುನಾರಚನೆ ಮಾಡಲು ಸಂಪುಟ ಸಭೆ ನಿರ್ಧರಿಸಿದೆ. ನೂತನ ಸಮಿತಿಯಲ್ಲಿ ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಆರ್.ವಿಶ್ವನಾಥ್, ಎ.ಟಿ.ರಾಮಸ್ವಾಮಿ, ರಾಜಶೇಖರ ಬಸವರಾಜ ಪಾಟೀಲ, ರಾಜೂಗೌಡ ಸದಸ್ಯರಾಗಿರುತ್ತಾರೆ. ಒತ್ತುವರಿಯನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಈ ಸಮಿತಿ ಕಾರ್ಯನಿರ್ವಹಿಸಲಿದೆ ಎಂದರು.</p>.<p>2006 ರಲ್ಲಿ ಭೂಕಬಳಿಕೆಗೆ ಸಂಬಂಧಿಸಿ ವರದಿ ನೀಡಲು ಅಂದು ಎ.ಟಿ.ರಾಮಸ್ವಾಮಿ ನೇತೃತ್ವದಲ್ಲಿ ಜಂಟಿ ಸದನ ಸಮಿತಿ ರಚಿಸಲಾಗಿತ್ತು. ಈ ಸಮಿತಿ ವರದಿಯ ಪ್ರಕಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ 13,614.37 ಎಕರೆ ಭೂಮಿ ಒತ್ತುವರಿ ಪತ್ತೆ ಮಾಡಿತ್ತು. ಬಳಿಕ ಒತ್ತುವರಿ ತೆರವಿಗೆ ರಾಮಸ್ವಾಮಿ ನೇತೃತ್ವದ ಸಮಿತಿ ರಚಿಸಲಾಗಿತ್ತು.</p>.<p>lಪೀಣ್ಯದ ಕೆಎಸ್ಎಸ್ಐಡಿಸಿ ಕೈಗಾರಿಕಾ ವಸಾಹತು, ಹುಬ್ಬಳ್ಳಿಯ ಎಂ.ಟಿ.ಸಾಗರ್ ವಸಾಹತುವಿನಲ್ಲಿ ಮೂಲಸೌಕರ್ಯ ಮೇಲ್ದರ್ಜೆಗೇರಿಸಲು ಕ್ರಮವಾಗಿ ₹50 ಕೋಟಿ ಮತ್ತು ₹18 ಕೋಟಿ ನಿಗದಿ.</p>.<p>lಅಕ್ರಮ ಗಣಿಗಾರಿಕೆ ತನಿಖೆಗೆ ಲೋಕಾಯುಕ್ತ ರಚಿಸಿದ್ದ ವಿಶೇಷ ತನಿಖಾ ತಂಡದ ಕಾರ್ಯ ಅವಧಿ ಒಂದು ವರ್ಷಕ್ಕೆ ವಿಸ್ತರಣೆ.</p>.<p>lಚುನಾವಣಾ ಆಯೋಗದ ಇವಿಎಂ ಮತ್ತು ವಿವಿಪ್ಯಾಟ್ಗಳ ಸಂರಕ್ಷಣೆ ಮತ್ತು ಭದ್ರತೆಗಾಗಿ ಎಲ್ಲ ಜಿಲ್ಲೆಗಳಲ್ಲಿ ಗೋದಾಮುಗಳನ್ನು ಸ್ಥಾಪಿಸಲು ₹123 ಕೋಟಿ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ.</p>.<p>lಬೆಂಗಳೂರು ಜಿಲ್ಲೆಯ ಮಾದನಾಯಕನಹಳ್ಳಿ ಗ್ರಾಮ ಪಂಚಾಯಿತಿಯ ಮಾದಾವರ ಮತ್ತು ಸಿದ್ದನ ಹೊಸಹಳ್ಳಿ ಸೇರಿಸಿ ಪುರಸಭೆ ರಚಿಸಲು ತೀರ್ಮಾನ.</p>.<p>lಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಯಲ್ಲಿ 450 ಹಾಸಿಗೆ ಸಾಮರ್ಥ್ಯದ ಮಕ್ಕಳ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ₹132.31 ಕೋಟಿ ಬಿಡುಗಡೆಗೆ ಅನುಮತಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಕೇಂದ್ರ ಕಾರಾಗೃಹದಲ್ಲಿ ಅತಿ ಭದ್ರತಾ ವಾರ್ಡ್ (ಹೈ ಸೆಕ್ಯುರಿಟಿ ವಾರ್ಡ್) ನಿರ್ಮಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.</p>.<p>ಈ ಉದ್ದೇಶಕ್ಕಾಗಿ ₹100 ಕೋಟಿ ಮತ್ತು ವಿಜಯಪುರ ಕಾರಾಗೃಹದಲ್ಲಿ ಹೊಸ ಬ್ಲಾಕ್ ನಿರ್ಮಿಸಲು ₹99.98 ಕೋಟಿ ನೀಡಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.</p>.<p>ಅತಿ ಭದ್ರತಾ ವಾರ್ಡ್ನಲ್ಲಿ ಕುಖ್ಯಾತ ಗೂಂಡಾಗಳು, ಭಯೋತ್ಪಾದಕರು ಮತ್ತು ನಕ್ಸಲೀಯರನ್ನು ಇರಿಸ<br />ಲಾಗುವುದು. ಕೋರ್ಟ್ ಆದೇಶದ ಮೇರೆಗೆ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ಅವರು ವಿವರಿಸಿದರು.</p>.<p>ಬೋಪಯ್ಯ ಅಧ್ಯಕ್ಷ: ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿಯನ್ನು ಪುನರ್ ರಚಿಸಿರುವ ರಾಜ್ಯ ಸರ್ಕಾರ, ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ.</p>.<p>ಹಿಂದೆ ಶಾಸಕ ಎ.ಟಿ.ರಾಮಸ್ವಾಮಿ ಅಧ್ಯಕ್ಷತೆಯ ಸಮಿತಿ ರಚಿಸಲಾಗಿತ್ತು. ಅದನ್ನು ಈಗ ಪುನಾರಚನೆ ಮಾಡಲು ಸಂಪುಟ ಸಭೆ ನಿರ್ಧರಿಸಿದೆ. ನೂತನ ಸಮಿತಿಯಲ್ಲಿ ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಆರ್.ವಿಶ್ವನಾಥ್, ಎ.ಟಿ.ರಾಮಸ್ವಾಮಿ, ರಾಜಶೇಖರ ಬಸವರಾಜ ಪಾಟೀಲ, ರಾಜೂಗೌಡ ಸದಸ್ಯರಾಗಿರುತ್ತಾರೆ. ಒತ್ತುವರಿಯನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಈ ಸಮಿತಿ ಕಾರ್ಯನಿರ್ವಹಿಸಲಿದೆ ಎಂದರು.</p>.<p>2006 ರಲ್ಲಿ ಭೂಕಬಳಿಕೆಗೆ ಸಂಬಂಧಿಸಿ ವರದಿ ನೀಡಲು ಅಂದು ಎ.ಟಿ.ರಾಮಸ್ವಾಮಿ ನೇತೃತ್ವದಲ್ಲಿ ಜಂಟಿ ಸದನ ಸಮಿತಿ ರಚಿಸಲಾಗಿತ್ತು. ಈ ಸಮಿತಿ ವರದಿಯ ಪ್ರಕಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ 13,614.37 ಎಕರೆ ಭೂಮಿ ಒತ್ತುವರಿ ಪತ್ತೆ ಮಾಡಿತ್ತು. ಬಳಿಕ ಒತ್ತುವರಿ ತೆರವಿಗೆ ರಾಮಸ್ವಾಮಿ ನೇತೃತ್ವದ ಸಮಿತಿ ರಚಿಸಲಾಗಿತ್ತು.</p>.<p>lಪೀಣ್ಯದ ಕೆಎಸ್ಎಸ್ಐಡಿಸಿ ಕೈಗಾರಿಕಾ ವಸಾಹತು, ಹುಬ್ಬಳ್ಳಿಯ ಎಂ.ಟಿ.ಸಾಗರ್ ವಸಾಹತುವಿನಲ್ಲಿ ಮೂಲಸೌಕರ್ಯ ಮೇಲ್ದರ್ಜೆಗೇರಿಸಲು ಕ್ರಮವಾಗಿ ₹50 ಕೋಟಿ ಮತ್ತು ₹18 ಕೋಟಿ ನಿಗದಿ.</p>.<p>lಅಕ್ರಮ ಗಣಿಗಾರಿಕೆ ತನಿಖೆಗೆ ಲೋಕಾಯುಕ್ತ ರಚಿಸಿದ್ದ ವಿಶೇಷ ತನಿಖಾ ತಂಡದ ಕಾರ್ಯ ಅವಧಿ ಒಂದು ವರ್ಷಕ್ಕೆ ವಿಸ್ತರಣೆ.</p>.<p>lಚುನಾವಣಾ ಆಯೋಗದ ಇವಿಎಂ ಮತ್ತು ವಿವಿಪ್ಯಾಟ್ಗಳ ಸಂರಕ್ಷಣೆ ಮತ್ತು ಭದ್ರತೆಗಾಗಿ ಎಲ್ಲ ಜಿಲ್ಲೆಗಳಲ್ಲಿ ಗೋದಾಮುಗಳನ್ನು ಸ್ಥಾಪಿಸಲು ₹123 ಕೋಟಿ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ.</p>.<p>lಬೆಂಗಳೂರು ಜಿಲ್ಲೆಯ ಮಾದನಾಯಕನಹಳ್ಳಿ ಗ್ರಾಮ ಪಂಚಾಯಿತಿಯ ಮಾದಾವರ ಮತ್ತು ಸಿದ್ದನ ಹೊಸಹಳ್ಳಿ ಸೇರಿಸಿ ಪುರಸಭೆ ರಚಿಸಲು ತೀರ್ಮಾನ.</p>.<p>lಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಯಲ್ಲಿ 450 ಹಾಸಿಗೆ ಸಾಮರ್ಥ್ಯದ ಮಕ್ಕಳ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ₹132.31 ಕೋಟಿ ಬಿಡುಗಡೆಗೆ ಅನುಮತಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>