ಹರಿಹರ ತಾಲ್ಲೂಕಿನ ಬೈರನಪಾದ ಏತ ನೀರಾವರಿ ಯೋಜನೆ ಕಾಮಗಾರಿಗೆ ತ್ವರಿತವಾಗಿ ಚಾಲನೆ ನೀಡಬೇಕೆಂಬ ಹರೀಶ್ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಭದ್ರಾ ಮೇಲ್ದಂಡೆ ಯೋಜನೆಗೆ ₹ 5,000 ಕೋಟಿ ಅನುದಾನ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ಘೋಷಿಸಿದ್ದರು. ಆ ಅನುದಾನ ದೊರೆತರೆ ಯೋಜನೆ ಪೂರ್ಣಗೊಳಿಸಬಹುದು. ಎಲ್ಲರೂ ಒಟ್ಟಾಗಿ ದೆಹಲಿಗೆ ಹೋಗಿ ಒತ್ತಾಯಿಸೋಣ’ ಎಂದರು.