ಹಿಂದೆ ಕೆಲವು ಸಂಘ ಸಂಸ್ಥೆಗಳು, ಕ್ಲಬ್ಗಳು, ಹೋಟೆಲ್ಗಳಿಗೆ ಕಂದಾಯ ಇಲಾಖೆಯ ಜಮೀನನ್ನು ಕೆಲವೇ ರುಪಾಯಿಗಳಿಗೆ ಗುತ್ತಿಗೆ ನೀಡಲಾಗಿತ್ತು. ಅದರಿಂದ ಸರ್ಕಾರಕ್ಕೆ ಆದಾಯವೂ ಬರುತ್ತಿಲ್ಲ. ಭೂಮಿಯನ್ನು ಬಿಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆರ್ಥಿಕವಾಗಿ ಸಂಕಷ್ಟದ ಈ ಸಂದರ್ಭದಲ್ಲಿ ಜಮೀನು ಮಾರಿದರೆ ಆದಾಯ ಸಿಗುತ್ತದೆ ಎಂಬ ಸಲಹೆ ಸಭೆಯಲ್ಲಿ ವ್ಯಕ್ತವಾಯಿತು.