ಕೌನ್ಸಿಲ್ ಸಭೆಯ ನಿರ್ಣಯದೊಂದಿಗೆ ನಗರಾಭಿವೃದ್ಧಿ ಇಲಾಖೆಗೆ ಸೆಪ್ಟೆಂಬರ್ 22ರಂದು ಪ್ರಸ್ತಾವ ಸಲ್ಲಿಸಿದ್ದ ಬಿಬಿಎಂಪಿ ಆಯುಕ್ತರು, ವೃತ್ತಕ್ಕೆ ಮಧುಕರ್ ಶೆಟ್ಟಿ ಅವರ ಹೆಸರಿಡಲು ಅನುಮತಿ ಕೋರಿದ್ದರು. ಡಿಸೆಂಬರ್ 15ರಂದು ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿರುವ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಸ್ತಾವವನ್ನು ಸರ್ಕಾರ ಒಪ್ಪಿರುವುದಿಲ್ಲ ಎಂದು ತಿಳಿಸಿದ್ದಾರೆ.