ಹಿಂದೆ ಶಾಸಕ ಎ.ಟಿ.ರಾಮಸ್ವಾಮಿ ಅಧ್ಯಕ್ಷತೆಯ ಸಮಿತಿ ರಚಿಸಲಾಗಿತ್ತು. ಅದನ್ನು ಈಗ ಪುನಾರಚನೆ ಮಾಡಲು ಸಂಪುಟ ಸಭೆ ನಿರ್ಧರಿಸಿದೆ. ನೂತನ ಸಮಿತಿಯಲ್ಲಿ ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಆರ್.ವಿಶ್ವನಾಥ್, ಎ.ಟಿ.ರಾಮಸ್ವಾಮಿ, ರಾಜಶೇಖರ ಬಸವರಾಜ ಪಾಟೀಲ, ರಾಜೂಗೌಡ ಸದಸ್ಯರಾಗಿರುತ್ತಾರೆ. ಒತ್ತುವರಿಯನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಈ ಸಮಿತಿ ಕಾರ್ಯನಿರ್ವಹಿಸಲಿದೆ ಎಂದರು.