‘2,000 ಅಧಿಕಾರಿಗಳು, ಸಿಬ್ಬಂದಿಯ ನಿಯೋಜನೆ ಕೋರಿರುವ ಮನವಿಗಳು ಇಲಾಖೆಯ ಮುಂದಿವೆ. ಆದರೆ, ಯಾವುದನ್ನೂ ನಾನು ಒಪ್ಪಿಕೊಂಡಿಲ್ಲ. ಈ ಕಾರಣಕ್ಕಾಗಿ ನಮ್ಮ ಪಕ್ಷದ ಶಾಸಕರು ಕೂಡ ನನ್ನ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಕಂದಾಯ ಇಲಾಖೆಯ ಕೆಲಸಗಳು ನಡೆಯುವುದು ನನಗೆ ಮುಖ್ಯ. ಪ್ರತಿ ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ಐದು ಅಧಿಕಾರಿಗಳು, ಸಿಬ್ಬಂದಿಯ ನಿಯೋಜನೆಗಷ್ಟೇ ಜಿಲ್ಲಾಧಿಕಾರಿಗಳಿಗೆ ಅವಕಾಶ ನೀಡಲಾಗುವುದು’ ಎಂದರು.