<p><strong>ಬೆಂಗಳೂರು: </strong>‘ಕೂಲಿ ಹಾಗೂ ಕಟ್ಟಡ ಕಾರ್ಮಿಕರು ನಗರದಿಂದ ಗುಳೆ ಹೋಗುತ್ತಿದ್ದಾರೆ. ಅವರ ಮೂಲಕ ಕೊರೊನಾ ಸೋಂಕು ಇತರ ಊರುಗಳಿಗೂ ಹಬ್ಬುವ ಸಾಧ್ಯತೆ ಇದೆ. ಹಾಗಾಗಿ ಅವರು ಹೊರಹೋಗುವುದನ್ನು ತಡೆಯಲು ಕಠಿಣ ಕ್ರಮ ಕೈಗೊಂಡಿದ್ದೇವೆ’ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು.</p>.<p>ವಲಸೆ ಕಟ್ಟಡ ಕಾರ್ಮಿಕರ ಸಮಸ್ಯೆ ಬಗ್ಗೆ ಚರ್ಚಿಸಲು ಕಾನ್ಫೆಡರೇಷನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಷನ್ (ಕ್ರೆಡೈ) ಹಾಗೂ ಬಿಲ್ಡರ್ಗಳ ಇತರ ಸಂಸ್ಥೆಗಳ ಜೊತೆ ಮಂಗಳವಾರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ನಗರದಲ್ಲಿ 1 ಲಕ್ಷಕ್ಕೂ ಅಧಿಕ ಕೂಲಿ ಕಾರ್ಮಿಕರಿದ್ದಾರೆ. ಯಾವುದೇ ಕಾರಣಕ್ಕೂ ಊರಿಗೆ ತೆರಳಲು ಅವರಿಗೆ ಅವಕಾಶ ಕೊಡಬಾರದು. ಅವರು ಟೆಂಪೊ ಹಾಗೂ ಟ್ರ್ಯಾಕ್ಟರ್ಗಳ ಮೂಲಕ ಗುಂಪುಗುಂಪಾಗಿ ಹೋಗುವುದನ್ನು ತಡೆಯಬೇಕು. ಅಂತಹ ವಾಹನಗಳನ್ನೂ ಜಪ್ತಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ’ ಎಂದರು.</p>.<p>‘ಕಾರ್ಮಿಕರನ್ನು ನಗರದಲ್ಲಿಯೇ ಉಳಿಸಿಕೊಂಡು ಅವರಿಗೆ ವಸತಿ ಸೌಲಭ್ಯ ಒದಗಿಸಲಿದ್ದೇವೆ. ಈ ಸಲುವಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಖಾತೆಗೆ ₹25 ಕೋಟಿ ಬಿಡುಗಡೆ ಮಾಡಲಾಗಿದೆ. ಅವರ ಖಾತೆಯಲ್ಲಿ ಸದ್ಯ ₹ 34 ಕೋಟಿ ಲಭ್ಯ ಇದೆ. ಕಲ್ಯಾಣಮಂಟಪಗಳಲ್ಲಿ, ತುಮಕೂರು ರಸ್ತೆಯ ಬಳಿಯ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಮೈದಾನದಲ್ಲಿ ಅವರಿಗೆ ವಸತಿ, ಊಟ ಹಾಗೂ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ’ ಎಂದರು.</p>.<p>ಲಾಲ್ಬಾಗ್, ಕಬ್ಬನ್ ಉದ್ಯಾನ ಸೇರಿದಂತೆ ಇನ್ನಿತರ ಉದ್ಯಾನಗಳಲ್ಲಿ ಹಾಗೂ ಬಯಲು ಪ್ರದೇಶಗಳಲ್ಲಿ ಪಕ್ಷಿಗಳಿಗೆ ಆಹಾರ ವಿತರಿಸಲಾಗುವುದು ಎಂದರು.</p>.<p><strong>‘ಕಾರ್ಮಿಕರ ಹೊರದಬ್ಬಿದರೆ ಮಾಲೀಕರ ಬಂಧನ’</strong><br />‘ಶೆಡ್ ಬಿಟ್ಟು ತೆರಳಲು ನಿರ್ಮಾಣ ಹಂತದ ಕಟ್ಟಡ ಮಾಲೀಕರು ಒತ್ತಾಯ ಮಾಡಿದರೆ ಕೂಡಲೇ ದೂರು ಕೊಡಿ. ಅಂತಹ ಮಾಲೀಕರನ್ನು ಬಂಧಿಸಲಾಗುವುದು’ ಎಂದು ಕಂದಾಯ ಸಚಿವ ಅಶೋಕ ಅವರು ತಿಳಿಸಿದರು.</p>.<p>‘ಕಾರ್ಮಿಕರು ಶೆಡ್ ಬಿಟ್ಟು ಹೊರಹೋಗದಂತೆ ಕಾಮಗಾರಿಗಳ ಗುತ್ತಿಗೆದಾರರು ಹಾಗೂ ಡೆವಲಪರ್ಗಳೇ ನೋಡಿಕೊಳ್ಳಬೇಕು. ಅವರ ಖರ್ಚುವೆಚ್ಚವನ್ನು ಭರಿಸಬೇಕು. ಅವರನ್ನು ಹೊರದಬ್ಬಿದರೆ, ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುತ್ತೇವೆ. ಕಟ್ಟಡಕ್ಕೆ ನೀಡಿರುವ ಪರವಾನಗಿ ರದ್ದುಪಡಿಸುತ್ತೇವೆ’ ಎಂದು ಅವರು ಎಚ್ಚರಿಕೆ ನೀಡಿದರು.</p>.<p>ಮನೆ ಬಿಡುವಂತೆ ಬಾಡಿಗೆದಾರರ ಮೇಲೆ ಮಾಲೀಕರು ಒತ್ತಡ ಹೇರಬಾರದು ಎಂದೂ ಸಚಿವರು ಸೂಚಿಸಿದರು.</p>.<p><strong>‘ನೇರವಾಗಿ ಊಟದ ಪೊಟ್ಟಣ ಹಂಚದಿರಿ’</strong><br />‘ಸ್ವಯಂಸೇವಾ ಸಂಸ್ಥೆಗಳು ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವವರಿಗೆ ಊಟದ ಪೊಟ್ಟಣಗಳನ್ನು ನೇರವಾಗಿ ಹಂಚುತ್ತಿವೆ. ಆ ರೀತಿ ಮಾಡದೆ, ಹತ್ತಿರ ಪೊಲೀಸ್ ಠಾಣೆಗೆ ಅಥವಾ ಕಂದಾಯ ಅಧಿಕಾರಿ ಕಚೇರಿಗೆ ಊಟವನ್ನು ತಲುಪಿಸಿ. ಅದರ ವಿತರಣೆಗೆ ಅವರೇ ಕ್ರಮವಹಿಸಲಿದ್ದಾರೆ’ ಎಂದು ಅಶೋಕ ತಿಳಿಸಿದರು.</p>.<p>‘ಪರಿಹಾರ ಕಾರ್ಯಕ್ಕೆ ದೇಣಿಗೆ ನೀಡುವವರು ಯಾವುದೇ ಖಾಸಗಿ ಖಾತೆಗಳಿಗೆ ಹಣ ಜಮೆ ಮಾಡಬೇಡಿ. ನೇರವಾಗಿ ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ ನೀಡಿ’ ಎಂದು ಸಲಹೆ ನೀಡಿದರು.</p>.<p>**<br />ಕೊರೊನಾ ಸೋಂಕು ತಡೆಗಟ್ಟುವ ಕಾರ್ಯಕ್ಕೆ ನೆರವಾಗುವ ನಿಟ್ಟಿನಲ್ಲಿ ಸಚಿವನಾಗಿ ನನಗೆ ಸಿಗುವ ವೇತನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡುತ್ತೇನೆ<br /><em><strong>-ಆರ್.ಅಶೋಕ, ಕಂದಾಯ ಸಚಿವ</strong></em></p>.<p>*<br />ಕಾರ್ಮಿಕರಿಗೆ ಊಟ ವಸತಿ ಒದಗಿಸಲು ಸಂಸ್ಥೆಯ ಸಿಬ್ಬಂದಿಗೆ ಪಾಸ್ ನೀಡುತ್ತೇವೆ. ಕಾರ್ಮಿಕರು ವಿನಾಕಾರಣ ಓಡಾಡಿದರೆ ಸಂಸ್ಥೆ ವಿರುದ್ಧ ಕ್ರಮಕೈಗೊಳ್ಳುತ್ತೇವೆ.<br /><em><strong>-ಬಿ.ಎಚ್.ಅನಿಲ್ಕುಮಾರ್, ಬಿಬಿಎಂಪಿ ಆಯುಕ್ತ</strong></em></p>.<p>*<br />ಪಾಲಿಕೆಯ ಎಲ್ಲಾ ಸದಸ್ಯರ ಮೂರು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ಕ್ರಮ ವಹಿಸಲಾಗಿದೆ.<br /><em><strong>-ಎಂ.ಗೌತಮ್ ಕುಮಾರ್, ಮೇಯರ್</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಕೂಲಿ ಹಾಗೂ ಕಟ್ಟಡ ಕಾರ್ಮಿಕರು ನಗರದಿಂದ ಗುಳೆ ಹೋಗುತ್ತಿದ್ದಾರೆ. ಅವರ ಮೂಲಕ ಕೊರೊನಾ ಸೋಂಕು ಇತರ ಊರುಗಳಿಗೂ ಹಬ್ಬುವ ಸಾಧ್ಯತೆ ಇದೆ. ಹಾಗಾಗಿ ಅವರು ಹೊರಹೋಗುವುದನ್ನು ತಡೆಯಲು ಕಠಿಣ ಕ್ರಮ ಕೈಗೊಂಡಿದ್ದೇವೆ’ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು.</p>.<p>ವಲಸೆ ಕಟ್ಟಡ ಕಾರ್ಮಿಕರ ಸಮಸ್ಯೆ ಬಗ್ಗೆ ಚರ್ಚಿಸಲು ಕಾನ್ಫೆಡರೇಷನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಷನ್ (ಕ್ರೆಡೈ) ಹಾಗೂ ಬಿಲ್ಡರ್ಗಳ ಇತರ ಸಂಸ್ಥೆಗಳ ಜೊತೆ ಮಂಗಳವಾರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ನಗರದಲ್ಲಿ 1 ಲಕ್ಷಕ್ಕೂ ಅಧಿಕ ಕೂಲಿ ಕಾರ್ಮಿಕರಿದ್ದಾರೆ. ಯಾವುದೇ ಕಾರಣಕ್ಕೂ ಊರಿಗೆ ತೆರಳಲು ಅವರಿಗೆ ಅವಕಾಶ ಕೊಡಬಾರದು. ಅವರು ಟೆಂಪೊ ಹಾಗೂ ಟ್ರ್ಯಾಕ್ಟರ್ಗಳ ಮೂಲಕ ಗುಂಪುಗುಂಪಾಗಿ ಹೋಗುವುದನ್ನು ತಡೆಯಬೇಕು. ಅಂತಹ ವಾಹನಗಳನ್ನೂ ಜಪ್ತಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ’ ಎಂದರು.</p>.<p>‘ಕಾರ್ಮಿಕರನ್ನು ನಗರದಲ್ಲಿಯೇ ಉಳಿಸಿಕೊಂಡು ಅವರಿಗೆ ವಸತಿ ಸೌಲಭ್ಯ ಒದಗಿಸಲಿದ್ದೇವೆ. ಈ ಸಲುವಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಖಾತೆಗೆ ₹25 ಕೋಟಿ ಬಿಡುಗಡೆ ಮಾಡಲಾಗಿದೆ. ಅವರ ಖಾತೆಯಲ್ಲಿ ಸದ್ಯ ₹ 34 ಕೋಟಿ ಲಭ್ಯ ಇದೆ. ಕಲ್ಯಾಣಮಂಟಪಗಳಲ್ಲಿ, ತುಮಕೂರು ರಸ್ತೆಯ ಬಳಿಯ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಮೈದಾನದಲ್ಲಿ ಅವರಿಗೆ ವಸತಿ, ಊಟ ಹಾಗೂ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ’ ಎಂದರು.</p>.<p>ಲಾಲ್ಬಾಗ್, ಕಬ್ಬನ್ ಉದ್ಯಾನ ಸೇರಿದಂತೆ ಇನ್ನಿತರ ಉದ್ಯಾನಗಳಲ್ಲಿ ಹಾಗೂ ಬಯಲು ಪ್ರದೇಶಗಳಲ್ಲಿ ಪಕ್ಷಿಗಳಿಗೆ ಆಹಾರ ವಿತರಿಸಲಾಗುವುದು ಎಂದರು.</p>.<p><strong>‘ಕಾರ್ಮಿಕರ ಹೊರದಬ್ಬಿದರೆ ಮಾಲೀಕರ ಬಂಧನ’</strong><br />‘ಶೆಡ್ ಬಿಟ್ಟು ತೆರಳಲು ನಿರ್ಮಾಣ ಹಂತದ ಕಟ್ಟಡ ಮಾಲೀಕರು ಒತ್ತಾಯ ಮಾಡಿದರೆ ಕೂಡಲೇ ದೂರು ಕೊಡಿ. ಅಂತಹ ಮಾಲೀಕರನ್ನು ಬಂಧಿಸಲಾಗುವುದು’ ಎಂದು ಕಂದಾಯ ಸಚಿವ ಅಶೋಕ ಅವರು ತಿಳಿಸಿದರು.</p>.<p>‘ಕಾರ್ಮಿಕರು ಶೆಡ್ ಬಿಟ್ಟು ಹೊರಹೋಗದಂತೆ ಕಾಮಗಾರಿಗಳ ಗುತ್ತಿಗೆದಾರರು ಹಾಗೂ ಡೆವಲಪರ್ಗಳೇ ನೋಡಿಕೊಳ್ಳಬೇಕು. ಅವರ ಖರ್ಚುವೆಚ್ಚವನ್ನು ಭರಿಸಬೇಕು. ಅವರನ್ನು ಹೊರದಬ್ಬಿದರೆ, ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುತ್ತೇವೆ. ಕಟ್ಟಡಕ್ಕೆ ನೀಡಿರುವ ಪರವಾನಗಿ ರದ್ದುಪಡಿಸುತ್ತೇವೆ’ ಎಂದು ಅವರು ಎಚ್ಚರಿಕೆ ನೀಡಿದರು.</p>.<p>ಮನೆ ಬಿಡುವಂತೆ ಬಾಡಿಗೆದಾರರ ಮೇಲೆ ಮಾಲೀಕರು ಒತ್ತಡ ಹೇರಬಾರದು ಎಂದೂ ಸಚಿವರು ಸೂಚಿಸಿದರು.</p>.<p><strong>‘ನೇರವಾಗಿ ಊಟದ ಪೊಟ್ಟಣ ಹಂಚದಿರಿ’</strong><br />‘ಸ್ವಯಂಸೇವಾ ಸಂಸ್ಥೆಗಳು ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವವರಿಗೆ ಊಟದ ಪೊಟ್ಟಣಗಳನ್ನು ನೇರವಾಗಿ ಹಂಚುತ್ತಿವೆ. ಆ ರೀತಿ ಮಾಡದೆ, ಹತ್ತಿರ ಪೊಲೀಸ್ ಠಾಣೆಗೆ ಅಥವಾ ಕಂದಾಯ ಅಧಿಕಾರಿ ಕಚೇರಿಗೆ ಊಟವನ್ನು ತಲುಪಿಸಿ. ಅದರ ವಿತರಣೆಗೆ ಅವರೇ ಕ್ರಮವಹಿಸಲಿದ್ದಾರೆ’ ಎಂದು ಅಶೋಕ ತಿಳಿಸಿದರು.</p>.<p>‘ಪರಿಹಾರ ಕಾರ್ಯಕ್ಕೆ ದೇಣಿಗೆ ನೀಡುವವರು ಯಾವುದೇ ಖಾಸಗಿ ಖಾತೆಗಳಿಗೆ ಹಣ ಜಮೆ ಮಾಡಬೇಡಿ. ನೇರವಾಗಿ ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ ನೀಡಿ’ ಎಂದು ಸಲಹೆ ನೀಡಿದರು.</p>.<p>**<br />ಕೊರೊನಾ ಸೋಂಕು ತಡೆಗಟ್ಟುವ ಕಾರ್ಯಕ್ಕೆ ನೆರವಾಗುವ ನಿಟ್ಟಿನಲ್ಲಿ ಸಚಿವನಾಗಿ ನನಗೆ ಸಿಗುವ ವೇತನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡುತ್ತೇನೆ<br /><em><strong>-ಆರ್.ಅಶೋಕ, ಕಂದಾಯ ಸಚಿವ</strong></em></p>.<p>*<br />ಕಾರ್ಮಿಕರಿಗೆ ಊಟ ವಸತಿ ಒದಗಿಸಲು ಸಂಸ್ಥೆಯ ಸಿಬ್ಬಂದಿಗೆ ಪಾಸ್ ನೀಡುತ್ತೇವೆ. ಕಾರ್ಮಿಕರು ವಿನಾಕಾರಣ ಓಡಾಡಿದರೆ ಸಂಸ್ಥೆ ವಿರುದ್ಧ ಕ್ರಮಕೈಗೊಳ್ಳುತ್ತೇವೆ.<br /><em><strong>-ಬಿ.ಎಚ್.ಅನಿಲ್ಕುಮಾರ್, ಬಿಬಿಎಂಪಿ ಆಯುಕ್ತ</strong></em></p>.<p>*<br />ಪಾಲಿಕೆಯ ಎಲ್ಲಾ ಸದಸ್ಯರ ಮೂರು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ಕ್ರಮ ವಹಿಸಲಾಗಿದೆ.<br /><em><strong>-ಎಂ.ಗೌತಮ್ ಕುಮಾರ್, ಮೇಯರ್</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>