<p><strong>ಕೆಂಗೇರಿ:</strong> ಪ್ರಸಕ್ತ ಶೈಕ್ಷಣಿಕ ವ್ಯವಸ್ಥೆಯಡಿ ವೃತ್ತಿಪರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ದೊರೆಯುತ್ತಿರುವುದು ಅಭಿವೃದ್ಧಿ ಪರ ಬೆಳವಣಿಗೆಯಾಗಿದೆ ಎಂದು ಹ್ಯುಲೆಟ್ ಪ್ಯಾಕರ್ಡ್ ಎಂಟರ್ ಪ್ರೈಸಸ್ ನ ಆರ್ ಆ್ಯಂಡ್ ಡಿ ನಿರ್ದೇಶಕ ಧರ್ಮೇಂದ್ರ ಅಭಿಪ್ರಾಯಪಟ್ಟರು.</p>.<p>ಮಲ್ಲತ್ತಹಳ್ಳಿಯಲ್ಲಿನ ಡಾ.ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಮೊದಲನೇ ವರ್ಷದ ಬಿ.ಇ ತರಗತಿಗಳ ಉದ್ಘಾಟನಾ ಸಮಾರಂಭ ಹಾಗೂ 12ನೇ ವರ್ಷದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮೊದಲ ಪ್ರಯತ್ನದಲ್ಲೇ ಫಲಿತಾಂಶ ಸಿಕ್ಕರೆ ಅನ್ವೇಷಣಾ ಸಾಮರ್ಥ್ಯ ಕುಂಠಿತಗೊಳ್ಳುವ ಅಪಾಯವಿದೆ. ತಪ್ಪುಗಳನ್ನು ಮಾಡುವುದರಿಂದಲೇ ಕಲಿಯಲು ಸಾಧ್ಯ. ಕುತೂಹಲ ಹೆಚ್ಚಿದ್ದಷ್ಟು ಮತ್ತಷ್ಟು ಕಲಿಕೆ ಸಾಧ್ಯವಾಗಲಿದೆ ಎಂದು ಹೇಳಿದರು.</p>.<p>ಪಿವಿಪಿ ಟ್ರಸ್ಟ್ ಕಾರ್ಯದರ್ಶಿ ಡಾ.ಎಂ.ಮಹದೇವ ಮಾತನಾಡಿ, ‘ಉನ್ನತ ಶಿಕ್ಷಣ ಸಂಸ್ಥೆಗಳು ಉದ್ಯಮಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸಬೇಕಿದೆ. ಮಕ್ಕಳ ಭವಿಷ್ಯಕ್ಕೆ ಲಕ್ಷಾಂತರ ರೂಪಾಯಿ ವ್ಯಯಿಸುವ ಪೋಷಕರು, ಅವರ ನಿತ್ಯದ ಚಟುವಟಿಕೆಗಳ ಮೇಲೂ ನಿಗಾ ವಹಿಸಬೇಕು . ಮಕ್ಕಳು ಸಹ ಪೋಷಕರ ನಿರೀಕ್ಷೆಗಳನ್ನು ಪೂರೈಸಬೇಕು. ಅವರ ವೃದ್ಧಾಪ್ಯದಲ್ಲಿ ಆಸರೆಯಾಗಬೇಕು ಎಂದು ಕಿವಿ ಮಾತು ಹೇಳಿದರು.</p>.<p>ಐ ಬಿ ಎಂ ಸೇಲ್ಸ್ ಫೋರ್ಸ್ ಪ್ರಾಕ್ಟೀಸ್ ಲೀಡರ್ ಪಾಲುದಾರರಾದ ವಿಜಯಾ ರಾಮನ್ ಮಾತನಾಡಿ, ‘ ಕಲಿಕಾ ಪ್ರವೃತ್ತಿಯನ್ನು ಜೀವನ ಪರ್ಯಂತ ಕಾಪಿಟ್ಟುಕೊಳ್ಳಬೇಕು’ ಎಂದರು.</p>.<p>ಇದೇ ವೇಳೆ ಎಂಜಿನಿಯರಿಂಗ್ನ ವಿವಿಧ ವಿಭಾಗದ ಸ್ನಾತಕ ಹಾಗೂ ಸ್ನಾತಕೋತ್ತರ ತರಗತಿಗಳ ಒಟ್ಟು 1062 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.</p>.<p>ಪಿವಿಪಿ ಟ್ರಸ್ಟ್ ಅಧ್ಯಕ್ಷ ಎಸ್.ಮರಿಸ್ವಾಮಿ, ಟ್ರಸ್ಟಿ ಎಸ್.ಶಿವಮಲ್ಲು, ಡಾ.ಎಂ.ಎನ್.ತಿಪ್ಪೇಸ್ವಾಮಿ, ಡಾ.ಕೆ.ಎನ್.ಅನುರಾಧ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ:</strong> ಪ್ರಸಕ್ತ ಶೈಕ್ಷಣಿಕ ವ್ಯವಸ್ಥೆಯಡಿ ವೃತ್ತಿಪರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ದೊರೆಯುತ್ತಿರುವುದು ಅಭಿವೃದ್ಧಿ ಪರ ಬೆಳವಣಿಗೆಯಾಗಿದೆ ಎಂದು ಹ್ಯುಲೆಟ್ ಪ್ಯಾಕರ್ಡ್ ಎಂಟರ್ ಪ್ರೈಸಸ್ ನ ಆರ್ ಆ್ಯಂಡ್ ಡಿ ನಿರ್ದೇಶಕ ಧರ್ಮೇಂದ್ರ ಅಭಿಪ್ರಾಯಪಟ್ಟರು.</p>.<p>ಮಲ್ಲತ್ತಹಳ್ಳಿಯಲ್ಲಿನ ಡಾ.ಅಂಬೇಡ್ಕರ್ ತಾಂತ್ರಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಮೊದಲನೇ ವರ್ಷದ ಬಿ.ಇ ತರಗತಿಗಳ ಉದ್ಘಾಟನಾ ಸಮಾರಂಭ ಹಾಗೂ 12ನೇ ವರ್ಷದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮೊದಲ ಪ್ರಯತ್ನದಲ್ಲೇ ಫಲಿತಾಂಶ ಸಿಕ್ಕರೆ ಅನ್ವೇಷಣಾ ಸಾಮರ್ಥ್ಯ ಕುಂಠಿತಗೊಳ್ಳುವ ಅಪಾಯವಿದೆ. ತಪ್ಪುಗಳನ್ನು ಮಾಡುವುದರಿಂದಲೇ ಕಲಿಯಲು ಸಾಧ್ಯ. ಕುತೂಹಲ ಹೆಚ್ಚಿದ್ದಷ್ಟು ಮತ್ತಷ್ಟು ಕಲಿಕೆ ಸಾಧ್ಯವಾಗಲಿದೆ ಎಂದು ಹೇಳಿದರು.</p>.<p>ಪಿವಿಪಿ ಟ್ರಸ್ಟ್ ಕಾರ್ಯದರ್ಶಿ ಡಾ.ಎಂ.ಮಹದೇವ ಮಾತನಾಡಿ, ‘ಉನ್ನತ ಶಿಕ್ಷಣ ಸಂಸ್ಥೆಗಳು ಉದ್ಯಮಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸಬೇಕಿದೆ. ಮಕ್ಕಳ ಭವಿಷ್ಯಕ್ಕೆ ಲಕ್ಷಾಂತರ ರೂಪಾಯಿ ವ್ಯಯಿಸುವ ಪೋಷಕರು, ಅವರ ನಿತ್ಯದ ಚಟುವಟಿಕೆಗಳ ಮೇಲೂ ನಿಗಾ ವಹಿಸಬೇಕು . ಮಕ್ಕಳು ಸಹ ಪೋಷಕರ ನಿರೀಕ್ಷೆಗಳನ್ನು ಪೂರೈಸಬೇಕು. ಅವರ ವೃದ್ಧಾಪ್ಯದಲ್ಲಿ ಆಸರೆಯಾಗಬೇಕು ಎಂದು ಕಿವಿ ಮಾತು ಹೇಳಿದರು.</p>.<p>ಐ ಬಿ ಎಂ ಸೇಲ್ಸ್ ಫೋರ್ಸ್ ಪ್ರಾಕ್ಟೀಸ್ ಲೀಡರ್ ಪಾಲುದಾರರಾದ ವಿಜಯಾ ರಾಮನ್ ಮಾತನಾಡಿ, ‘ ಕಲಿಕಾ ಪ್ರವೃತ್ತಿಯನ್ನು ಜೀವನ ಪರ್ಯಂತ ಕಾಪಿಟ್ಟುಕೊಳ್ಳಬೇಕು’ ಎಂದರು.</p>.<p>ಇದೇ ವೇಳೆ ಎಂಜಿನಿಯರಿಂಗ್ನ ವಿವಿಧ ವಿಭಾಗದ ಸ್ನಾತಕ ಹಾಗೂ ಸ್ನಾತಕೋತ್ತರ ತರಗತಿಗಳ ಒಟ್ಟು 1062 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.</p>.<p>ಪಿವಿಪಿ ಟ್ರಸ್ಟ್ ಅಧ್ಯಕ್ಷ ಎಸ್.ಮರಿಸ್ವಾಮಿ, ಟ್ರಸ್ಟಿ ಎಸ್.ಶಿವಮಲ್ಲು, ಡಾ.ಎಂ.ಎನ್.ತಿಪ್ಪೇಸ್ವಾಮಿ, ಡಾ.ಕೆ.ಎನ್.ಅನುರಾಧ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>