<p>ಬೆಂಗಳೂರು: ನಗರದಲ್ಲಿ ಈ ಹಿಂದೆ ಕಂದಾಯ ಇಲಾಖೆಗೆ ಸೇರಿದ ಜಮೀನನ್ನು ಕಡಿಮೆ ಬೆಲೆಗೆ ಕೆಲವು ಸಂಘಸಂಸ್ಥೆಗಳಿಗೆ ಗುತ್ತಿಗೆ ನೀಡಿದ್ದು, ಅವುಗಳನ್ನು ಈಗಿನ ಮಾರುಕಟ್ಟೆಗೆ ಬೆಲೆಗೆ ಮಾರಾಟ ಮಾಡುವ ಬಗ್ಗೆ ಚಿಂತನೆ ನಡೆದಿದೆ.</p>.<p>ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದೆ. ಆದರೆ, ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.</p>.<p>ಹಿಂದೆ ಕೆಲವು ಸಂಘ ಸಂಸ್ಥೆಗಳು, ಕ್ಲಬ್ಗಳು, ಹೋಟೆಲ್ಗಳಿಗೆ ಕಂದಾಯ ಇಲಾಖೆಯ ಜಮೀನನ್ನು ಕೆಲವೇ ರುಪಾಯಿಗಳಿಗೆ ಗುತ್ತಿಗೆ ನೀಡಲಾಗಿತ್ತು. ಅದರಿಂದ ಸರ್ಕಾರಕ್ಕೆ ಆದಾಯವೂ ಬರುತ್ತಿಲ್ಲ. ಭೂಮಿಯನ್ನು ಬಿಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆರ್ಥಿಕವಾಗಿ ಸಂಕಷ್ಟದ ಈ ಸಂದರ್ಭದಲ್ಲಿ ಜಮೀನು ಮಾರಿದರೆ ಆದಾಯ ಸಿಗುತ್ತದೆ ಎಂಬ ಸಲಹೆ ಸಭೆಯಲ್ಲಿ ವ್ಯಕ್ತವಾಯಿತು.</p>.<p>ಕೆಲವು ಪ್ರಮುಖ ಸಂಸ್ಥೆಗಳು, ಕ್ಲಬ್ಗಳು ಮತ್ತು ಹೋಟೆಲ್ಗಳು ಭಾರಿ ಲಾಭವನ್ನು ಮಾಡುತ್ತಿವೆ. ಸರ್ಕಾರಕ್ಕೆ ಇವುಗಳಿಂದ ಯಾವುದೇ ಆದಾಯವಿಲ್ಲ. ಈಗಿನ ಮಾರುಕಟ್ಟೆ ಬೆಲೆಗೆ ಮಾರಿದರೆ ಸಾವಿರಾರು ಕೋಟಿ ಆದಾಯ ಬರುತ್ತದೆ ಎಂಬುದು ಚರ್ಚೆಯಲ್ಲಿ ಕೇಳಿ ಬಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗರದಲ್ಲಿ ಈ ಹಿಂದೆ ಕಂದಾಯ ಇಲಾಖೆಗೆ ಸೇರಿದ ಜಮೀನನ್ನು ಕಡಿಮೆ ಬೆಲೆಗೆ ಕೆಲವು ಸಂಘಸಂಸ್ಥೆಗಳಿಗೆ ಗುತ್ತಿಗೆ ನೀಡಿದ್ದು, ಅವುಗಳನ್ನು ಈಗಿನ ಮಾರುಕಟ್ಟೆಗೆ ಬೆಲೆಗೆ ಮಾರಾಟ ಮಾಡುವ ಬಗ್ಗೆ ಚಿಂತನೆ ನಡೆದಿದೆ.</p>.<p>ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದೆ. ಆದರೆ, ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.</p>.<p>ಹಿಂದೆ ಕೆಲವು ಸಂಘ ಸಂಸ್ಥೆಗಳು, ಕ್ಲಬ್ಗಳು, ಹೋಟೆಲ್ಗಳಿಗೆ ಕಂದಾಯ ಇಲಾಖೆಯ ಜಮೀನನ್ನು ಕೆಲವೇ ರುಪಾಯಿಗಳಿಗೆ ಗುತ್ತಿಗೆ ನೀಡಲಾಗಿತ್ತು. ಅದರಿಂದ ಸರ್ಕಾರಕ್ಕೆ ಆದಾಯವೂ ಬರುತ್ತಿಲ್ಲ. ಭೂಮಿಯನ್ನು ಬಿಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆರ್ಥಿಕವಾಗಿ ಸಂಕಷ್ಟದ ಈ ಸಂದರ್ಭದಲ್ಲಿ ಜಮೀನು ಮಾರಿದರೆ ಆದಾಯ ಸಿಗುತ್ತದೆ ಎಂಬ ಸಲಹೆ ಸಭೆಯಲ್ಲಿ ವ್ಯಕ್ತವಾಯಿತು.</p>.<p>ಕೆಲವು ಪ್ರಮುಖ ಸಂಸ್ಥೆಗಳು, ಕ್ಲಬ್ಗಳು ಮತ್ತು ಹೋಟೆಲ್ಗಳು ಭಾರಿ ಲಾಭವನ್ನು ಮಾಡುತ್ತಿವೆ. ಸರ್ಕಾರಕ್ಕೆ ಇವುಗಳಿಂದ ಯಾವುದೇ ಆದಾಯವಿಲ್ಲ. ಈಗಿನ ಮಾರುಕಟ್ಟೆ ಬೆಲೆಗೆ ಮಾರಿದರೆ ಸಾವಿರಾರು ಕೋಟಿ ಆದಾಯ ಬರುತ್ತದೆ ಎಂಬುದು ಚರ್ಚೆಯಲ್ಲಿ ಕೇಳಿ ಬಂದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>