ಹೊಸ ಅರ್ಜಿ ಸ್ವೀಕರಿಸಲು ಆಗ್ರಹ:
ರಾಜ್ಯದಲ್ಲಿ ದೀರ್ಘ ಸಮಯದಿಂದ ಬಿಪಿಎಲ್ ಪಡಿತರ ಚೀಟಿಗಳಿಗೆ ಅರ್ಜಿ ಸ್ವೀಕರಿಸಿಲ್ಲ. ಇದರಿಂದ ಅರ್ಹ ಕುಟುಂಬಗಳಿಗೆ ಅನ್ಯಾಯವಾಗುತ್ತಿದೆ. ವೈದ್ಯಕೀಯ ಚಿಕಿತ್ಸೆಗಳಿಗೆ ನೆರವು ಪಡೆಯುವುದಕ್ಕೂ ಸಮಸ್ಯೆಯಾಗಿದೆ. ಆದ್ದರಿಂದ ಹೊಸ ಅರ್ಜಿ ಸ್ವೀಕರಿಸಲು ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಆಗ್ರಹಿಸಿದರು. ಬಿಜೆಪಿ ಮತ್ತು ಕಾಂಗ್ರೆಸ್ನ ಹಲವರು ದನಿಗೂಡಿಸಿದರು.